Homeಕರೋನಾ ತಲ್ಲಣಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಕೋಟ್ಯಾಂತರ ರೂ ಖರ್ಚು ಮಾಡಿ ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದು ಇದನ್ನು ಇಷ್ಟು ಬೇಗ ಮುಚ್ಚುತ್ತಿರುವುದರಿಂದ ಬಹಳಷ್ಟು ನಷ್ಟ ಉಂಟಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಸೆ.15 ರಿಂದ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ತಿಳಿಸಿದೆ. ಕೊರೊನಾ ಸೋಂಕಿತರು ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಿಗೆ ಹೋಗುವ ಬದಲು ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಬಿಬಿಎಂಪಿ ತಿಳಿಸಿದೆ.

ಕೋಟ್ಯಾಂತರ ರೂ ಖರ್ಚು ಮಾಡಿ ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದು ಇದನ್ನು ಇಷ್ಟು ಬೇಗ ಮುಚ್ಚುತ್ತಿರುವುದರಿಂದ ಬಹಳಷ್ಟು ನಷ್ಟ ಉಂಟಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೇಂದ್ರದ ಉಸ್ತುವಾರಿ ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ  ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ಈ ಕೋವಿಡ್ ಕೇರ್ ಸೆಂಟರ್ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು. 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರ ಮಾಡುವ ಉದ್ದೇಶ ಹೊಂದಿತ್ತು. ಮೊದಲ ದಿನ 5,500 ಬೆಡ್‌ಗಳಿದ್ದ ಈ ಕೇಂದ್ರವನ್ನು ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದ ಸಚಿವರ ನಿಯೋಗವು ಜುಲೈ 27 ರಂದು ಉದ್ಘಾಟಿಸಿತ್ತು. ಈ ಬೃಹತ್ ಕೇಂದ್ರದಲ್ಲಿ ರೋಗಿಗಳ ಆರೈಕೆಗಾಗಿ ಕಾಟ್, ಫ್ಯಾನ್, ಬಕೆಟ್, ಮಗ್ ಮತ್ತು ಡಸ್ಟ್‌ಬಿನ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಇದಕ್ಕಾಗಿ ಕೋಟ್ಯಾಂತರ ರೂ ಖರ್ಚಾಗಿದ್ದು ಇದರಲ್ಲಿಯೂ ಹಗರಣ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಈಗ ಈ ಬೆಡ್‌ಗಳನ್ನು, ಪೀಠೋಪಕರಣಗಳನ್ನು ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯದ ವಸತಿ ನಿಲಯಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು ಎನ್ನಲಾಗಿದೆ.

ಇನ್ನು ಅತೀ ದೊಡ್ಡ ಕೋವಿಡ್ ಸೆಂಟರ್ ಎನ್ನುವ ಹೆಗ್ಗಳಿಕೆ ಜೊತೆಗೆ ವಿವಾದಗಳಿಗಗೂ ಈ ಆರೈಕೆ ಕೇಂದ್ರ ಕಾರಣವಾಗಿತ್ತು. ಇಲ್ಲಿ ನೀಡಲಾದ ಸೌಲಭ್ಯಗಳಿಗಳಿಗಾಗಿ, ಅಗತ್ಯ ವಸ್ತುಗಳನ್ನು ಖರೀದಿಸುವುದರ ಬಗ್ಗೆ ಮತ್ತು BIECಗೆ ನೀಡುವ ಬಾಡಿಗೆ ವಿಚಾರದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿತ್ತು. ವಿರೋಧ ಪಕ್ಷಗಳು ಸಾಕ್ಷಿ ಸಮೇತ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದವು.

ಸದ್ಯ ಸೋಂಕಿತರು ದಾಖಲಾಗುವ ಪ್ರಮಾಣ ಕಡಿಮೆಯಿದೆ ಎಂದು ಸೆಪ್ಟೆಂಬರ್ 15ರಿಂದ BIEC ಮುಚ್ಚಲಾಗುತ್ತಿದೆ. ಇದರ ಹೊರತಾಗಿಯೂ ಹಲವಾರು COVID-19 ಆರೈಕೆ ಕೇಂದ್ರಗಳು ಸಹ ಮುಂದಿನ ದಿನಗಳಲ್ಲಿ ಮುಚ್ಚುವ ನಿರೀಕ್ಷೆಯಿದೆ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...