HomeUncategorizedನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, "ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ" ಎಂದು ಹೇಳಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾಗಿ ಆರೋಪಿಸಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ನೇತೃತ್ವದ ಜನರ ಗುಂಪು ತಮ್ಮ ಹಲ್ಲೆ ಮಾಡಿದ್ದಾರೆ ಎಂದು ನಟಿ ಸಂಯುಕ್ತ ಹೆಗ್ಡೆ ಆರೋಪಿಸಿದ್ದಾರೆ.

ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲಿ ನೆರೆದಿದ್ದ ಜನರು ಅವರು ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೆ ವ್ಯಕ್ತಿಯೊಬ್ಬ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸುವುದಾಗಿ ಅವರನ್ನು ಬೆದರಿಸಿರುವುದು ಅವರ ಮತ್ತೊಂದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ಕವಿತಾ ರೆಡ್ಡಿ ಕೂಡ ಪೊಲೀಸರನ್ನು ಸ್ಥಳಕ್ಕೆ ಕರೆದು ನಟಿ ಮತ್ತು ಅವರ ಸ್ನೇಹಿತರನ್ನು ಸಾರ್ವಜನಿಕವಾಗಿ  ಅಸಭ್ಯತೆಯಿಂದ ವರ್ತಿಸಿದ್ದಕ್ಕೆ ಕೇಸು ದಾಖಲಿಸಬೇಕು ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇನ್ಸ್ಟ್ರಾಗ್ರಾಮ್ ಲೈವ್ ವಿಡಿಯೋದಲ್ಲಿ ಇದು ತುಂಬಾ ತಪ್ಪು ಎಂದು ಹೇಳಿರುವ ಸಂಯುಕ್ತ ಹೆಗ್ಡೆ, “ನಾವು ನಮ್ಮಷ್ಟಕ್ಕೆ ವ್ಯಾಯಾಮ ಮಾಡುತ್ತಿದ್ದೆವು, ಇಲ್ಲಿಗೆ ಬಂದ ಈ ಮಹಿಳೆ (ಕವಿತಾ ರೆಡ್ಡಿ) ಕ್ರೀಡಾ ಉಡುಪಿನ ಬಗ್ಗೆ ತಕರಾರು ತೆಗೆದು ನಾವು ಅಸಭ್ಯವಾಗಿ ವರ್ತಿಸುತ್ತಿದ್ದೇವೆ ಎಂದು ಹೇಳಲು ಪ್ರಾರಂಭಿಸಿದರು. ಪ್ರಸ್ತುತ ಚಿತ್ರರಂಗದಲ್ಲಿ ಡ್ರಗ್ಸ್‌ ಬಗ್ಗೆ ಚರ್ಚೆಯಾಗುತ್ತಿರುವ ಕಾರಣ ಈಗ ಇಲ್ಲಿನ ಜನರು ನಾವು ಡ್ರಗ್ಸ್‌ಗಳನ್ನು ಸೇವಿಸಿದ್ದೇವೆ ಎಂದು ಆರೋಪಿಸುತ್ತಿದ್ದಾರೆ” ಎಂದು ತಾವು ತೊಟ್ಟಿದ್ದು ಕೇವಲ ಕ್ರೀಡಾ ಉಡುಪು ಎಂದು ಸ್ಪಷ್ಟಪಡಿಸಿದರು.

ಘಟನೆ ನಡೆದಾಗ ಪಾರ್ಕ್‌ನಿಂದ ಹೊರ ಹೋಗಲು ಯತ್ನಿಸಿದಾಗಲು ಪಾರ್ಕ್ ಗೇಟ್‌ಗೆ ಬೀಗ ಹಾಕಿ ಅವರನ್ನು ಹೊರಹೋಗದಂತೆ ಅವರನ್ನು ತಡೆದಿದ್ದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.

