Homeಅಂಕಣಗಳುಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

ಅಂಬೇಡ್ಕರ್, ಸಂಸ್ಕøತ ಮತ್ತು ಮನುವಾದಿಗಳು

- Advertisement -
- Advertisement -

ಗೌರಿ ಲಂಕೇಶ್
25 ಏಪ್ರಿಲ್ , 2007 (`ಕಂಡಹಾಗೆ’ ಸಂಪಾದಕೀಯದಿಂದ)|

ಮೊನ್ನೆ ಬೆಂಗಳೂರಿನಲ್ಲಿ ಕುತೂಹಲಕಾರಿ ಕಾರ್ಯಕ್ರಮವೊಂದು ನಡೆಯಿತು. ಸಂಘ ಪರಿವಾರದವರು ಏರ್ಪಡಿಸಿದ್ದ “ಅಂಬೇಡ್ಕರ್ ಸಂಸ್ಕøತಿ ಶೋಭಾಯಾತ್ರೆ” ಎಂಬ ಆ ಕಾರ್ಯಕ್ರಮದಲ್ಲಿ ಒಂದು ಕರಪತ್ರವನ್ನೂ ಹಂಚಿದ್ದರು. ಯಾರಿಗೂ ಬಾರದ ಸಂಸ್ಕøತ ಭಾಷೆಯಲ್ಲೇ ಬರೆಯಲಾಗಿದ್ದ ಆ ಕರಪತ್ರದಲ್ಲಿ ಒಂದೇ ಒಂದು ಸಾಲು ಕನ್ನಡದಲ್ಲಿದ್ದು, ಅದು ಹೀಗಿತ್ತು. “1949ರ ಸೆಪ್ಟೆಂಬರ್ 10ರಂದು ನಡೆದ ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಸಂಸ್ಕøತವೇ ರಾಷ್ಟ್ರಭಾಷೆ ಆಗಬೇಕೆಂದಿದ್ದರಲ್ಲದೆ, ತಮ್ಮ ಈ ಅಭಿಪ್ರಾಯವನ್ನು ಸಂಸ್ಕøತದಲ್ಲೇ ಮಂಡಿಸಿದ್ದರು.”
ಅಂಬೇಡ್ಕರ್ ಸಂಸ್ಕøತ ಭಾಷೆಯನ್ನು ಚೆನ್ನಾಗಿ ಕಲಿತಿದ್ದರು ಅನ್ನೋದು ಗೊತ್ತಿತ್ತು. ಅವರು ಅದನ್ನು ಕಲಿತದ್ದು ಸ್ವ-ಇಚ್ಛೆ ಮತ್ತು ಶ್ರದ್ಧೆಯಿಂದ. ಅಂಬೇಡ್ಕರ್ ದಲಿತರಾಗಿದ್ದರಿಂದ ಅವರಿಗೆ ಶಾಲೆಯಲ್ಲಿ ಸಂಸ್ಕøತ ಹೇಳಿಕೊಡುವುದಿಲ್ಲ ಎಂದು ಮಾಸ್ತರರು ಹೇಳಿದ್ದರು. ಜನರ ಶೋಷಣೆಯ ಭಾಷೆಯೇ ಆಗಿದ್ದ ಸಂಸ್ಕøತದಲ್ಲಿ ಮತ್ತು ಸಂಸ್ಕøತದಲ್ಲೇ ರಚಿಸಿದ್ದ ಪುಸ್ತಕಗಳಲ್ಲಿ ಏನಿರಬಹುದು ಎಂದು ಅರಿಯಲಿಕ್ಕೇ ಅವರು ಆ ಭಾಷೆಯನ್ನು ಕಲಿತಿದ್ದರು. ಅಂದಮಾತ್ರಕ್ಕೆ ಅವರು ಸಂಸ್ಕøತವೇ ರಾಷ್ಟ್ರಭಾಷೆಯಾಗಲಿ ಎಂದು ಸಂಸ್ಕøತದಲ್ಲೇ ವಾದ ಮಂಡಿಸಿದ್ದರೆ?
