Homeಮುಖಪುಟಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಸುಶಾಂತ್ ಸಾವಿನ ತನಿಖೆಯನ್ನು ವರದಿ ಮಾಡುವಲ್ಲಿ ಸಂಯಮ ವಹಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮಾಧ್ಯಮಗಳಿಗೆ ನಿರ್ದೇಶನ ನೀಡಿತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳ ವರದಿಗಳು ಕೇವಲ ಊಹೆಯಾಗಿದ್ದು, ಅವು ಸತ್ಯವನ್ನು ಆಧರಿಸಿಲ್ಲ ಎಂದು ಸಿಬಿಐ ಹೇಳಿದೆ. ಸುಶಾಂತ್ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ವಹಿಸಿಕೊಂಡ ನಂತರದ ಅದರ ತನಿಖೆ ಕುರಿತಂತ ಮೊದಲ ಹೇಳಿಕೆ ಇದಾಗಿದೆ.

“ಸಿಬಿಐ ವ್ಯವಸ್ಥಿತ ಮತ್ತು ವೃತ್ತಿಪರವಾಗಿ ತನಿಖೆ ನಡೆಸುತ್ತಿದೆ. ಇದರ ಕುರಿತಂತೆ ಮಾಧ್ಯಮಗಳು ಮಾಡುತ್ತಿರುವ ವರದಿಗಳು ಕೇವಲ ಊಹೆಯಾಗಿದೆ. ಸಿಬಿಐ ನಿಯಮದಂತೆ, ಪ್ರಕರಣದ ಪ್ರಸ್ತುತ ತನಿಖೆ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸಲಾಗುವುದಿಲ್ಲ” ಎಂದು ಆಯೋಗದ ವಕ್ತಾರರು ತಿಳಿಸಿದ್ದಾರೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

“ನಮ್ಮ ತಂಡದ ಸದಸ್ಯರು ತನಿಖೆಯ ಯಾವುದೇ ವಿವರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿಲ್ಲ. ಹಾಗಾಗಿ ತನಿಖೆಯ ಕುರಿತು ವರದಿ ಮಾಡಲಾದ ಮತ್ತು ಆರೋಪಿಸಲಾದ ವಿವರಗಳು ವಿಶ್ವಾಸಾರ್ಹವಲ್ಲ” ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ಸುಶಾಂತ್, ಮುಂಬೈನ ಅವರದೇ ಅಪಾರ್ಟ್ಮೆಂಟ್‌ನಲ್ಲಿ ಜೂನ್ 14 ರಂದು ಶವವಾಗಿ ಪತ್ತೆಯಾಗಿದ್ದರು. ಇದು ಆತ್ಮಹತ್ಯೆ ಎಂದು ಮುಂಬೈ ಪೊಲೀಸರು ತಿಳಿಸಿದ್ದರು. ಜೊತೆಗೆ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿತ್ತು.

ಒಂದು ತಿಂಗಳ ನಂತರ, ಸುಶಾಂತ್ ಅವರ ತಂದೆ ಕೆ.ಕೆ.ಸಿಂಗ್ ಅವರು, ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬವು ತನ್ನ ಮಗನನ್ನು ಹಣಕಾಸಿನ ವಿಷಯದಲ್ಲಿ ಮೋಸ ಮಾಡಿದ್ದಾರೆ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಹಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಮುಂಬೈ ಪೊಲೀಸರು ‘ಆಕಸ್ಮಿಕ ಸಾವು’ ಮಾತ್ರ ಎಂದು ವರದಿ ದಾಖಲಿಸಿದ್ದರಿಂದ, ಅದು ಸೀಮಿತ ತನಿಖಾ ವ್ಯಾಪ್ತಿಯನ್ನು ಹೊಂದಿದೆ. ಆದರೆ, ಬಿಹಾರ ಪೊಲೀಸರು “ಪೂರ್ಣ ಪ್ರಮಾಣದ ಎಫ್ಐಆರ್” ಅನ್ನು ದಾಖಲಿಸಿದ್ದಾರೆ. ಹಾಗಾಗಿ ಇದನ್ನು ಸಿಬಿಐಗೆ ವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಈಗ ರಜಪೂತ ತಂದೆ ಕೆ.ಕೆ.ಸಿಂಗ್ ಅವರ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣವನ್ನು ಸಿಬಿಐ ಪರಿಶೀಲಿಸುತ್ತಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯವೂ ನಟನ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

ಸುಶಾಂತ್ ಸಾವಿನ ತನಿಖೆಯನ್ನು ವರದಿ ಮಾಡುವಲ್ಲಿ ಸಂಯಮ ವಹಿಸುವಂತೆ ಬಾಂಬೆ ಹೈಕೋರ್ಟ್ ಗುರುವಾರ ಮಾಧ್ಯಮಗಳಿಗೆ ನಿರ್ದೇಶನ ನೀಡಿತು.

ಹಲವಾರು ಟಿವಿ ಸುದ್ದಿ ವಾಹಿನಿಗಳು ನಟ ರಿಯಾ ಚಕ್ರವರ್ತಿಯನ್ನು ಗುರಿಯಾಗಿಸಿಕೊಂಡಿದೆ. ಪ್ರಸ್ತುತ ಸುಶಾಂತ್ ಸಾವಿನಲ್ಲಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿ. ಆದರೆ ರಿಯಾ ಚಕ್ರವರ್ತಿ “ಸುಶಾಂತ್ ಕುಟುಂಬವು ಅವನನ್ನು ಮಾದಕ ದ್ರವ್ಯ ಸೇವಿಸುವಂತೆ ಮಾಡಿ ಆತ್ಮಹತ್ಯೆಗೆ ದೂಡಿದೆ” ಎಂದು ಆರೋಪಿಸಿದ್ದಾರೆ.

ಭಾನುವಾರ, ನೆಟ್ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, “ಮಾಧ್ಯಮಗಳೂ ಸಹ ಚಕ್ರವರ್ತಿಯನ್ನು ಗುರಿಯಾಗಿಸಿಕೊಂಡಿದೆ” ಎಂದು ಟೀಕಿಸಿ, ತನಿಖಾ ಅಧಿಕಾರಿಗಳಿಗೆ ತಮ್ಮ ಕೆಲಸವನ್ನು ನ್ಯಾಯಯುತವಾಗಿ ಮಾಡಲು ಅವಕಾಶ ನೀಡಬೇಕು ಎಂದು ಹೇಳಿತ್ತು.

ಕಳೆದ ವಾರ, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮಾಧ್ಯಮ ಸಂಸ್ಥೆಗಳಿಗೆ “ಪತ್ರಿಕೋದ್ಯಮ ಮಾನದಂಡಗಳನ್ನು ಅನುಸರಿಸಲು, ಸೂಕ್ಷ್ಮತೆಯ ವಿಷಯಗಳ ವರದಿಯಿಂದ ದೂರವಿರಲು ಮತ್ತು ಈ ಪ್ರಕರಣದಲ್ಲಿ ವಿಚಾರಣೆ ನಡೆಸದಂತೆ” ಸಲಹೆ ನೀಡಿತ್ತು.


ಇದನ್ನೂ ಓದಿ: ನಟ ಸುಶಾಂತ್ ಸಿಂಗ್ ಸಾವಿನ ತನಿಖೆ ಸಿಬಿಐಗೆ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...