HomeಮುಖಪುಟIPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಬಿಜೆಪಿ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದಿನ ಮೋದಿಯವರ ಮಾತುಗಳನ್ನು ನೇರಪ್ರಸಾರ ಮಾಡಿದರೂ ಸಹ ಲೈಕ್ಸ್‌, ಡಿಸ್‌ಲೈಕ್ಸ್‌ ಗಳ ಸಂಖ್ಯೆ ಎಷ್ಟು ಎಂದು ತೋರಿಸದಂತೆ ತಡೆಹಿಡಿಯಲಾಗಿದೆ.

- Advertisement -
- Advertisement -

IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿದ್ದಾರೆ. ಆದರೆ ನರೇಂದ್ರ ಮೋದಿಯವರ ಯೂಟ್ಯೂಬ್‌ನಲ್ಲಿನ ನೇರ ಪ್ರಸಾರದ ವಿಡಿಯೋಗೆ ಲೈಕ್‌ಗಳಿಗಿಂತ ಡಿಸ್‌ಲೈಕ್ಸ್‌ಗಳ ಸಂಖ್ಯೆ ಹೆಚ್ಚಾಗಿದ್ದು ಮತ್ತೊಮ್ಮೆ ಪ್ರಧಾನಿಗಳನ್ನು ಮುಜುಗರಕ್ಕೀಡುಮಾಡಿದೆ.

ಈ ವರದಿ ಬರೆಯುವ ವೇಳೆಗೆ 20,000 ಲೈಕ್ಸ್‌ ಇದ್ದರೆ 24,000 ಡಿಸ್‌ಲೈಕ್ಸ್‌ ದಾಖಲಾಗಿವೆ. ಮೊನ್ನೆ ಮನ್‌ ಕಿ ಬಾತ್ ಕಾರ್ಯಕ್ರಮಕ್ಕೆ ಹತ್ತು ಲಕ್ಷಕ್ಕೂ ಡಿಸ್‌ಲೈಕ್ಸ್‌ಗಳು ದಾಖಲಾಗಿ ದೊಡ್ಡ ಚರ್ಚೆ ಎಬ್ಬಿಸಿದ್ದವು.

ಡಿಸ್‌ಲೈಕ್ಸ್ ತೋರಿಸದಂತೆ ತಡೆದ ಬಿಜೆಪಿ

ಇನ್ನು ಬಿಜೆಪಿ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದಿನ ಮೋದಿಯವರ ಮಾತುಗಳನ್ನು ನೇರಪ್ರಸಾರ ಮಾಡಿದರೂ ಸಹ ಲೈಕ್ಸ್‌, ಡಿಸ್‌ಲೈಕ್ಸ್‌ ಗಳ ಸಂಖ್ಯೆ ಎಷ್ಟು ಎಂದು ತೋರಿಸದಂತೆ ತಡೆಹಿಡಿಯಲಾಗಿದೆ. ಅಲ್ಲಿಯೂ ನಿಸ್ಸಂದೇಹವಾಗಿ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿರಲಿದ್ದು ಅದನ್ನು ತೋರ್ಪಡಿಸಬಾರದೆಂದು ಅವುಗಳ ಸಂಖ್ಯೆ ಕಾಣದಂತೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒತ್ತಡದಲ್ಲಿ ಕಾರ್ಯನಿರ್ವಹಿಸುವ ಐಪಿಎಸ್ ಅಧಿಕಾರಿಳ ಒತ್ತಡವನ್ನು ನಿವಾರಿಸಲು ಯೋಗ ಮತ್ತು ಪ್ರಾಣಾಯಾಮಗಳು ಉತ್ತಮ ಮಾರ್ಗಗಳಾಗಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಶುಕ್ರವಾರ(ಸೆ.4) ಪ್ರಧಾನಿ ಮೋದಿ ವಿಡಿಯೊ ಸಂವಾದ ನಡೆಸಿದರು.

ತರಬೇತಿ ಮುಗಿಸಿದ ಯುವ ಐಪಿಎಸ್ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಪ್ರತಿ ವರ್ಷ ಸಂವಾದ ನಡೆಸುತ್ತಿದೆ. ಆದರೆ ಕೊರೊನಾದಿಂದಾಗಿ ಈ ಬಾರಿ ಸಾಧ್ಯವಾಗಿಲ್ಲ. ಖಂಡಿತ ಒಮ್ಮೆ ನಿಮ್ಮೆಲ್ಲರನ್ನೂ ಭೇಟಿಯಾಗುತ್ತೆ ಎಂದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಜನರು ಪೊಲೀಸರ ಮಾನವೀಯತೆಯನ್ನು ಕಂಡಿದ್ದಾರೆ. ಹೀಗೆ ಜಮ್ಮು-ಕಾಶ್ಮೀರದ ಯುವಕರು ಭಯೋತ್ಪಾದನೆಗೆ ತೆರಳದಂತೆ ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಪ್ರಧಾನಿ ಸಲಹೆ ನೀಡಿದರು.

ಆದರೆ ಇತ್ತಿಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಪ್ರಖ್ಯಾತಿ ಕಡಿಮೆಯಾಗುತ್ತಿರುವ ಬಗ್ಗೆ, ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೊಡ್ಡ ಸುದ್ದಿಯಾಗಿತ್ತು. ಇಂದು ಕೂಡ ಡಿಸ್‌ಲೈಕ್‌ಗಳ ಸಮರ ಮುಂದುವರೆದಿದೆ. ಪ್ರಧಾನಿ ಮೋದಿಯವರ ಇಂದಿನ ವಿಡಿಯೋ ಕೂಡ 24 ಸಾವಿರ ಡಿಸ್‌ಲೈಕ್‌ಗಳನ್ನು ಪಡೆದಿದ್ದು, ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ:10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...