Homeಮುಖಪುಟಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಭಾರತೀಯ ರೈಲ್ವೆಯ ಏಳು ಕೋಚ್ ಕಾರ್ಖಾನೆಗಳನ್ನು ಒಂದೇ ಕಂಪನಿಯಾಗಿ ವಿಲೀನಗೊಳಿಸಲಾಗಿದೆ. ಇದು ಒಮ್ಮೆಗೆ ಷೇರುಗಳನ್ನು ಮಾರಲು ಅನುಕೂಲವಾಗಲಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ರೈಲ್ವೆ ಮಂಡಳಿಯ 7 ಕೋಚ್ ಕಾರ್ಖಾನೆಗಳನ್ನು ಒಂದೇ ಘಟಕಕ್ಕೆ ವಿಲೀನಗೊಳಿಸಿರುವ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆಯನ್ನು ಒಟ್ಟಾರೆಯಾಗಿ ಖಾಸಗಿ ಕೈಗೆ ಹಸ್ತಾಂತರಿಸುವ ಸಿದ್ಧತೆಗಳನ್ನು ಚುರುಕುಗೊಳಿಸಿದೆ.

ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಅವರ ಹುದ್ದೆಯನ್ನು ಸ್ಥಳಾಂತರಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಕ ಮಾಡಲಾಗಿದೆ. ಮಂಡಳಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ರದ್ದುಪಡಿಸಲಾಗಿರುವ ಹುದ್ದೆಗಳು ಎಂಜಿನಿಯರಿಂಗ್ ಮತ್ತು ಸಾಮಗ್ರಿಗಳ ನಿರ್ವಹಣೆಯನ್ನು ನಿರ್ವಹಿಸುವ ಇಲಾಖೆಗಳಿಗೆ ಸಂಬಂಧಿಸಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಕಾರ್ಪೊರೇಟ್ ಪ್ರತಿನಿಧಿಗಳು ನಿರ್ವಹಿಸುತ್ತಾರೆ.

ಇದನ್ನೂ ಓದಿ: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?; ಫ್ಯಾಕ್ಟ್‌ಚೆಕ್

ನಿಲ್ದಾಣಗಳನ್ನು ಈಗಾಗಲೇ ಖಾಸಗೀಕರಣಗೊಳಿಸಿರುವ ಕೇಂದ್ರ ಸರ್ಕಾರ, ಇದೀಗ ಕೋಚ್ ಮತ್ತು ಲೋಕೋಮೋಟಿವ್ ಕಾರ್ಖಾನೆಗಳನ್ನು ಮಾರಾಟ ಮಾಡಲು ಹಾಗೂ 151 ಖಾಸಗಿ ರೈಲುಗಳನ್ನು ಪರಿಚಯಿಸಲು ಮತ್ತು ಸರಕು ಕಾರಿಡಾರ್‌ನಲ್ಲಿ ಖಾಸಗಿ ಭಾಗವಹಿಸುವಿಕೆಯನ್ನು ತರಲು ಕಾರ್ಯವಿಧಾನಗಳನ್ನು ಪ್ರಾರಂಭಿಸಿದೆ.

ಭಾರತೀಯ ರೈಲ್ವೆಯ ಏಳು ಕೋಚ್ ಕಾರ್ಖಾನೆಗಳನ್ನು ಒಂದೇ ಕಂಪನಿಯಾಗಿ ವಿಲೀನಗೊಳಿಸಲಾಗಿದೆ. ಇದು ಒಮ್ಮೆಗೆ ಷೇರುಗಳನ್ನು ಮಾರಲು ಅನುಕೂಲವಾಗಲಿದೆ ಎನ್ನಲಾಗಿದೆ.

ಚಿತ್ರಂಜನ್ ಲೋಕೋಮೋಟಿವ್ ವರ್ಕ್ಸ್, ವಾರಣಾಸಿ ಡೀಸೆಲ್ ಲೋಕೋಮೋಟಿವ್ ವರ್ಕ್ಸ್, ಪಟಿಯಾಲ ಡೀಸೆಲ್ ಲೊಕ್ ಮೋಡೆರೇಷನ್ ವರ್ಕ್ಸ್, ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ಕಪುರ್ಥಾಲಾ ರೈಲ್‌ಕೋಚ್ ಫ್ಯಾಕ್ಟರಿ, ಬೆಂಗಳೂರು ವ್ಹೀಲ್ ಮತ್ತು ಆಕ್ಸಿಲ್ ಫ್ಯಾಕ್ಟರಿ ಮತ್ತು ರಾಯ್ ಬರೇಲಿ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಗಳನ್ನು ಒಂದೇ ಕಂಪನಿಯೊಂದಿಗೆ ವಿಲೀನಗೊಳಿಸಲಾಗುವುದು. ವಿವಿಧ ಸ್ಥಳಗಳಲ್ಲಿನ ರೈಲ್ವೆ ಜಮೀನುಗಳನ್ನು ದೀರ್ಘಾವಧಿಯ ಗುತ್ತಿಗೆಗೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ಸುಮಾರು 3 ಲಕ್ಷ ಹುದ್ದೆಗಳನ್ನು ರದ್ದುಗೊಳಿಸಿ ನೌಕರರ ಸಂಖ್ಯೆಯಲ್ಲಿ ಬೃಹತ್ ಕಡಿತ ಮಾಡಲಾಗುತ್ತದೆ. ಮುಂದಿನ ನೇಮಕಾತಿಗಳನ್ನು ನಿಷೇಧಿಸುವ ಸಾರ್ವಜನಿಕ ಅಧಿಸೂಚನೆ ಹೊರಡಿಸಿದ್ದು, ಅಲ್ಲಿ ಗುತ್ತಿಗೆ ಕಾರ್ಮಿಕರನ್ನು ವ್ಯಾಪಕವಾಗಿ ತೊಡಗಿಸಲಾಗುವುದು ಎನ್ನಲಾಗಿದೆ.

ಕೇಂದ್ರದ ಈ ನಡೆಗೆ ಹಲವು ಯೂನಿಯನ್‌ಗಳು ವಿರೋಧ ವ್ಯಕ್ತಪಡಿಸಿವೆ.


ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...