Homeಕರೋನಾ ತಲ್ಲಣಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಕೋಟ್ಯಾಂತರ ರೂ ಖರ್ಚು ಮಾಡಿ ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದು ಇದನ್ನು ಇಷ್ಟು ಬೇಗ ಮುಚ್ಚುತ್ತಿರುವುದರಿಂದ ಬಹಳಷ್ಟು ನಷ್ಟ ಉಂಟಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಸೆ.15 ರಿಂದ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ತಿಳಿಸಿದೆ. ಕೊರೊನಾ ಸೋಂಕಿತರು ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಿಗೆ ಹೋಗುವ ಬದಲು ಮನೆಯಲ್ಲಿಯೇ ಐಸೋಲೇಷನ್ ಆಗುತ್ತಿರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಬಿಬಿಎಂಪಿ ತಿಳಿಸಿದೆ.

ಕೋಟ್ಯಾಂತರ ರೂ ಖರ್ಚು ಮಾಡಿ ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದು ಇದನ್ನು ಇಷ್ಟು ಬೇಗ ಮುಚ್ಚುತ್ತಿರುವುದರಿಂದ ಬಹಳಷ್ಟು ನಷ್ಟ ಉಂಟಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೇಂದ್ರದ ಉಸ್ತುವಾರಿ ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ  ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗೌರಿ ಲಂಕೇಶ್ ಇಲ್ಲದ ಈ ಮೂರು ವರುಷಗಳು : ಪ್ರೊ.ಸಬಿಹಾ ಭೂಮಿಗೌಡ

ಈ ಕೋವಿಡ್ ಕೇರ್ ಸೆಂಟರ್ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು. 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರ ಮಾಡುವ ಉದ್ದೇಶ ಹೊಂದಿತ್ತು. ಮೊದಲ ದಿನ 5,500 ಬೆಡ್‌ಗಳಿದ್ದ ಈ ಕೇಂದ್ರವನ್ನು ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದ ಸಚಿವರ ನಿಯೋಗವು ಜುಲೈ 27 ರಂದು ಉದ್ಘಾಟಿಸಿತ್ತು. ಈ ಬೃಹತ್ ಕೇಂದ್ರದಲ್ಲಿ ರೋಗಿಗಳ ಆರೈಕೆಗಾಗಿ ಕಾಟ್, ಫ್ಯಾನ್, ಬಕೆಟ್, ಮಗ್ ಮತ್ತು ಡಸ್ಟ್‌ಬಿನ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಇದಕ್ಕಾಗಿ ಕೋಟ್ಯಾಂತರ ರೂ ಖರ್ಚಾಗಿದ್ದು ಇದರಲ್ಲಿಯೂ ಹಗರಣ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಈಗ ಈ ಬೆಡ್‌ಗಳನ್ನು, ಪೀಠೋಪಕರಣಗಳನ್ನು ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯದ ವಸತಿ ನಿಲಯಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು ಎನ್ನಲಾಗಿದೆ.

ಇನ್ನು ಅತೀ ದೊಡ್ಡ ಕೋವಿಡ್ ಸೆಂಟರ್ ಎನ್ನುವ ಹೆಗ್ಗಳಿಕೆ ಜೊತೆಗೆ ವಿವಾದಗಳಿಗಗೂ ಈ ಆರೈಕೆ ಕೇಂದ್ರ ಕಾರಣವಾಗಿತ್ತು. ಇಲ್ಲಿ ನೀಡಲಾದ ಸೌಲಭ್ಯಗಳಿಗಳಿಗಾಗಿ, ಅಗತ್ಯ ವಸ್ತುಗಳನ್ನು ಖರೀದಿಸುವುದರ ಬಗ್ಗೆ ಮತ್ತು BIECಗೆ ನೀಡುವ ಬಾಡಿಗೆ ವಿಚಾರದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿತ್ತು. ವಿರೋಧ ಪಕ್ಷಗಳು ಸಾಕ್ಷಿ ಸಮೇತ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದವು.

ಸದ್ಯ ಸೋಂಕಿತರು ದಾಖಲಾಗುವ ಪ್ರಮಾಣ ಕಡಿಮೆಯಿದೆ ಎಂದು ಸೆಪ್ಟೆಂಬರ್ 15ರಿಂದ BIEC ಮುಚ್ಚಲಾಗುತ್ತಿದೆ. ಇದರ ಹೊರತಾಗಿಯೂ ಹಲವಾರು COVID-19 ಆರೈಕೆ ಕೇಂದ್ರಗಳು ಸಹ ಮುಂದಿನ ದಿನಗಳಲ್ಲಿ ಮುಚ್ಚುವ ನಿರೀಕ್ಷೆಯಿದೆ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...