ಅಷ್ಟೇ ಅಲ್ಲದೆ ಪೊಲೀಸರೊಂದಿಗೆ, ನೀವ್ಯಾಕೆ ಸತ್ಯದ ಪರ ನಿಲ್ಲುತ್ತಿಲ್ಲ ಎಂದು ನಟಿ ಕೇಳಿರುವ ಪ್ರಶ್ನೆಗೆ, ಪೊಲೀಸ್‌ ಅಧಿಕಾರಿಯೊಬ್ಬರು ”ಇದು ತಪ್ಪು ಒಪ್ಪಿನ ಪ್ರಶ್ನೆಯಲ್ಲ, ಇಲ್ಲಿ ಜನ ಸೇರುತ್ತಿದ್ದಾರೆ. ದಯವಿಟ್ಟು ಹೊರಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಅಷ್ಟೇ ಅಲ್ಲದೆ ತನ್ನ ಗೆಳತಿ ಮೇಲೆ ಕವಿತಾ ಹಲ್ಲೆ ನಡೆಸಲು ಹೋಗಿದ್ದಾರೆ ಎಂದು ನಟಿ ಆರೋಪಿಸಿದ್ದು, ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಾಕಿದ್ದಾರೆ. ವಿಡಿಯೋದಲ್ಲಿ ಕವಿತಾ ರೆಡ್ಡಿ ಯುವತಿಯನ್ನು ದೂಡುತ್ತಿರುವುದು ದಾಖಲಾಗಿದೆ.

ನಟಿ ಘಟನೆಯ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿ ನೋವು ತೋಡಿಕೊಂಡಿದ್ದಾರೆ.

ಇಡೀ ಘಟನೆಯಲ್ಲಿ ಕೆಲವು ಜನರು ನಟಿ ಸಂಯುಕ್ತ ಹೆಗ್ಡೆ ಪರವಾಗಿ ಮಾತನಾಡಿದ್ದು ಇನ್ಸ್ಟ್ರಾಗ್ರಾಮ್ ಲೈವ್‌ನಲ್ಲಿ ದಾಖಲಾಗಿದೆ. ತನ್ನನ್ನು ತಾನು ಡಾಕ್ಟರ್‌ ಎಂದು ಪರಿಚಯ ಮಾಡಿಕೊಂಡಿರುವ ಒಬ್ಬರು “ನಟಿ ಸಂಯುಕ್ತ ಹೆಗ್ಡೆ ಬಹಳ ದಿನದಿಂದ ಇಲ್ಲಿ ವ್ಯಾಯಾಮ ಮಾಡಲು ಬರುತ್ತಾರೆ. ಅವರು ಅಸಭ್ಯವಾಗಿ ನಡೆದುಕೊಂಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ‌ ಜೊತೆ ಮಾತನಾಡಿದ ಕವಿತಾ ರೆಡ್ಡಿ, “ಸಾರ್ವಜನಿಕ ಪಾರ್ಕ್‌ನಲ್ಲಿ ಯುವತಿಯರು ಸಂಗೀತ ಹಾಕಿ ನೃತ್ಯ ಮಾಡಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಜನರು ಕರೆ ಮಾಡಿ ಹೇಳಿದ್ದಕ್ಕೆ ನಾನು ಅಲ್ಲಿ ತಲುಪಿದ್ದೆ. ಅಲ್ಲಿ ತಲುಪಿ ಯುವತಿಯರೊಂದಿಗೆ ಸಂಗೀತ ಹಾಕಿ ನೃತ್ಯ ಮಾಡಲು ಯಾವ ಪಾರ್ಕಿನಲ್ಲೂ ಅವಕಾಶವಿಲ್ಲ. ನೀವು ಇಲ್ಲಿಂದ ಹೊರಡಿ ಎಂದು ವಿನಂತಿಸಿದ್ದೆ. ಆದರೆ ಯುವತಿಯರು ಅದಕ್ಕೂ ಒಪ್ಪದಿದ್ದಕ್ಕೆ  ಪೊಲೀಸರಿಗೆ ಸಂಪರ್ಕಿಸಿ ಅವರ ಪೋಟೋವನ್ನು ಕ್ಲಿಕ್ಕಿಸುವಾಗ ಅದರಲ್ಲಿರುವ ಯುವತಿಯೊಬ್ಬಳು ನನಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಅದಕ್ಕಾಗಿ ನಾವು ಅವರನ್ನು ಪ್ರಶ್ನಿಸಲು ಮುಂದೆ ಹೋಗಿದ್ದೆ. ಯುವತಿಯು ಅದೇ ವಿಡಿಯೋವನ್ನು ಟ್ವಿಟ್ಟರ್‌ಗೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, “ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ನಟಿ ಸಂಯುಕ್ತ ಜೊತೆ ಕವಿತಾ ರೆಡ್ಡಿ ನಡೆದುಕೊಂಡಿದ್ದು ಸರಿಯಲ್ಲ ಎಂದು ಹಲವರು ಕಿಡಿಕಾರಿದ್ದಾರೆ.

