Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...