Homeಕರ್ನಾಟಕಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ: ಎಸ್.ಐ.ಓ ಆಗ್ರಹ

ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ: ಎಸ್.ಐ.ಓ ಆಗ್ರಹ

ಚರ್ಚೆಗಳ ಆಧಾರದ ಮೇಲೆ ನಮ್ಮ ರಾಜ್ಯಕ್ಕೆ ಅನುವಾಗುವ "ಕರ್ನಾಟಕ ಶಿಕ್ಷಣ ನೀತಿ"(ಕಶಿನೀ) ರೂಪಿಸುವುದು ಸೂಕ್ತವೆಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ವಿವಾದಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ಯನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿಗೊಳಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಘೋಷಿಸಿರುವ ಬೆನ್ನಲ್ಲೇ, ಜಾರಿಗೂ ಮುನ್ನ ರಾಜ್ಯ ಅಧಿವೇಶನದಲ್ಲಿ NEP-2020 ಚರ್ಚೆಯಾಗಲಿ ಎಂದು ಎಸ್.ಐ.ಓ ಆಗ್ರಹಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಕೆಲವು ಅಂಶಗಳು ಗೊಂದಲಕಾರಿಯಾಗಿದ್ದು ಅವುಗಳನ್ನು ಮರೆಮಾಚುವ ಮತ್ತು ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಅದನ್ನು ಜಾರಿಗೊಳಿಸಲು ಹೊರಟಿದೆ ಎಂಬ ಆರೋಪಗಳು ಕೇಳಿಬರುತ್ತಿರುವಾಗ ಈ ಕುರಿತು ಸಮರ್ಪಕ ಚರ್ಚೆಯಾಗಲಿ ಎಂದು ಸಂಘಟನೆ ಒತ್ತಾಯಿಸಿದೆ.

ಈ ರಾಷ್ಟ್ರೀಯ ಶಿಕ್ಷಣ ನೀತಿಯು 3 ವರ್ಷದ ಮಕ್ಕಳಿಂದ 18 ವರ್ಷದ ಮಕ್ಕಳಿಗೆ ಸಂಬಂಧಿಸಿದಂತೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನೂ ಒಳಗೊಂಡಂತೆ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸುವಾಗ ಅದರ ಪೂರ್ಣ ಪಠ್ಯ ಸ್ಥಳೀಯ ಭಾಷೆಯಲ್ಲಿ ದೊರಕಿ ಎಲ್ಲರಿಗೂ ತಿಳಿಯುವಂತಾಗಬೇಕು ಎಂದು sio ಅಧ್ಯಕ್ಷರಾದ ನಿಹಾಲ್ ಕಿದಿಯೂರು ಒತ್ತಾಯಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯಿದೆ ಕಲಂ 6, 9, 21 ಹಾಗು 22 ರ ಅನ್ವಯ ಶಾಲಾ ಮತ್ತು ಪಂಚಾಯತಿ ಹಂತದಲ್ಲಿ ಶಾಲಾ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ಮತ್ತು ಗ್ರಾಮ ಪಂಚಾಯತಿಗಳ ಮೇಲಿರುವುದರಿಂದ ನೀತಿಯನ್ನು ಸಾರ್ವಜನಿಕರ ಓದಿಗೆ ಮತ್ತು ಚರ್ಚೆಗೆ ಅವಕಾಶ ನೀಡಿ ನಂತರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸುವುದು ಬಹಳ ಮುಖ್ಯವಾಗುತ್ತದೆ. ಮೂಲ ವಾರಸುದಾರರಾದ ನಾವು ನಮ್ಮ ಮಕ್ಕಳ ಶಿಕ್ಷಣವನ್ನು ಹೇಗೆ ರೂಪಿಸಲಾಗಿದೆ ಎಂಬುದನ್ನು ತಿಳಿಯದೆ ಅದನ್ನು ಜಾರಿಗೊಳಿಸುವುದು ಪ್ರಜಾಸತ್ತಾತ್ಮಕವಾಗಿ ಸರಿಯಾದ ಪ್ರಕ್ರಿಯೆಯಲ್ಲ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವುದರಿಂದ , ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡಲೇ ಜನ ಸ್ನೇಹಿ ಕೈಪಿಡಿಯನ್ನು ಸಾರ್ವಜನಿಕರಿಗೆ ಲಭ್ಯವಾಗಿಸಿ ಶಾಲೆ, ಪಂಚಾಯತಿ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಹಂತದಲ್ಲಿ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ಈ ಚರ್ಚೆಗಳ ಆಧಾರದ ಮೇಲೆ ನಮ್ಮ ರಾಜ್ಯಕ್ಕೆ ಅನುವಾಗುವ “ಕರ್ನಾಟಕ ಶಿಕ್ಷಣ ನೀತಿ”(ಕಶಿನೀ) ರೂಪಿಸುವುದು ಸೂಕ್ತವೆಂದು ಸಂಘಟನೆ ತಿಳಿಸಿದೆ.


ಇದನ್ನೂ ಓದಿ: NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...