ನಟಿ ಸಂಯುಕ್ತ ಹೆಗಡೆ ಮೇಲೆ ಹಲ್ಲೆ ನಡೆಸಿದ, ವಸ್ತ್ರದ ಕಾರಣಕ್ಕೆ ಅವರ ಮೇಲೆ ದಾಳಿ ನಡೆಸಿದ ಅಷ್ಟೂ ಜನರ ಮೇಲೆ ಎಫ್ ಐಆರ್ ದಾಖಲಿಸಬೇಕು. ಕಾಂಗ್ರೆಸ್…

Posted by Naveen Soorinje on Saturday, September 5, 2020

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಗಾಯತ್ರಿ ಎಚ್.ಎನ್. ” ಪೋಸ್ಟ್ ಕಾರ್ಡ್ ವಿಕ್ರಮ್ ಹೆಗಡೆ ಕವಿತಾ ರೆಡ್ಡಿನ ಟ್ರೋಲ್ ಮಾಡ್ತಿದಾರೆ ಅನ್ನೋ ಕಾರಣಕ್ಕೆ, ಬಿಜೆಪಿಗಳು ಕಾಂಗ್ರೆಸ್ಸಿಗರನ್ನ ಕಿಚಾಯಿಸ್ತಿದಾರೆ ಅನ್ನೋ ಕಾರಣಕ್ಕೆ ಕವಿತಾ ರೆಡ್ಡಿ ಬಗ್ಗೆ ಸಾಫ್ಟ್ ಆಗಬೇಕಾದ, ಸಂಯುಕ್ತಾ ಬಗ್ಗೆ ರಾಂಗ್ ಆಗಬೇಕಾದ ಅಗತ್ಯ ಇಲ್ಲ.
ಇಂಥ ವಿಷಯಗಳಲ್ಲಿ ತಪ್ಪಾಗಿ ನಡೆದುಕೊಂಡ್ರೆ ನಮಗೆ ಮಾಳವಿಕಾನೂ ಒಂದೇ ಕವಿತಾನೂ ಒಂದೇ ಅನ್ನುವಷ್ಟು ಕ್ಲಾರಿಟಿ ನಮಗಿರಬೇಕು. ಕವಿತಾ ಬಟ್ಟೆ ಬಗ್ಗೆ ಡ್ರಗ್ ಬಗ್ಗೆ ಮಾತಾಡಿರೋದು ಯಾವ ರೀತಿಯಲ್ಲೂ ಸಮರ್ಥನೀಯ ಅಲ್ಲ. ಅವರ ಮುಖ ಉಳಿಸಲಿಕ್ಕೆ ಆಕೆಯ ಒಳ್ಳೆ ಕೆಲಸಗಳ ಪಟ್ಟಿ ಇಟ್ಟು ಸಂಯುಕ್ತಾರನ್ನು ಅಪರಾಧಿ ಮಾಡೋದು ತಪ್ಪು. ಕವಿತಾ ಅವರ ಸಾಮಾಜಿಕ ಚಟುವಟಿಕೆಗಳು ನಿಜ ಕಾಳಜಿಯಿಂದ ಮಾಡಿದ್ದಾಗಿದ್ದರೆ ಖಂಡಿತಾ ಗೌರವ ಇದೆ. ಅದು ಬೇರೆ. ಮತ್ತು ಇದು ಬೇರೆಯೇ. ಹಾಗೇ ನಾಳೆ ಸಂಯುಕ್ತ ಬಿಜೆಪಿ ಜಾಯಿನ್ ಆಗಿ ವೋಟ್ ಫಾರ್ ಮೋದಿ ಅನ್ನಬಹುದು. ಅದು ಆಕೆಯ ಹಣೆಬರಹ. ಅದು ಬೇರೆ ಮತ್ತು ಈಗಿನ ಘಟನೆ ಬೇರೆಯೇ. ಪ್ರತಿಯೊಂದನ್ನೂ ರಾಜಕೀಯವಾಗಿ ನೋಡುವ ಗೀಳು ನಾವು ಬಿಡದೆಹೋದರೆ ಉದ್ಧಾರ ಸಾಧ್ಯವಿಲ್ಲ. ಬಿಜೆಪಿಯವರು ಈ ಹೊತ್ತು ಸಂಯುಕ್ತಾನ ಸಪೋರ್ಟ್ ಮಾಡಿದರೆ, ನಗೆಪಾಟಲಿಗೆ ಈಡಾಗುತ್ತಾರೆ ಹೊರತು ಮತ್ತೇನಲ್ಲ. ಆ ತಲೆಬಿಸಿ ಬಿಟ್ಟು, ನಾಜೂಕು ಸೋಗಲಾಡಿತನ ತೋರದೆ, ವಿಷಯದ ಕುರಿತು ಸ್ಪಷ್ಟವಾಗಿರೋಣ” ಎಂದಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಮಾಧ್ಯಮಗಳ ವರ್ತನೆಯನ್ನು ಖಂಡಿಸಿ, “ಸುಡುಗಾಡು ನ್ಯೂಸ್ ಚಾನಲ್`ಗಳ ಹೆಡ್ಲೈನ್ ಗಮನಿಸಿ: “ಮತ್ತೆ ಸಂಯುಕ್ತಾ ಹೆಗಡೆ ಕಿರಿಕ್”, “ವಿವಾದ ಸೃಷ್ಟಿಸಿದ ಸಂಯುಕ್ತಾ ಹೆಗಡೆ”, “ಸಂಯುಕ್ತಾ ಹೆಗಡೆ ರಗಳೆ”.ಯಾಕ್ ಹೇಳಿ? ಹುಡ್ಗಿಯ ಚೆಂದ ಚೆಂದ ಫೋಟೋ ಹಾಕಿ ಜೊಲ್ ಪಾರ್ಟಿಗಳನ್ನ ಸ್ಕ್ರೀನ್ ಮುಂದೆ ಕೂರಿಸೋದು ಒಂದಾದ್ರೆ, ಮೂರೊತ್ತೂ ಚಾನಲ್`ಗಳ ಪ್ಯಾನಲ್ಲಲ್ಲಿ ಕೂತು ಸೆಲ್ಫ್ ಪ್ರಮೋಶನ್`ಗೆ ಒದ್ದಾಡೋ ಕವಿತಾ ರೆಡ್ಡಿಗೆ ಅಲ್ಪ ಕಾಣಿಕೆ ಕೊಡೋ ಐಡಿಯಾ ಮತ್ತೊಂದು. ಮತ್ಲಬೀ ದುನಿಯಾ, ಮಾನಗೆಟ್ಟ ಮಿಡಿಯಾ” ಎಂದು ಬರೆದಿದ್ದಾರೆ.

