Homeಮುಖಪುಟಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ಮಾಸ್ಕೋದಲ್ಲಿ ರಾಜನಾಥ್ ಸಿಂಗ್, ಚೀನಾ ರಕ್ಷಣಾ ಸಚಿವರ ಭೇಟಿ ಸಾಧ್ಯತೆ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

- Advertisement -
- Advertisement -

ಭಾರತ-ಚೀನಾ ಗಡಿ ಸಂಘರ್ಷ ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಚೀನಾದ ರಕ್ಷಣಾ ಸಚಿವರನ್ನು ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭೇಟಿಯಾಗಲಿದ್ದಾರೆ. ನಮಗೆ ಸಭೆಯ ವಿನಂತಿ ಬಂದಿದ್ದು, ಸಭೆ ನಡೆಯುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಸಭೆಯಲ್ಲಿ ಚೀನಾದ ರಕ್ಷಣಾ ಸಚಿವ ವೀ ಫೆಂಗಿ, ರಾಜನಾಥ್ ಸಿಂಗ್ ಜೊತೆ ಮಾತನಾಡಲು ಬಯಸಿದ್ದು, ಸಮಯ ಕೇಳಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಮತ್ತು ಚೀನಾದ ಸೈನಿಕರ ಮಧ್ಯೆ ಮೇ ತಿಂಗಳಿನಿಂದ ಪೂರ್ವ ಲಡಾಕ್‌ನಲ್ಲಿ ಗಡಿ ಸಂಘರ್ಷ ಏರ್ಪಟ್ಟಿದೆ. ಜೂನ್ 15ರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಜೊತೆಗೆ ಕಳೆದ ಶನಿವಾರ ಮತ್ತು ಸೋಮವಾರ ಮತ್ತೆ ದಕ್ಷಿಣ ದಂಡೆಯ ಪಾಂಗೊಂಗ್ ಸರೋವರದ ಪ್ರದೇಶವನ್ನು ಚೀನಾ ಪಡೆಗಳು ಆಕ್ರಮಿಸಿಕೊಳ್ಳಲು ಪ್ರಯತ್ನಿಸಿದ ನಂತರ ಮತ್ತೆ ಬಿಕ್ಕಟ್ಟು ಉಂಟಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ ಮಾಧ್ಯಮಗಳು

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಘರ್ಷಣೆಗಳು ಸಂಭವಿಸುತ್ತಲೇ ಇವೆ. ಸಮಸ್ಯೆ ಪರಿಹರಿಸಲು ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರೂ ಸಹ ಈ ಪ್ರಯತ್ನಗಳು ನಡೆದಿವೆ. ಈಗ ಮೂರು ದಿನಗಳ ಶಾಂಘೈ ಸಹಕಾರ ಸಭೆ ಬಳಿಕ ನಡೆಯುವ ಭಾರತ ಮತ್ತು ಚೀನಾ ರಕ್ಷಣಾ ಸಚಿವ ಸಭೆ ಬಳಿಕ ವಾದರೂ ಬಿಕ್ಕಟ್ಟು ಶಮನವಾಗುತ್ತದೆಯ ನೋಡಬೇಕು.

ಇದರ ಜೊತೆಗೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಹೇಳುವ ಮೂಲಕ ಸೇನಾ ಮುಖ್ಯಸ್ಥ ಎಂ.ಎಂ ನರವಣೆ ಮತ್ತೆ ಆತಂಕ ಸೃಷ್ಟಿಸಿದ್ದಾರೆ. ವಾಸ್ತವ ನಿಯಂತ್ರಣ ರೇಖೆ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಮತ್ತು ಭಾರತೀಯ ಸೇನೆ ಹಲವು ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದಿದ್ದಾರೆ.

ಭಾರತ– ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌‌ಗೆ ಭೇಟಿ ನೀಡಿದ್ದ ಸೇನಾ ಮುಖ್ಯಸ್ಥರು ಲಡಾಖ್‌ಗೆ ತಲುಪಿದ ನಂತರ ಎಎನ್‌ಐ ಜೊತೆ ಮಾತನಾಡಿದ ಅವರು, ನಾನು ಬೇರೆ ಬೇರೆ ಸ್ಥಳಗಳಿಗೆ ಹೋಗಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸೇನಾ ಅಧಿಕಾರಿಗಳು ಮತ್ತು ಜೆಸಿಒಗಳೊಂದಿಗೆ ಮಾತನಾಡಿದ್ದು, ಅವರು ಎಲ್ಲಾ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದಾರೆ ಎಂದಿದ್ದಾರೆ.

ಆಗಸ್ಟ್ 29 ಮತ್ತು 30ರ ಮಧ್ಯರಾತ್ರಿಯಲ್ಲಿ ಲಡಾಖ್‌ನ ಚುಶುಲ್ ಬಳಿಯ ದಕ್ಷಿಣ ದಂಡೆಯ ಪಾಂಗೊಂಗ್ ತ್ಸೊ ಬಳಿ ಭಾರತೀಯ ಪ್ರದೇಶಗಳಿಗೆ ಅತಿಕ್ರಮಣ ಮಾಡಲು ಚೀನಾದ ಸೇನೆಯು ಮಾಡಿದ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಇಂತಹ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬಯಸಿರುವ ಚೀನಾ ರಕ್ಷಣಾ ಸಚಿವ ವೀ ಫೆಂಗಿ ಏನು ಕ್ರಮ ಕೈಗೊಳ್ಳಬಹುದು ಎಂಬ  ಕುತೂಹಲವಿದೆ. ಜೊತೆಗೆ ಈ ಹಿಂದೆ ಹಲವು ಬಾರಿ ಬ್ರಿಗೇಡಿಯರ್ ಮಟ್ಟ, ಅಧಿಕಾರಿಗಳ ಮಟ್ಟದಲ್ಲಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗದಿರುವ ಬಗ್ಗೆ ನಾವು ನೆನಪಿಡಬೇಕಾಗುತ್ತದೆ.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...