Homeಮುಖಪುಟ1984 ರ ಸಿಖ್ ವಿರೋಧಿ ಗಲಭೆ: ಅಪರಾಧಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

1984 ರ ಸಿಖ್ ವಿರೋಧಿ ಗಲಭೆ: ಅಪರಾಧಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಪ್ರತೀಕಾರವಾಗಿ 1984 ರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ಗಲಭೆಗಳು ಭುಗಿಲೆದ್ದಿದ್ದವು.

- Advertisement -
- Advertisement -

1984 ರ ಸಿಖ್ ವಿರೋಧಿ ಗಲಭೆಯ ತನ್ನ ಪಾತ್ರಕ್ಕಾಗಿ ದೆಹಲಿ ಹೈಕೋರ್ಟ್‌ನಿಂದ 2018 ರಲ್ಲಿ ಶಿಕ್ಷೆಗೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಸಜ್ಜನ್ ಕುಮಾರ್ ಅವರ ಆರೋಗ್ಯದ ಬಗ್ಗೆ ವಕೀಲರು ಎತ್ತಿದ ಕಳವಳಗಳನ್ನು ಬದಿಗೊತ್ತಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ, ಇದು ಸಾಮಾನ್ಯ ಪ್ರಕರಣವಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಹಿಂದೂ-ಸಿಖ್‌ ಸಮುದಾಯದ ಅರ್ಥಶಾಸ್ತ್ರಜ್ಞ ಗೆಳೆಯರಿಬ್ಬರೂ ಭಾರತದ ಪ್ರಸ್ತುತ ಸ್ಥಿತಿ ಕುರಿತು ಬರೆದ ಭಾವನಾತ್ಮಕ ಪತ್ರ.

“ಇದು ಸಣ್ಣ ಪ್ರಕರಣವಲ್ಲ. ನಾವು ನಿಮಗೆ ಜಾಮೀನು ನೀಡಲು ಸಾಧ್ಯವಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದರು. ಆದರೂ ಮುಖಾಮುಖಿ ವಿಚಾರಣೆ ಪುನರಾರಂಭವಾದ ಕೂಡಲೇ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವುದಾಗಿ ನ್ಯಾಯಪೀಠ ಹೇಳಿದೆ.

1984 ರ ಹತ್ಯಾಕಾಂಡದಲ್ಲಿ ಅವರ ಪಾತ್ರಕ್ಕಾಗಿ 2018 ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ 74 ವರ್ಷದ ರಾಜಕಾರಣಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆಗಿನ ಪ್ರಧಾನಿ ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದ ಪ್ರತೀಕಾರವಾಗಿ 1984 ರಲ್ಲಿ ಸಿಖ್ ಸಮುದಾಯವನ್ನು ಗುರಿಯಾಗಿಸಿಕೊಂಡು ಗಲಭೆಗಳು ಭುಗಿಲೆದ್ದಿದ್ದವು.

ಇದನ್ನೂ ಓದಿ: ಆಪರೇಷನ್‌ ‘ಬ್ಲೂ ಸ್ಟಾರ್‌’ ಮತ್ತು ಇಂದಿರಾ ಗಾಂಧಿ ಹತ್ಯೆಗೆ ಕಾರಣಗಳೇನು? ಹೇಗೆ ನಡೆಯಿತು.. ಪ್ರತ್ಯಕ್ಷದರ್ಶಿಯ ವರದಿ

ಸಜ್ಜನ್ ಅವರ ವಕೀಲ ವಿಕಾಸ್ ಸಿಂಗ್ ಕಕ್ಷಿದಾರ ಈಗಾಗಲೇ 18 ತಿಂಗಳು ಜೈಲಿನಲ್ಲಿದ್ದು, ಅವರ ಆರೋಗ್ಯ ಮತ್ತು ತೂಕವನ್ನು ಮರಳಿ ಪಡೆಯಲು ಒಂದು ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು ಎಂದು ಕೇಳಿದ್ದರು.

“ಕೋರ್ಟ್ ಹೇರುವ ಯಾವುದೇ ಷರತ್ತನ್ನು ನಾನು ಪಾಲಿಸುತ್ತೇನೆ. ಕನಿಷ್ಠ 1 ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು” ಎಂದು ವಿಕಾಸ್ ಸಿಂಗ್ ಒತ್ತಿ ಹೇಳಿದ್ದರು.

ಸಿಖ್‌ ಗಲಭೆ ಸಂತ್ರಸ್ತರನ್ನು ಪ್ರತಿನಿಧಿಸುತ್ತಿದ್ದ ವಕೀಲರು ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದರು. ಅವರಿಗೆ ಜೈಲಿನಲ್ಲಿ ಉತ್ತಮ ಆರೈಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌‌ನ ಮಾರ್ಚ್ 11 ರ ವರದಿಯನ್ನು ಗಮನಿಸಿದ ನ್ಯಾಯಾಲಯ, ಸಜ್ಜನ್ ಅವರ ತೂಕವು ವಾಸ್ತವವಾಗಿ ಅವರು ಮಾಡಿದ ಪ್ರತಿಪಾದನೆಗೆ ವಿರುದ್ಧವಾಗಿದ್ದು, ಹೆಚ್ಚಾಗಿದೆ ಎಂದು ಹೇಳಿದೆ.


ಇದನ್ನೂ ಓದಿ: ಮೋದಿ ಸರ್ವಾಧಿಕಾರ ಇಂದಿರಾಗಾಂಧಿ ಸರ್ವಾಧಿಕಾರ ಒಂದೇನಾ?..: ಪ್ರಭಾತ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...