HomeಮುಖಪುಟIPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಬಿಜೆಪಿ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದಿನ ಮೋದಿಯವರ ಮಾತುಗಳನ್ನು ನೇರಪ್ರಸಾರ ಮಾಡಿದರೂ ಸಹ ಲೈಕ್ಸ್‌, ಡಿಸ್‌ಲೈಕ್ಸ್‌ ಗಳ ಸಂಖ್ಯೆ ಎಷ್ಟು ಎಂದು ತೋರಿಸದಂತೆ ತಡೆಹಿಡಿಯಲಾಗಿದೆ.

- Advertisement -
- Advertisement -

IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿದ್ದಾರೆ. ಆದರೆ ನರೇಂದ್ರ ಮೋದಿಯವರ ಯೂಟ್ಯೂಬ್‌ನಲ್ಲಿನ ನೇರ ಪ್ರಸಾರದ ವಿಡಿಯೋಗೆ ಲೈಕ್‌ಗಳಿಗಿಂತ ಡಿಸ್‌ಲೈಕ್ಸ್‌ಗಳ ಸಂಖ್ಯೆ ಹೆಚ್ಚಾಗಿದ್ದು ಮತ್ತೊಮ್ಮೆ ಪ್ರಧಾನಿಗಳನ್ನು ಮುಜುಗರಕ್ಕೀಡುಮಾಡಿದೆ.

ಈ ವರದಿ ಬರೆಯುವ ವೇಳೆಗೆ 20,000 ಲೈಕ್ಸ್‌ ಇದ್ದರೆ 24,000 ಡಿಸ್‌ಲೈಕ್ಸ್‌ ದಾಖಲಾಗಿವೆ. ಮೊನ್ನೆ ಮನ್‌ ಕಿ ಬಾತ್ ಕಾರ್ಯಕ್ರಮಕ್ಕೆ ಹತ್ತು ಲಕ್ಷಕ್ಕೂ ಡಿಸ್‌ಲೈಕ್ಸ್‌ಗಳು ದಾಖಲಾಗಿ ದೊಡ್ಡ ಚರ್ಚೆ ಎಬ್ಬಿಸಿದ್ದವು.

ಡಿಸ್‌ಲೈಕ್ಸ್ ತೋರಿಸದಂತೆ ತಡೆದ ಬಿಜೆಪಿ

ಇನ್ನು ಬಿಜೆಪಿ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದಿನ ಮೋದಿಯವರ ಮಾತುಗಳನ್ನು ನೇರಪ್ರಸಾರ ಮಾಡಿದರೂ ಸಹ ಲೈಕ್ಸ್‌, ಡಿಸ್‌ಲೈಕ್ಸ್‌ ಗಳ ಸಂಖ್ಯೆ ಎಷ್ಟು ಎಂದು ತೋರಿಸದಂತೆ ತಡೆಹಿಡಿಯಲಾಗಿದೆ. ಅಲ್ಲಿಯೂ ನಿಸ್ಸಂದೇಹವಾಗಿ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿರಲಿದ್ದು ಅದನ್ನು ತೋರ್ಪಡಿಸಬಾರದೆಂದು ಅವುಗಳ ಸಂಖ್ಯೆ ಕಾಣದಂತೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒತ್ತಡದಲ್ಲಿ ಕಾರ್ಯನಿರ್ವಹಿಸುವ ಐಪಿಎಸ್ ಅಧಿಕಾರಿಳ ಒತ್ತಡವನ್ನು ನಿವಾರಿಸಲು ಯೋಗ ಮತ್ತು ಪ್ರಾಣಾಯಾಮಗಳು ಉತ್ತಮ ಮಾರ್ಗಗಳಾಗಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಶುಕ್ರವಾರ(ಸೆ.4) ಪ್ರಧಾನಿ ಮೋದಿ ವಿಡಿಯೊ ಸಂವಾದ ನಡೆಸಿದರು.

ತರಬೇತಿ ಮುಗಿಸಿದ ಯುವ ಐಪಿಎಸ್ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಪ್ರತಿ ವರ್ಷ ಸಂವಾದ ನಡೆಸುತ್ತಿದೆ. ಆದರೆ ಕೊರೊನಾದಿಂದಾಗಿ ಈ ಬಾರಿ ಸಾಧ್ಯವಾಗಿಲ್ಲ. ಖಂಡಿತ ಒಮ್ಮೆ ನಿಮ್ಮೆಲ್ಲರನ್ನೂ ಭೇಟಿಯಾಗುತ್ತೆ ಎಂದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಜನರು ಪೊಲೀಸರ ಮಾನವೀಯತೆಯನ್ನು ಕಂಡಿದ್ದಾರೆ. ಹೀಗೆ ಜಮ್ಮು-ಕಾಶ್ಮೀರದ ಯುವಕರು ಭಯೋತ್ಪಾದನೆಗೆ ತೆರಳದಂತೆ ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಪ್ರಧಾನಿ ಸಲಹೆ ನೀಡಿದರು.

ಆದರೆ ಇತ್ತಿಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಪ್ರಖ್ಯಾತಿ ಕಡಿಮೆಯಾಗುತ್ತಿರುವ ಬಗ್ಗೆ, ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೊಡ್ಡ ಸುದ್ದಿಯಾಗಿತ್ತು. ಇಂದು ಕೂಡ ಡಿಸ್‌ಲೈಕ್‌ಗಳ ಸಮರ ಮುಂದುವರೆದಿದೆ. ಪ್ರಧಾನಿ ಮೋದಿಯವರ ಇಂದಿನ ವಿಡಿಯೋ ಕೂಡ 24 ಸಾವಿರ ಡಿಸ್‌ಲೈಕ್‌ಗಳನ್ನು ಪಡೆದಿದ್ದು, ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ:10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...