Homeಮುಖಪುಟಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಭಾರತೀಯ ರೈಲ್ವೆಯ ಏಳು ಕೋಚ್ ಕಾರ್ಖಾನೆಗಳನ್ನು ಒಂದೇ ಕಂಪನಿಯಾಗಿ ವಿಲೀನಗೊಳಿಸಲಾಗಿದೆ. ಇದು ಒಮ್ಮೆಗೆ ಷೇರುಗಳನ್ನು ಮಾರಲು ಅನುಕೂಲವಾಗಲಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ರೈಲ್ವೆ ಮಂಡಳಿಯ 7 ಕೋಚ್ ಕಾರ್ಖಾನೆಗಳನ್ನು ಒಂದೇ ಘಟಕಕ್ಕೆ ವಿಲೀನಗೊಳಿಸಿರುವ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆಯನ್ನು ಒಟ್ಟಾರೆಯಾಗಿ ಖಾಸಗಿ ಕೈಗೆ ಹಸ್ತಾಂತರಿಸುವ ಸಿದ್ಧತೆಗಳನ್ನು ಚುರುಕುಗೊಳಿಸಿದೆ.

ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಅವರ ಹುದ್ದೆಯನ್ನು ಸ್ಥಳಾಂತರಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಕ ಮಾಡಲಾಗಿದೆ. ಮಂಡಳಿಯಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ರದ್ದುಪಡಿಸಲಾಗಿದೆ. ರದ್ದುಪಡಿಸಲಾಗಿರುವ ಹುದ್ದೆಗಳು ಎಂಜಿನಿಯರಿಂಗ್ ಮತ್ತು ಸಾಮಗ್ರಿಗಳ ನಿರ್ವಹಣೆಯನ್ನು ನಿರ್ವಹಿಸುವ ಇಲಾಖೆಗಳಿಗೆ ಸಂಬಂಧಿಸಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಕಾರ್ಪೊರೇಟ್ ಪ್ರತಿನಿಧಿಗಳು ನಿರ್ವಹಿಸುತ್ತಾರೆ.

ಇದನ್ನೂ ಓದಿ: ರೈಲ್ವೇ ಫಲಕದಲ್ಲಿ ಸಂಸ್ಕೃತ ಭಾಷೆಯಿರುವ ಸಂಬಿತ್ ಪಾತ್ರ ಟ್ವೀಟ್- ವಾಸ್ತವವೇನು?; ಫ್ಯಾಕ್ಟ್‌ಚೆಕ್

ನಿಲ್ದಾಣಗಳನ್ನು ಈಗಾಗಲೇ ಖಾಸಗೀಕರಣಗೊಳಿಸಿರುವ ಕೇಂದ್ರ ಸರ್ಕಾರ, ಇದೀಗ ಕೋಚ್ ಮತ್ತು ಲೋಕೋಮೋಟಿವ್ ಕಾರ್ಖಾನೆಗಳನ್ನು ಮಾರಾಟ ಮಾಡಲು ಹಾಗೂ 151 ಖಾಸಗಿ ರೈಲುಗಳನ್ನು ಪರಿಚಯಿಸಲು ಮತ್ತು ಸರಕು ಕಾರಿಡಾರ್‌ನಲ್ಲಿ ಖಾಸಗಿ ಭಾಗವಹಿಸುವಿಕೆಯನ್ನು ತರಲು ಕಾರ್ಯವಿಧಾನಗಳನ್ನು ಪ್ರಾರಂಭಿಸಿದೆ.

ಭಾರತೀಯ ರೈಲ್ವೆಯ ಏಳು ಕೋಚ್ ಕಾರ್ಖಾನೆಗಳನ್ನು ಒಂದೇ ಕಂಪನಿಯಾಗಿ ವಿಲೀನಗೊಳಿಸಲಾಗಿದೆ. ಇದು ಒಮ್ಮೆಗೆ ಷೇರುಗಳನ್ನು ಮಾರಲು ಅನುಕೂಲವಾಗಲಿದೆ ಎನ್ನಲಾಗಿದೆ.

ಚಿತ್ರಂಜನ್ ಲೋಕೋಮೋಟಿವ್ ವರ್ಕ್ಸ್, ವಾರಣಾಸಿ ಡೀಸೆಲ್ ಲೋಕೋಮೋಟಿವ್ ವರ್ಕ್ಸ್, ಪಟಿಯಾಲ ಡೀಸೆಲ್ ಲೊಕ್ ಮೋಡೆರೇಷನ್ ವರ್ಕ್ಸ್, ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ಕಪುರ್ಥಾಲಾ ರೈಲ್‌ಕೋಚ್ ಫ್ಯಾಕ್ಟರಿ, ಬೆಂಗಳೂರು ವ್ಹೀಲ್ ಮತ್ತು ಆಕ್ಸಿಲ್ ಫ್ಯಾಕ್ಟರಿ ಮತ್ತು ರಾಯ್ ಬರೇಲಿ ಮಾಡರ್ನ್ ರೈಲ್ ಕೋಚ್ ಫ್ಯಾಕ್ಟರಿಗಳನ್ನು ಒಂದೇ ಕಂಪನಿಯೊಂದಿಗೆ ವಿಲೀನಗೊಳಿಸಲಾಗುವುದು. ವಿವಿಧ ಸ್ಥಳಗಳಲ್ಲಿನ ರೈಲ್ವೆ ಜಮೀನುಗಳನ್ನು ದೀರ್ಘಾವಧಿಯ ಗುತ್ತಿಗೆಗೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ಸುಮಾರು 3 ಲಕ್ಷ ಹುದ್ದೆಗಳನ್ನು ರದ್ದುಗೊಳಿಸಿ ನೌಕರರ ಸಂಖ್ಯೆಯಲ್ಲಿ ಬೃಹತ್ ಕಡಿತ ಮಾಡಲಾಗುತ್ತದೆ. ಮುಂದಿನ ನೇಮಕಾತಿಗಳನ್ನು ನಿಷೇಧಿಸುವ ಸಾರ್ವಜನಿಕ ಅಧಿಸೂಚನೆ ಹೊರಡಿಸಿದ್ದು, ಅಲ್ಲಿ ಗುತ್ತಿಗೆ ಕಾರ್ಮಿಕರನ್ನು ವ್ಯಾಪಕವಾಗಿ ತೊಡಗಿಸಲಾಗುವುದು ಎನ್ನಲಾಗಿದೆ.

ಕೇಂದ್ರದ ಈ ನಡೆಗೆ ಹಲವು ಯೂನಿಯನ್‌ಗಳು ವಿರೋಧ ವ್ಯಕ್ತಪಡಿಸಿವೆ.


ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...