almeida gladson ಎಂಬುವವರು ಕವಿತಾ ರೆಡ್ಡಿಯವರ ವರ್ತನೆಯನ್ನು ಖಂಡಿಸಿ, “ಯಾಕೋ ಇವತ್ತು ಕವಿತಾ ರೆಡ್ಡಿಯವರಲ್ಲಿ ಪ್ರಮೋದ್ ಮುತಾಲಿಕರನ್ನು ಕಂಡೆ. ಯಾವ ವ್ಯತ್ಯಾಸವೂ ಇಲ್ಲ” ಎಂದು ಪೋಸ್ಟ್ ಮಾಡಿದ್ದಾರೆ.

ಆದರ್ಶ್ ಅಯ್ಯರ್ ಎಂಬುವವರು, “ನಾನು ನಿಮ್ಮೊಂದಿಗೆ ಸಿಎಎ ವಿರುದ್ಧದ ಹೊರಾಟದಲ್ಲಿ ಭಾಗಿಯಾಗಿದ್ದೆ. ಆದರೆ ನೀವೂ ಒಬ್ಬ ಮಹಿಳೆಯಾಗಿ ಇನ್ನೊಂದು ಮಹಿಳೆಯನ್ನು ಹೀಗೆ ಸಾರ್ವಜನಿಕವಾಗಿ ನಿಂದಿಸಿರುವುದು ಸರಿಯಲ್ಲ” ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...