Homeಕರ್ನಾಟಕಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ತಮಿಳುನಾಡಿನಲ್ಲಿ ’ತಮಿಳಗ ಮಕ್ಕಳ್ ಪನ್ಬಾಟ್ಟು ಕಳಗಂ’, ನರೇದ್ರ ಧಾಬೋಲ್ಕರ್‌, ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಸ್ಮರಣಾರ್ಥ ಸಭೆಯನ್ನು ನಡೆಸುತ್ತಿದೆ.

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ದುಷ್ಕಮಿಗಳು ಹತ್ಯೆ ಮಾಡಿ ಇಂದಿಗೆ ಮೂರು ವರ್ಷವಾಗಿದ್ದು, ದೇಶಾದ್ಯಂತ ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮಗಳು ನಡೆಯುತ್ತಿದೆ.

ಇಂದು ಮುಂಜಾನೆ ಒಂಬತ್ತು ಗಂಟೆಗೆ ಗೌರಿ ಲಂಕೇಶ್‌ ಸಮಾಧಿಗೆ ಭೇಟಿ ಮಾಡಿದ ಗೌರಿ ಲಂಕೇಶ್ ಸ್ನೇಹಿತ ಬಳಗ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಹೋರಾಟಗಾರ ನೂರ್‌ ಶ್ರೀಧರ್‌, “ಪಿ ಲಂಕೇಶ್ ಸಾವಿನ ನಂತರ ಧೀಮಂತ ಪತ್ರಿಕೆಯ ಜವಾಬ್ದಾರಿ ಗೌರಿ ಲಂಕೇಶ್ ಮೇಲೆ ಬಿತ್ತು. ಅಪ್ಪನ ಜವಾಬ್ದಾರಿ ಹೊತ್ತುಕೊಂಡು ಕಷ್ಟಪಟ್ಟು ಪತ್ರಿಕೆ ಮುನ್ನಡೆಸಿದ ಅವರದು ಬಹುಪಾಲು ಪ್ರವಾಹದ ವಿರುದ್ಧದ ಈಜು. ‌ಪತ್ರಕರ್ತೆ ಮಾತ್ರವಾಗಿಯಲ್ಲದೇ ಜನಪರ ಚಳವಳಿಗಳ ಸಂಗಾತಿಯಾಗಿ ಗೌರಿ ಲಂಕೇಶ್ ಬೆಳೆದ ಪರಿ ಅನನ್ಯ” ಎಂದರು.

ಗೌರಿ ಲಂಕೇಶ್‌ರವರನ್ನು ಮುಗಿಸುವ ಮೂಲಕ ದನಿ ಅಡಗಿಸಲು ಬಲಪಂಥೀಯರು ಪ್ರಯತ್ನಿಸಿದರು. ಆದರೆ ಅವರ ಪತ್ರಿಕೆಯನ್ನು ಮುನ್ನಡುಸುವ ಮೂಲಕ ಅವರ ಆಶಯಗಳನ್ನು ಮುಂದುವರೆಸಲು ನಾವೆಲ್ಲರೂ ಪ್ರಯತ್ನಿಸುತ್ತಿದ್ದೇವೆ. ಆದರೆ ಲಂಕೇಶ್ ಇದ್ದಾಗಿನ ಪ್ರವಾಹ, ಗೌರಿ ಇದ್ದಾಗಿನ ಪ್ರವಾಹ ಮತ್ತು ಇಂದಿನ ಪ್ರವಾಹ ಬೇರೆ ಬೇರೆಯಾಗಿವೆ. ಪ್ರವಾಹದ ತೀವ್ರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಕಚ್ಚಿಕೊಂಡು ನಿಂತುಕೊಂಡು ಅದರ ವಿರುದ್ಧ ಸಂಘರ್ಷ ನಡೆಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ರವರ ಸ್ಮರಣೆ..

Posted by Naanu Gauri on Friday, September 4, 2020

ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮವು ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ನಿನ್ನೆ ’ಗೌರಿ ನೆನಹು’ ಆಯೋಜನೆಯಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ಯ್ರ ಹೋರಾಟಗಾರ ದೊರೆಸ್ವಾಮಿ ಮಾತನಾಡಿ, ಕೋಮುವಾದಿಗಳು ಗೌರಿಯನ್ನು ಕೊಂದಿರಬಹುದು ಆದರೆ ಅವರ ಚಿಂತನೆಗಳು ಸದಾ ಇರುತ್ತದೆ, ಅವರು ಹಾಕಿಕೊಟ್ಟ ಮೌಲ್ಯಗಳ ಅಡಿಯಲ್ಲಿ ಸಾಗಿ ಧೈರ್ಯದಿಂದ ಕೋಮುವಾದಿಗಳನ್ನು ಎದುರಿಸಬೇಕಾಗಿದೆ ಎಂದು ಹೇಳಿದ್ದರು. ಕಾರ್ಯಕ್ರಮದಲ್ಲಿ ಕವಿತಾ ಲಂಕೇಶ್, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಗೌರಿ ಮೀಡಿಯಾ ಟ್ರಸ್ಟ್‌‌ನ ದೊಡ್ಡಿಪಾಳ್ಯ ನರಸಿಂಹ ಮೂರ್ತಿ‌ ಸೇರಿದಂತೆ ಹಲವಾರು ಭಾಗಿಯಾಗಿದ್ದರು.

