Homeಮುಖಪುಟಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

- Advertisement -
- Advertisement -

ಕೇರಳ ಶಾಲೆಗಳ ಆನ್‌ಲೈನ್ ತರಗತಿಗಳನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಅಶ್ಲೀಲ ವೀಡಿಯೊಗಳನ್ನು ಹಾಗೂ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ದುಷ್ಕೃತ್ಯವೆಸಗಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕನಿಷ್ಠ ಮೂರು ಘಟನೆಗಳಲ್ಲಿ ಜನಪ್ರಿಯ ವಿಡಿಯೋ ಕಾನ್ಫರೆನ್ಸಿಂಗ್ ಅಪ್ಲಿಕೇಶನ್ ಜೂಮ್ ಮತ್ತು ವಾಟ್ಸಾಪ್‌ಗೆ ದುಷ್ಕರ್ಮಿಗಳು ನುಸುಳಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ಸಮಾಜ ಕಲ್ಯಾಣ ಇಲಾಖೆ ಮತ್ತು ಪೊಲೀಸರು ಶಾಲೆಗಳು ಮತ್ತು ಶಿಕ್ಷಕರಿಗೆ ಇಂತಹ ಕೃತ್ಯಗಳ ಬಗ್ಗೆ ಎಚ್ಚರದಿಂದಿರಬೇಕೆಂದು ಕೇಳಿಕೊಂಡಿದ್ದು, ಅಂತಹ ಪೋಸ್ಟ್‌ಗಳು ಮಕ್ಕಳ ಮೇಲೆ ಆಳವಾದ ಆಘಾತವನ್ನು ಉಂಟುಮಾಡಬಹುದು ಎಂದು ಹೇಳಿದ್ದಾರೆ.

ಘಟನೆಗಳ ಬಗ್ಗೆ ರಾಜ್ಯ ಪೊಲೀಸರ ವಿಶೇಷ ತಂಡ ತನಿಖೆ ಆರಂಭಿಸಿದ್ದು, ಜೂಮ್‌ನಲ್ಲಿನ ಲೋಪದೋಷಗಳನ್ನು ಬಹಿರಂಗಪಡಿಸಿದ ಮೊದಲ ಘಟನೆ ಎಡಪ್ಪಲ್‌ನ ಖಾಸಗಿ ಶಾಲೆಯಿಂದ ವರದಿಯಾಗಿತ್ತು.

ಎಡಪ್ಪಲ್‌ನ ಸಿಬಿಎಸ್‌ಇ ಶಾಲೆಯ ಅಧಿಕಾರಿಗಳು 7 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ತರಗತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ನಗ್ನ ವೀಡಿಯೊಗಳನ್ನು ಲೈವ್-ಸ್ಟ್ರೀಮ್ ಮಾಡಿದ್ದಾರೆ ಎಂಬ ದೂರಿನೊಂದಿಗೆ ಮಲಪ್ಪುರಂನ ಚೈಲ್ಡ್ ಲೈನ್ ​​ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಇದನ್ನೂ ಓದಿ: ಕೊರೊನಾ ಲಾಕ್‍ಡೌನ್ ಎದುರಾಗಿ ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಸಮಸ್ಯೆಗಳು

ಶಾಲಾ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಪ್ರಕಾರ, “ಆಗಸ್ಟ್ 17 ರಿಂದ ಆಗಸ್ಟ್ 21 ರವರೆಗೆ ದುಷ್ಕರ್ಮಿಯು ಜೂಮ್ ಮೂಲಕ ಆನ್‌ಲೈನ್ ತರಗತಿಗಳಿಗೆ ಸೇರಿದ್ದು, ಅಲ್ಲಿ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸಿದ್ದಾರೆ. ಈ ಘಟನೆಯು ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಶಿಕ್ಷಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಆಘಾತಕಾರಿ ಘಟನೆ. ಆ ಮನುಷ್ಯನ ನಿಜವಾದ ಉದ್ದೇಶ ನಮಗೆ ತಿಳಿದಿಲ್ಲ. ಆರಂಭದಲ್ಲಿ, ನಾವು ಅದನ್ನು ನಿಭಾಯಿಸಲು ಹೆಣಗಾಡಿದೆವು. ಶಾಲಾ ಆಡಳಿತ ಮಂಡಳಿಯು ಮಕ್ಕಳ ಕಲ್ಯಾಣ ಅಧಿಕಾರಿಗಳು ಮತ್ತು ಪೊಲೀಸರನ್ನು ಸಂಪರ್ಕಿಸಿದೆ ” ಎಂದು ಹೇಳಿದ್ದಾರೆ.

ಓದಿ: ಆನ್‌ಲೈನ್‌ನಲ್ಲಿ ಕಾನೂನು ಬಾಹಿರ ಆರೋಗ್ಯ ಸೇವೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಿ: ದೆಹಲಿ ಹೈಕೋರ್ಟ್

ಇತರ ಶಾಲೆಗಳ ಶಿಕ್ಷಕರು ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದ ಅವರು, “ಹೆಚ್ಚಿನ ಶಾಲಾ ಆಡಳಿತ ಮಂಡಳಿಗಳು ಪೊಲೀಸರನ್ನು ಸಂಪರ್ಕಿಸಲು ಸಿದ್ಧವಾಗಿಲ್ಲ” ಎಂದಿದ್ದಾರೆ.

ಮುಖ್ಯೋಪಾಧ್ಯಾಯರು ನೀಡಿದ ದೂರಿನ ಆಧಾರದ ಮೇಲೆ, ಕುಟ್ಟಿಪ್ಪುರಂ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 11 (I), 11(iii) ಮತ್ತು 12, ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಐಪಿಸಿ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣ ಬೇಡ: ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಗೆ SFI ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...