Homeಮುಖಪುಟದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

"ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ" ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಅವರು ಗೇಲಿ ಮಾಡಿದ್ದರು.

- Advertisement -
- Advertisement -

ಇಸ್ಲಾಮೋಫೋಬಿಕ್, ಅಶ್ಲೀಲ ಮತ್ತು ದಲಿತ ವಿರೋಧಿ ಪೋಸ್ಟ್ ಗಳನ್ನು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದ ಕರ್ನಲ್ ರಾಕೇಶ್ ಮೋಹನ್ ಜೋಶಿಯನ್ನು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS)ನ ರಿಜಿಸ್ಟ್ರಾರ್ ಆಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಮುಂಬೈನ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

“ದಲಿತ ವಿರೋಧಿ ವ್ಯಕ್ತಿ TISS ರಿಜಿಸ್ಟ್ರಾರ್ ಆಗಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ವಿದ್ಯಾರ್ಥಿಗಳು, ಅವರು ಹಂಚಿಕೊಂಡಿರುವ ಪೋಸ್ಟ್ ಗಳನ್ನು ಡಿಲಿಟ್ ಮಾಡಿದರೆ ಮಾತ್ರ ಸಾಲದು” ಎಂದು ಸುಮಾರು 1,200ಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ಪತ್ರ ಚಳುವಳಿ ಮಾಡುತ್ತಿದ್ದಾರೆ.

ಕರ್ನಲ್ ರಾಕೇಶ್ ಮೋಹನ್ ಜೋಶಿಯಂತಹ ಕೋಮುದ್ವೇಷಿ ಮತ್ತು ದಲಿತ ವಿರೋಧಿ ವ್ಯಕ್ತಿ  TISSನಂತಹ ಸಂಸ್ಥೆಗೆ ನೇಮಕಗೊಂಡಿರುವುದು ಸಮಸ್ಯಾತ್ಮಕವಾಗಬಹುದು ಎಂಬುದಾಗಿ ಪ್ರಗತಿಪರ ವಿದ್ಯಾರ್ಥಿಗಳ ವೇದಿಕೆ (PSF) ಹೇಳಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ರಾಕೇಶ್ ಮೋಹನ್ ಜೋಶಿ ಹಂಚಿಕೊಂಡಿರುವ ಕೆಲವು ಪೋಸ್ಟ್ ಗಳು ಯಾವುದೋ ಒಂದು ಧರ್ಮದ ವಿರುದ್ಧ ಪ್ರಚೊದನಾಕಾರಿ ನಿಲುವನ್ನು ಹೊಂದಿದ್ದು, ಕೋಮುಪ್ರಚೋದನೆಯನ್ನು ಉತ್ತೇಜಿಸುವಂತದ್ದಾಗಿದೆ ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ..

“ಹೊಸದಾಗಿ ನೇಮಕಗೊಂಡ ರಿಜಿಸ್ಟ್ರಾರ್, ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು, ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ದೂಷಿಸಿದ್ದು, ಮಾಧ್ಯಮದ ಹಲವು ವ್ಯಕ್ತಿಗಳನ್ನು ಪ್ರಾಸ್ಟಿಟ್ಯೂಟ್ (ವ್ಯಭಿಚಾರಿಗಳು) ಎಂದು ಕರೆದಿದ್ದಾರೆ. ಹಾಸ್ಯನಟ-ಕಾರ್ಯಕರ್ತ ವರುಣ್ ಗ್ರೋವರ್ ಅವರನ್ನು ಕೀಳಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಅವರು ತಬ್ಲಿಘಿ ಜಮಾಅತ್ ವಿರುದ್ಧ ಪ್ರಚೋದನಕಾರಿ ಮತ್ತು ಕೋಮುವಾದದ ಪೋಸ್ಟ್ ಮಾಡಿದ್ದು, “ಭಾರತವು ಇನ್ನೂ ಕೊರೊನಾ ವೈರಸ್ ವಿರುದ್ಧ ಲಸಿಕೆ ಕಂಡುಹಿಡಿದಿಲ್ಲ. ಏಕೆಂದರೆ 90% ಅಂಕಗಳನ್ನು ಪಡೆದ ಜನರು ಪಕೋಡಾ ಮಾರಾಟ ಮಾಡುತ್ತಿದ್ದಾರೆ ಮತ್ತು 40% ಗಳಿಸಿದವರು ಪ್ರಯೋಗಾಲಯಗಳಲ್ಲಿ ಪ್ರಯೋಗ ನಡೆಸುತ್ತಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಮೀಸಲಾತಿಯನ್ನು ಗೇಲಿ ಮಾಡಿದ್ದರು.

“ನಮ್ಮ ಹೊಸ ರಿಜಿಸ್ಟ್ರಾರ್ ನೀಡಿರುವ, ದಲಿತ ಸಮುದಾಯದ ವಿರುದ್ಧ ಇಂತಹ ಪೂರ್ವಗ್ರಹಪೀಡಿತ ದೃಷ್ಟಿಕೋನಗಳು ಮತ್ತು ಕೋಮು ದ್ವೇಷದ ಹೇಳಿಕೆಗಳನ್ನು ಗಮನಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ವಿಭಾಗಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ” ಎಂದು PSF ಸದಸ್ಯ ರಾಮದಾಸ್ ಹೇಳಿದರು.

“ರಿಜಿಸ್ಟ್ರಾರ್ ಆಡಳಿತದ ಮುಖ್ಯಸ್ಥರಾಗಿದ್ದು, ಸಣ್ಣ ಸಣ್ಣ ಕಾರ್ಯಕ್ರಮಗಳಿಗೆ ಅನುಮೋದನೆ ನೀಡುವಂತಹ ಕರ್ತವ್ಯಗಳಿಂದ ಹಿಡಿದು ದೊಡ್ಡ ಮಟ್ಟದ ನಿರ್ಧಾರಗಳನ್ನು ತೆಗೆದುಕೊಳ್ಳುವವರೆಗೂ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ ಅವರ ಏಕಪಕ್ಷೀಯ ದೃಷ್ಟಿಕೋನಗಳು ಈ ಎಲ್ಲದರ ಮೇಲೆ ಪರಿಣಾಮ ಬೀರಬಹುದು. ರಿಜಿಸ್ಟ್ರಾರ್ ವಿದ್ಯಾರ್ಥಿವೇತನವನ್ನೂ ಸಹ ತಡೆಹಿಡಿಯಬಹುದು” ಎಂದು ಅವರು ಹೇಳಿದರು.

TISSನಲ್ಲಿ ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿರುವ ಅವಿನಾಶ್ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿ, “ಈ ಸಂಸ್ಥೆ ನಡೆಯುತ್ತಿರುವುದೇ Activism Based Social Sience ಮೇಲೆ. ಇಲ್ಲಿ ವಿದ್ಯಾರ್ಥಿಗಳಿಂದ-ಪ್ರಾಧ್ಯಾಪಕರುಗಳ ತನಕ ನೂರಾರು ಹೋರಾಟಗಾರರಿದ್ದಾರೆ. ಇಂತಹ ಸ್ಥಳಕ್ಕೆ ಏಕಪಕ್ಷೀಯ ದೃಷ್ಟಿಕೋನವುಳ್ಳವರು, ನಿರ್ಧಾರ ತೆಗೆದುಕೊಳ್ಳುವ ಸ್ಥಾನಕ್ಕೆ ನೇಮಕಗೊಂಡರೆ, ಖಂಡಿತ ಅವುಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಾರೆ” ಎಂದು ಹೇಳಿದರು.


ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...