ಇಂಟರ್‍ನೆಟ್‍ನಲ್ಲಿ ಹುಡುಕಾಡಿದಾಗ 1949ರ ಸೆಪ್ಟೆಂಬರ್ 10ರಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯು “ಸಂವಿಧಾನ ರಚನಾ ಸಭೆಯಲ್ಲಿ ಅಂಬೇಡ್ಕರ್‍ರವರು ಈ ಪ್ರಸ್ತಾವನೆಯನ್ನು ಮಂಡಿಸಿದರು” ಎಂದು ತಳಬುಡವಿಲ್ಲದ ವರದಿ ಸಿಕ್ಕಿತೇ ವಿನಾಃ ನಿಖರ ಮಾಹಿತಿ ಸಿಗಲಿಲ್ಲ. ಅದನ್ನೇ ಆಧಾರವಾಗಿಟ್ಟುಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿರೋದು ಖಾತ್ರಿಯಾಯ್ತು.
ಯಾವುದಕ್ಕೂ ಇರಲಿ ಎಂದು ನಮ್ಮ ಬಳಗದ, ತುಂಬಾ ಜಾಣೆ ರಾಜಲಕ್ಷ್ಮಿ ಅಂಕಲಗಿ ಎಂಬ ಯುವ ವಕೀಲೆಗೆ ಫೋನ್ ಮಾಡಿ ವಿಷಯ ತಿಳಿಸಿದೆ. “ಸಂವಿಧಾನ ರಚನಾ ಸಭೆಯ ಚರ್ಚೆಗಳನ್ನು ಕುರಿತ ಐದು ಪುಸ್ತಕಗಳೂ ನಮ್ಮ ಆಫೀಸಿನಲ್ಲಿವೆ. ಅವನ್ನು ನೋಡಿ ನಿಮಗೆ ತಿಳಿಸುತ್ತೇನೆ” ಎಂದಳು ಆಕೆ. ಅರ್ಧ ಗಂಟೆಯ ನಂತರ ಆಕೆ ನೀಡಿದ ಮಾಹಿತಿ ಹೀಗಿತ್ತು:
“1949ರ ಸೆಪ್ಟೆಂಬರ್ ಎಂಟನೇ ಮತ್ತು ಒಂಬತ್ತನೇ ತಾರೀಖು ನಡೆದ ಸಂವಿಧಾನ ರಚನಾ ಸಭೆಯಲ್ಲಿ ತೆರಿಗೆ ಕುರಿತ ಚರ್ಚೆಗಳು ಶುರುವಾಗಿ 10ನೇ ತಾರೀಖಿನವರೆಗೂ ಸಾಗಿದವು. 10ನೇ ತಾರೀಖು ಆಸ್ತಿ ಹೊಂದುವ ನೀತಿಗಳನ್ನು ಕುರಿತಂತೆ ಆರ್ಟಿಕಲ್ 24ರ ಬಗ್ಗೆ ಚರ್ಚೆಗಳಾದವು. ಅಂದು ಶನಿವಾರವಾದ್ದರಿಂದ ಸಭೆ ಮಧ್ಯಾಹ್ನ ನಿಂತಿತು. 11ನೇ ತಾರೀಖು ಭಾನುವಾರವಾದ್ದರಿಂದ ಸಭೆ ಮತ್ತೆ 12ನೇ ತಾರೀಖಿನಂದು ಸೇರುತ್ತದೆ. ಅವತ್ತೂ ಸಂಜೆ ನಾಲ್ಕು ಗಂಟೆಯ ತನಕ ಆಸ್ತಿ ಕುರಿತಂತೆ ಚರ್ಚೆ ನಡೆಯುತ್ತದೆ. ಆನಂತರ ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚೆ ಆರಂಭವಾಗಿ ಅದು 13 ಮತ್ತು 14ನೇ ತಾರೀಖಿನವರೆಗೂ ನಡೆಯುತ್ತದೆ. ಆಗಲೂ ಹೇಗೆ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ಕೊಡಬೇಕು ಮತ್ತು ಹಿಂದಿಯನ್ನು ಯಾಕೆ ಹೇರಬಾರದು ಎಂಬುದರ ಬಗ್ಗೆಯೇ ಚರ್ಚೆ ನಡೆಯುತ್ತದೆ. 