Homeಮುಖಪುಟಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕಿ ಇಂದಿರಾ ಹೃದಯೇಶ್ ಹೇಳಿದ್ದಾರೆ.

- Advertisement -
- Advertisement -

ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತರಾಖಂಡದ ಶಾಸಕರಾದ ಉಮೇಶ್ ಶರ್ಮಾ ಕೌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಉತ್ತರಾಖಂಡ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ. ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧ ಹಲವರು ಪತ್ರ ಸಮರ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಮತ್ತೊಬ್ಬ ಶಾಸಕ ಸೇರಿದ್ದಾರೆ.

ಉತ್ತರಾಖಂಡದ ವಿಧಾನಸಭೆಯಲ್ಲಿ ಡೆಹ್ರಾಡೂನ್ ಜಿಲ್ಲೆಯ ರಾಯಪುರ ಕ್ಷೇತ್ರವನ್ನು ಪ್ರತಿನಿಧಿಸುವ ಉಮೇಶ್ ಶರ್ಮಾ ಕೌ, ಕಳೆದ ಕೆಲವು ವರ್ಷಗಳಿಂದ ತಮ್ಮ ವಿಧಾನಸಭಾ ವಿಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಇದೇ ರೀತಿ ಚುನಾಯಿತ ಶಾಸಕರನ್ನು ಅಧಿಕಾರಶಾಹಿಗಳು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ಮತ್ತೊಬ್ಬ ಶಾಸಕ ಮತ್ತು ಉತ್ತರಾಖಂಡದ ಮಾಜಿ ಬಿಜೆಪಿ ಮುಖ್ಯಸ್ಥ ಬಿಶನ್ ಸಿಂಗ್ ಚುಫಾಲ್ ಕೂಡ  ಅವರ ಕುಂದುಕೊರತೆಗಳಿಗೆ ಪರಿಹಾರ ಕೋರಿ ನಡ್ಡಾ ಅವರನ್ನು ಭೇಟಿಯಾಗಿದ್ದರು.

ಇನ್ನು ತಮ್ಮ ಕ್ಷೇತ್ರದ ತೊಂದರೆಗಳ ಬಗ್ಗೆ ವಿವರವಾಗಿ ತಿಳಿಸುವ ಉದ್ದೇಶದಿಂದ ನಡ್ಡಾ ಅವರೊಂದಿಗೆ ಸಮಯ ಕೋರಿದ್ದು, ರಾಯ್‌ಪುರದ ನಿರ್ಲಕ್ಷ್ಯದ ಬಗ್ಗೆ ಅವರ ಪಕ್ಷದ ಕಾರ್ಯಕರ್ತರು ತೀವ್ರವಾಗಿ ದುಖಿಃತರಾಗಿದ್ದಾರೆ ಎಂದು ಒತ್ತಿಹೇಳಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಅಭಿವೃದ್ಧಿ ಕೆಲಸ ಮಾಡದ ರಾಜ್ಯ ಸರ್ಕಾರದ ಬಗ್ಗೆ ಬೇಸರವಿದೆ ಎಂದು ತಮ್ಮ ಪತ್ರದಲ್ಲಿ ಉಮೇಶ್ ಶರ್ಮಾ ಕೌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಪತ್ರದ ಸಾರಾಂಶ ಹಂಚಿಕೊಂಡ ಶಾಸಕ ನಾನು ನನ್ನ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಇಮೇಲ್ ಮೂಲಕ ಕಳುಹಿಸಿದ್ದೇನೆ. ಇದು ನಮ್ಮ ಕುಟುಂಬದ ವಿಷಯ. ನಾನು ಮಾಧ್ಯಮದಲ್ಲಿ ಇದರ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮಾತಾಡಿದ್ದಾರೆ.

ವಿಶೇಷವಾಗಿ ರಸ್ತೆಗಳು ಮತ್ತು ಮೊಬೈಲ್ ಫೋನ್ ಸಂಪರ್ಕದ ಬಗ್ಗೆ ನಡ್ಡಾ ಅವರೊಂದಿಗೆ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಚುಫಲ್ ಹೇಳಿದರು. ನಡ್ಡಾ ಅವರು ನನ್ನ ಮಾತುಗಳನ್ನು ಕೇಳಿಸಿಕೊಂಡಿದ್ದಾರೆ. 2022 ರ ಉತ್ತರಾಖಂಡ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಎಲ್ಲಾ ಸದಸ್ಯರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜ್ಯ ಸರ್ಕಾರದಲ್ಲಿ ಸದ್ಯ ಮೂರು ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಿಎಂ ತಿಳಿಸಿದ್ದರು. ಕೌ ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಆರೋಪವಿದೆ.

