Homeಮುಖಪುಟಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಹಲವರು ನನಗೆ ಮುಂಬೈಗೆ ಬಾರದಂತೆ ಬೆದರಿಕೆಯೊಡ್ಡುತ್ತಿದ್ದಾರೆ. ಆದರೆ ನಾನು ಸೆ.9ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ. ಧೈರ್ಯವಿದ್ದರೆ ತಡೆಯಲಿ ನೋಡೋಣ ಎಂದಿದ್ದಾರೆ ಕಂಗನಾ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದು ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಟ್ವಿಟ್ಟರ್‌ನಲ್ಲಿ ಸಾರ್ವಜನಿಕರು, ರಾಜಕಾರಣಿಗಳು ಸೇರಿದಂತೆ ನಟ, ನಟಿಯರು ರಾಣಾವತ್ ಪರ-ವಿರುದ್ಧ ಮುಗಿಬಿದ್ದಿದ್ದಾರೆ.

ಮರಾಠಿ ಚಲನಚಿತ್ರೋದ್ಯಮ ಮತ್ತು ಬಾಲಿವುಡ್ ಚಿತ್ರರಂಗದವರು ಕೂಡ ನಟಿಯ ಹೇಳಿಕೆಗೆ ಬಲವಾದ ಪ್ರತಿರೋಧ ನೀಡಿದ್ದಾರೆ. ಟ್ವಿಟ್ಟರ್‌ನಲ್ಲಿ ಮಹಾರಾಷ್ಟ್ರದ ಸಾರ್ವಜನಿಕರು ಮತ್ತು ಮಹಾ ವಿಕಾಸ್ ಅಘಾಡಿ ಬೆಂಬಲಿಗರು ಸೇರಿ ರಾಣಾವತ್ ಹೇಳಿಕೆ ಉಲ್ಲೇಖಿಸಿ #AmchiMumbai ಮತ್ತು #ILoveMumbai ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಟ್ರೆಂಡಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ಇತ್ತ ಉದ್ಧವ್ ಠಾಕ್ರೆ ಸಂಪುಟದಲ್ಲಿ ಕೆಲವು ಹಿರಿಯ ಮಂತ್ರಿಗಳು, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, ಶಿವಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಸೇರಿ ಹಲವರು ಕಂಗನಾ ಟ್ವೀಟ್‌ಗಳನ್ನು ಟೀಕಿಸಿದ್ದಾರೆ.

ಇಂದು ಮುಂಬೈ ಮತ್ತು ಮಹಾರಾಷ್ಟ್ರ ನಮ್ಮ ಪೊಲೀಸರಿಂದ ಸುರಕ್ಷಿತವಾಗಿದೆ. ಇದು ಸುರಕ್ಷಿತವಲ್ಲ ಎಂದು ಭಾವಿಸುವವರಿಗೆ ಇಲ್ಲಿ ವಾಸಿಸುವ ಹಕ್ಕಿಲ್ಲ ಎಂದು ಅನಿಲ್ ದೇಶ್ಮುಖ್ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಂಗನಾ ಹಲವರು ನನಗೆ ಮುಂಬೈಗೆ ಬಾರದಂತೆ ಬೆದರಿಕೆಯೊಡ್ಡುತ್ತಿದ್ದಾರೆ. ಆದರೆ ನಾನು ಸೆಪ್ಟಂಬರ್ 9 ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ. ಧೈರ್ಯವಿದ್ದರೆ ತಡೆಯಲಿ ನೋಡೋಣ. ಮತ್ತು ನಾನು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯವನ್ನು ಪೋಸ್ಟ್ ಮಾಡುತ್ತೇನೆ ಎಂದು ಕಂಗನಾ ಸವಾಲು ಹಾಕಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಬಗ್ಗೆ ಕಂಗನಾ ರನೌತ್ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಕಂಗನಾ ರಾಣಾವತ್ ಮಹಾರಾಷ್ಟ್ರಕ್ಕೆ ಏನನ್ನೂ ಕಲಿಸಲು ಪ್ರಯತ್ನಿಸಬಾರದು. ಅಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಕಂಗನಾ ಮೂಲಕ ಬಿಜೆಪಿಯನ್ನು ಆಕ್ರಮಣ ಮಾಡಲು ಯಾರೂ ಪ್ರಯತ್ನಿಸಬಾರದು ಎಂದು ಬಿಜೆಪಿಯ ಹಿರಿಯ ಮುಖಂಡ ಆಶಿಶ್ ಶೆಲಾರ್ ಟ್ವೀಟ್ ಮಾಡಿದ್ದಾರೆ. ಆದರೆ ಈ ಎಲ್ಲಾ ಘಟನೆಗಳಿಂದ, ಕಾಮೆಂಟ್‌ಗಳಿಂದ ಬಿಜೆಪಿ ದೂರವೇ ಉಳಿದಿದೆ.

ಇತ್ತ ನಟಿ ರಾಣಾವತ್ ಬೆಂಬಲಿಗರು ಸಹ ಅವರ ಪರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಕಂಗನಾ ನಿಜ ಹೇಳಿದ್ದಾರೆ. ಭಾರತ ಸುರಕ್ಷಿತವಲ್ಲ ಎಂದು ಶಾರುಖ್ ಖಾನ್, ಅಮೀರ್ ಖಾನ್ ಹೇಳಿದರೆ ಸುಮ್ಮನಿರುತ್ತೀರಿ, ಕಂಗನಾ ಮುಂಬೈ ಸೇಫ್ ಅಲ್ಲ ಎಂದರೆ ಹೀಗೆ ಆಕ್ರಮಣ ಮಾಡುತ್ತೀರಿ ಎಂದಿದ್ದಾರೆ.

ರಾಣಾವತ್ ಅಭಿಮಾನಿಗಳು #KanganaVsSena ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಮಾಡಿದ್ದಾರೆ. ಮರಾಠಿ ಸಂಸ್ಕೃತಿ ಮತ್ತು ಶಿವಾಜಿ ಮಹಾರಾಜರನ್ನು ಕಂಗನಾ ಎಲ್ಲಿ ಅವಮಾನಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ, ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮುಗಿಬಿದ್ದು, ಮುಂಬೈ ಬಗ್ಗೆ ಕಂಗನಾ ಮಾಡಿದ ಟ್ವೀಟ್ ಮರಾಠಿ, ಬಾಲಿವುಡ್, ಮಹಾರಾಷ್ಟ್ರದಲ್ಲಿ ಕಿಡಿ ಹಚ್ಚಿರುವುದಂತೂ ಸುಳ್ಳಲ್ಲ. ಈಗಲೂ ನಟಿಯ ಹೇಳಿಕೆ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಸೆ.9ರಂದು ಮುಂಬೈಗೆ ಬರುತ್ತೇನೆ ಎಂದು ಕಂಗನಾ ಹೇಳಿದ್ದಾರೆ. ಅವರು ವಿರುದ್ಧ ಅಂದು ಏನೇನು ಘಟನೆಗಳು ನಡೆಯುತ್ತವೆಯೋ ಎಂಬುದು ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಚರ್ಚೆ ಹುಟ್ಟುಹಾಕಿದೆ.


ಇದನ್ನೂ ಓದಿ: ಕಂಗನಾಗೆ ನಮ್ಮ ರಾಜ್ಯದಲ್ಲಿ ವಾಸಿಸುವ ಹಕ್ಕಿಲ್ಲ: ಮಹಾರಾಷ್ಟ್ರ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...