8ರಿಂದ 14ನೇ ತಾರೀಖಿನವರೆಗೂ ನಡೆದ ಚರ್ಚೆಗಳಲ್ಲಿ ಎರಡು ಮುಖ್ಯ ಅಂಶಗಳು ಇವೆ: ಮೊದಲನೆಯದಾಗಿ. ಸಂಸ್ಕøತ ಭಾಷೆಯಲ್ಲಿ ಮಾತನಾಡಿದವರು ಬಿಹಾರದ ಗುಪ್ತನಾಥ ಸಿಂಗ್ ಎಂಬುವವರು. ಆಸ್ತಿ ಹೊಂದುವ ವಿಚಾರ ಕುರಿತಂತೆ ಸಮಾಜವಾದಿ ಸಂವಿಧಾನವನ್ನು ನಿರೂಪಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿರುವಾಗ ಅವರು ಮನುಶಾಸ್ತ್ರದಲ್ಲಿ ಹೇಗೆ ಬಂಡವಾಳಶಾಹಿ ಪರ ಸಿದ್ಧಾಂತಗಳು ಅಡಗಿವೆ ಎಂದು ವಿವರಿಸುತ್ತಾರೆ. ಎರಡನೆಯದು: ಅಂಬೇಡ್ಕರ್‍ರವರು ಸಂಸ್ಕøತದ ಪರವಾಗಿ ಸಂಸ್ಕøತದಲ್ಲಿ ಮಾತನಾಡುವುದಿರಲಿ, ಪ್ರಾದೇಶಿಕ ಭಾಷೆಗಳನ್ನು ಕುರಿತ ಚರ್ಚಾಸಭೆಗಳಲ್ಲಿ ಅವರು ಭಾಗವಹಿಸಿಯೇ ಇಲ್ಲ!!”
ಇದು ಅಧಿಕೃತವಾಗಿ ದಾಖಲಾಗಿರುವ ಸತ್ಯ! ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿತ್ತೆನ್ನಲಾದ ತಲೆ-ಬುಡವಿಲ್ಲದ ಊಹಾಪೋಹವಲ್ಲ! ಆದರೆ ಚಡ್ಡಿಗಳು ಎಂತಹ ಕುತಂತ್ರಿಗಳು ನೋಡಿ. ಒಂದೆಡೆ ಮನುಸ್ಮøತಿಯೇ ನಮ್ಮ ಸಂವಿಧಾನವಾಗಬೇಕಿತ್ತು ಎಂದು ವಾದಿಸಿದ್ದ ಗೋಲ್ವಾಲ್ಕರ್ ಎಂಬ ದ್ವೇಷದ ಗುರುವಿನ ನೂರನೇ ಜನ್ಮೋತ್ಸವವನ್ನು ‘ಹಿಂದೂ ಸಮಾವೇಶ’ ಎಂದು ಆಚರಿಸುತ್ತಾರೆ. ಇನ್ನೊಂದೆಡೆ ದಲಿತರ ನಾಯಕ ಮತ್ತು ಆತ್ಮಪ್ರಜ್ಞೆಯಾಗಿದ್ದ ಅಂಬೇಡ್ಕರ್ ಅವರೇ ಸ್ವತಃ ಸಂಸ್ಕøತದ ಪರವಾಗಿದ್ದರು ಎಂದು ಕಲ್ಪಿಸಿಕೊಂಡು ಸಭೆ ಏರ್ಪಡಿಸುತ್ತಾರೆ. ಇದನ್ನೆಲ್ಲ ಶೂದ್ರರು, ದಲಿತರು ನಂಬುತ್ತಾರೆ. ಗೋಲ್ವಾಲ್ಕರ್‍ನ ಸಭೆಗಳಲ್ಲಿ ಶೂದ್ರರು ಭಾಗವಹಿಸಿದರೆ, ಚೆಡ್ಡಿಗಳ ಅಂಬೇಡ್ಕರ್ ಕಾರ್ಯಕ್ರಮಗಳಲ್ಲಿ ದಲಿತರು ಪಾಲ್ಗೊಳ್ಳುತ್ತಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...