ಇದನ್ನೂ ಓದಿ: ಪ್ರಜಾತಂತ್ರದ ವಿಸ್ತರಣೆ ಮತ್ತು ಧ್ರುವೀಕರಣ: ಚಳವಳಿಗಳ ಗೆಲುವು ಮತ್ತು ಸೋಲು

“ನಾನು ಕ್ಯಾಬಿನೆಟ್‌ನಲ್ಲಿ ಸೇರ್ಪಡೆಗೊಳ್ಳಲು ಬಯಸಿದರೆ, 2017 ರಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾನು ಧ್ವನಿ ಎತ್ತುತ್ತಿದ್ದೆ. ನಾನು ಈಗ ಅದನ್ನು ಏಕೆ ಬಯಸಬೇಕು? ನಾನು ರಾಜ್ಯ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಬಗೆಗಳಲ್ಲಿ ಪಕ್ಷಕ್ಕೆ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ನಾನು ನನ್ನ ಕ್ಷೇತ್ರದ ಸಮಸ್ಯೆಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಇದನ್ನು ನಾನು ಮುಖ್ಯಮಂತ್ರಿಯ ವಿರುದ್ಧದ ಷಡ್ಯಂತ್ರ ಅಥವಾ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಲು ನಾನು ಒತ್ತಡ ಹೇರುತ್ತಿದ್ದೇನೆ ಎಂದು ನೋಡಬಾರದು ಎಂದಿದ್ದಾರೆ.

ಇತ್ತ ಚಂಪಾವತ್ ಜಿಲ್ಲೆಯ ಲೋಹಘಾಟ್‌ನ ಮತ್ತೊಬ್ಬ ಬಿಜೆಪಿ ಶಾಸಕ ಪುರಾನ್ ಸಿಂಗ್ ಫರ್ತ್ಯಾಲ್ ಕೂಡ ರಾಜ್ಯ ಸರ್ಕಾರದ ವಿರುದ್ಧ ಕೆಲವು ವಾರಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಪತ್ರ ಬರೆದಿದ್ದರು.

ಆದರೆ ಉತ್ತರಾಖಂಡ ರಾಜ್ಯ ಸರ್ಕಾರ ಮಾತ್ರ ಪತ್ರ ವ್ಯವಹಾರವನ್ನು ಕಡೆಗಣಿಸಿದಂತೆ ನಾಟಕವಾಡುತ್ತಾ, ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ. ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ರಾವತ್ ನಾಯಕತ್ವವನ್ನು ಯಾರು ಪ್ರಶ್ನಿಸಿಲ್ಲ ಎಂದು ರಾಜ್ಯ ಉಪಾಧ್ಯಕ್ಷ  ದೇವೇಂದ್ರ ಭಾಸಿನ್ ಹೇಳಿದ್ದಾರೆ.

ಕೆಲ ಕೆಲವು ಶಾಸಕರು ನಡ್ಡಾ ಅವರನ್ನು ಭೇಟಿ ಮಾಡಿದರೆ ಅಥವಾ ತಮ್ಮ ಕ್ಷೇತ್ರಗಳಲ್ಲಿನ ಕೆಲವು ಸಮಸ್ಯೆಗಳ ಬಗ್ಗೆ ಅವರಿಗೆ ಪತ್ರ ಬರೆದಿದ್ದರೆ ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಬಾರದು. ಶಾಸಕರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಂದಿಗೆ ಸಂವಹನ ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ. ಅದರಲ್ಲಿ ಏನು ತಪ್ಪಾಗಿದೆ?  ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು,  ಸಾರ್ವಜನಿಕರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಮತ್ತು ತನ್ನದೇ ಪಕ್ಷದ ಶಾಸಕರನ್ನು ಸಮಾಧಾನಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.

ವಿಪಕ್ಷ ನಾಯಕಿ ಇಂದಿರಾ ಹೃದಯೇಶ್,  ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ  ಎಂದಿದ್ದಾರೆ. ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಮಾತ್ರ ಇರುವುದರಿಂದ ಅವರು ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಇದೆ ಎಂದು ಹಲವಾರು ಶಾಸಕರು ಆತಂಕಗೊಳಗಾಗಿದ್ದಾರೆ. ಹಾಗಾಗಿ ಶಾಸಕರು ನಿದ್ರೆಯಿಂದ ಎಚ್ಚರಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ನಿರಾಸಕ್ತಿ ಮತ್ತು ನಿರ್ದಯತೆಗೆ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ:ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...