Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...