ನೆನಪುಗಳಲ್ಲಿ ನಮ್ಮ ಗೌರಿ – ವೆಬಿನಾರ್…

ನೆನಪುಗಳಲ್ಲಿ ನಮ್ಮ ಗೌರಿ – ವೆಬಿನಾರ್ಮಾತನಾಡುವವರುಎಚ್.ಎಸ್.ದೊರೆಸ್ವಾಮಿ, ಚಂದ್ರಶೇಖರ್‌ ಆಜಾದ್‌ ರಾವಣ್‌, ತೀಸ್ತಾ ಸೆಟ್ಲ್‌ವಾದ್‌, ನೂರ್‌ ಶ್ರೀಧರ್‌, ಕವಿತಾ ಲಂಕೇಶ್

Posted by Naanu Gauri on Friday, September 4, 2020

ಅಷ್ಟೇ ಅಲ್ಲದೆ, ಪಿಯುಸಿಎಲ್ ಕರೆಯಂತೆ ದೇಶದಾದ್ಯಂತ ಆಗಸ್ಟ್ 28 ರಿಂದ ಸೆಪ್ಟೆಂಬರ್‌ 5 ರ ವರೆಗೆ ಒಂದು ವಾರ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, 70 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ

ತಮಿಳುನಾಡಿನಲ್ಲಿ ’ತಮಿಳಗ ಮಕ್ಕಳ್ ಪನ್ಬಾಟ್ಟು ಕಳಗಂ’, ನರೇದ್ರ ಧಾಬೋಲ್ಕರ್‌, ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಸ್ಮರಣಾರ್ಥ ಸಭೆಯನ್ನು ನಡೆಸುತ್ತಿದೆ.

ದೆಹಲಿ ಗಲಭೆಯ ನೈಜ ಅಪರಾಧಿಗಳನ್ನು ಬಂಧಿಸುವಂತೆ, ಎಲ್ಲಾ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸುವಂತೆ, ಸಿಎಎ-ಎನ್‌ಆರ್‌ಸಿ-ಎನ್‌ಆರ್‌ಪಿ ಮತ್ತು ಯುಎಪಿಎಯನ್ನು ರದ್ದುಗೊಳಿಸುವಂತೆ ಹಾಗೂ ಪ್ರಜಾಪ್ರಭುತ್ವ ಹಕ್ಕಿನ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ವಿರೋಧಿಸಿ ಗೌರಿ ಲಂಕೇಶ್ ಹುತಾತ್ಮ ದಿನದ ಅಂಗವಾಗಿ ಜಂಶೆಡ್‌ಪುರದ ಡಿಸಿ ಕಚೇರಿಯ ಮುಂದೆ ಪ್ರತಿಭಟನಾ ಸಭೆ ನಡೆಯಲಿದೆ.

ಗೌರಿ ಲಂಕೇಶ್‌ ಅವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ.

ಮೂಲ ಕವಿತೆ :Kavitha Lankeshಕನ್ನಡಕ್ಕೆ : Shiva Sundarಪ್ರಸ್ತುತಿ:Najma Nazeer Chikkaneraleಸಂಕಲನ:Viewlivetv Irshad Kalkatta#ifwedonotrise #ifwedonotrisekarnataka #ನಾವೆದ್ದುನಿಲ್ಲದಿದ್ದರೆ‌ #GauriLankesh #poetry ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಮಾತಾಡೋಣ ಸೆಪ್ಟೆಂಬರ್ ೫ರಂದು.

Posted by Najma Nazeer Chikkanerale on Tuesday, September 1, 2020

’ನಾವೆದ್ದು ನಿಲ್ಲದಿದ್ದರೆ’ ಅಭಿಯಾನವನ್ನು ಬೆಂಬಲಿಸಿರುವ ’ಸೃಜನಿ ಧಾರವಾಡ’ ತಂಡವು, ’ಗೌರಿ ನೆನಪಿಗೊಂದು ಹೂ’ ಎಂಬ ಗೌರಿ ಲಂಕೇಶರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ರಜನಿ ಗರುಡ, ಡಾ. ಸುರೇಖಾ ದೇವಿ, ಡಾ. ವಿನಯಾ ಒಕ್ಕುಂದ, ಡಾ. ಸಿದ್ದನಗೌಡ ಪಾಟಿಲ,ಡಾ. ಮಾಲತಿ ಪಟ್ಟಣಶೆಟ್ಟಿ ಸೇರಿದಂತೆ ಹಲವಾರು ಜನರು ಭಾಗವಹಿಸಿಲಿದ್ದಾರೆ.

ಇಷ್ಟೇ ಅಲ್ಲದೆ ದೇಶದ ಹಲವಾರು ವಿದ್ಯಾರ್ಥಿ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು, ಪತ್ರಕರ್ತರು ಹುತಾತ್ಮ ಗೌರಿ ಲಂಕೇಶ್‌ ಅವರನ್ನು ನೆನಪಿಸಿಕೊಂಡಿದ್ದಾರೆ.


ಇದನ್ನೂ ಓದಿ: ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...