Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...