Homeಮುಖಪುಟಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಹೆಸರೂ ಸೇರಿ ಎಲ್ಲವೂ ಸಂಶಯಾಸ್ಪದವಾಗಿದ್ದ ಸತ್ಯಶೋಧನಾ ಸಮಿತಿ: ಆರೆಸ್ಸೆಸ್ ಹೀಗೇಕೆ ಮಾಡಿತು?

ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಉಂಟಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇರಬೇಕೆಂಬುದು ಕಡ್ಡಾಯವೇ?

- Advertisement -
- Advertisement -

ಕಳೆದ ತಿಂಗಳು ಸಂಭವಿಸಿದ ಬೆಂಗಳೂರಿನ ಕೆ.ಜೆ.ಹಳ್ಳಿ ಡಿಜೆಹಳ್ಳಿ ಗಲಭೆ ಕುರಿತು ನಿವೃತ್ತ ಜಿಲ್ಲಾ ನ್ಯಾಯಾಧೀಶ ಶ್ರೀಕಾಂತ್ ಡಿ ಬಬಲಾಡಿ ನೇತೃತ್ವದಲ್ಲಿ ಒಂದು ತಂಡವು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆ ಹೆಸರಿನಲ್ಲಿ ಸತ್ಯಶೋಧನೆ ನಡೆಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ವರದಿಯಲ್ಲಿ ಗಲಭೆ ಪೂರ್ವನಿಯೋಜಿತವಾಗಿದ್ದು, ಇದಕ್ಕೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನೇರ ಕಾರಣ ಎಂದು ತಿಳಿಸಲಾಗಿದೆ. ಆದರೆ ಸತ್ಯಶೋಧನೆಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಹೆಸರು ಬಳಸಿದ್ದಕ್ಕೆ ಅದರ ಅಧ್ಯಕ್ಷರಾದ ಖ್ಯಾತ ಹೋರಾಟಗಾರ ಎಸ್‌.ಆರ್ ಹಿರೇಮಠ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಿತಿಯಲ್ಲಿದ್ದ ಬಹುತೇಕರು ಬಿಜೆಪಿ – ಸಂಘಪರಿವಾರದ ಒಡನಾಟ ಹೊಂದಿರುವವರಾಗಿರುವುದರಿಂದ ಕೆ.ಜೆ.ಹಳ್ಳಿಯಲ್ಲಿ ಸತ್ಯಶೋಧನೆ ಹೆಸರಿನಲ್ಲಿ ಸುಳ್ಳನ್ನು ಬಿತ್ತಿದರೇ ಎಂಬ ಅನುಮಾನ ಹುಟ್ಟುವಂತಾಗಿದೆ ಮತ್ತು ಅದನ್ನು ಬಲಗೊಳಿಸುವ ಇನ್ನೂ ಹಲವು ಸಂಗತಿಗಳು ಹೊರಬಂದಿವೆ.

ಮುಖ್ಯವಾಗಿ ಸತ್ಯಶೋಧನಾ ಸಮಿತಿಯಲ್ಲಿ ಯಾರು ಯಾರು ಇದ್ದರು ಎಂಬುದು ವರದಿಯ ಉದ್ದೇಶವನ್ನು ತಿಳಿಸುತ್ತದೆ. ಆದರೆ ಇದರಲ್ಲಿ ಯಾರು ಯಾರಿದ್ದರು ನೋಡೋಣ ಬನ್ನಿ.

ಯಡಿಯೂರಪ್ಪನವರಿಗೆ ವರದಿ ಸಲ್ಲಿಸಿದ ನಂತರ ನಿವೃತ್ತ ಐಎಸ್‌ಎಸ್‌ ಅಧಿಕಾರಿ ಮದನ್ ಗೋಪಾಲ್ “ಇದು ನಿರ್ದಿಷ್ಠ ಸಮುದಾಯವೊಂದನ್ನು ಗುರಿಯಾಗಿಸಿಕೊಂಡು, ಭೀತಿ ಸೃಷ್ಟಿಸಲು, ಆ ಮೂಲಕ ದೇಶದ ಆರ್ಥಿಕತೆ ಕೆಡವಲು ನಡೆಸಿದ ಪೂರ್ವಯೋಜಿತ ಗಲಭೆ” ಎಂದು ಹೇಳಿದ್ದಾರೆ. ಇದೇ ಮದನ್ ಗೋಪಾಲ್‌ರವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೂ ಮುಂಚೆ 2017ರಲ್ಲಿ ಬಿಜೆಪಿ ರಚಿಸಿದ ಪ್ರಣಾಳಿಕೆ ಸಮಿತಿಯ ಸಕ್ರಿಯ ಸದಸ್ಯರಾಗಿದ್ದವರು. ಅಂದರೆ ಬಿಜೆಪಿಯ ಪ್ರಬಲ ಬೆಂಬಲಿಗರು ಸತ್ಯಶೋಧನಾ ಸಮಿತಿಯ ಭಾಗವಾಗಿದ್ದರು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

ಇನ್ನು ಸತ್ಯಶೋಧನ ಸಮಿತಿಯಲ್ಲಿದ್ದ ಮತ್ತೋರ್ವ ವ್ಯಕ್ತಿ ಡಾ.ಆರ್‌ರಾಜು. ಇವರು ನಿವೃತ್ತ ಐಎಫ್‌ಎಸ್‌ ಅಧಿಕಾರಿಗಳಾಗಿದ್ದು 2019ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲೊಬ್ಬರಾಗಿದ್ದರು. ಕಾಂಗ್ರೆಸ್‌ನ ಆರ್‌ ಧೃವನಾರಾಯಣ್‌ರವರನ್ನು ಎದುರಿಸುವುದಕ್ಕಾಗಿ ಟಿಕೆಟ್‌ಗಾಗಿ ಇವರು ಭಾರೀ ಪೈಪೋಟಿ ನಡೆಸಿದ್ದರು.

ಈ ಮೇಲಿನ ಎರಡು ಹೆಸರುಗಳು ಮಾಜಿ‌ ಅಧಿಕಾರಿಗಳದ್ದಾದರೆ ಸತ್ಯಶೋಧನಾ ಸಮಿತಿಯಲ್ಲಿದ್ದ ಮತ್ತೊಂದು ಹೆಸರು ಪತ್ರಕರ್ತರ ಕೋಟಾದ ಸಂತೋಷ್ ತಮ್ಮಯ್ಯ. ಇವರು ಮಡಿಕೇರಿಯವರಾಗಿದ್ದು ಪ್ರವಾದಿ ನಿಂದನೆ ಪೋಸ್ಟ್ ಮಾಡಿದ ಆರೋಪದಲ್ಲಿ ಇವರ ವಿರುದ್ಧ ದೂರು ದಾಖಲಾಗಿ 2018ರ ನವೆಂಬರ್ 13 ರಂದು ಗೋಣಿಕೊಪ್ಪದಲ್ಲಿ ಆತನನ್ನು ಬಂಧಿಸಲಾಗಿತ್ತು. ಅಂದರೆ ಪ್ರವಾದಿ ನಿಂದನೆ ಪೋಸ್ಟ್‌ನಿಂದಾಗಿ ಆರಂಭವಾದ ಗಲಭೆಯ ಸತ್ಯಶೋಧನೆಯಲ್ಲಿ ಪ್ರವಾದಿ ನಿಂದನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳು ಇದ್ದಾರೆ. ಸತ್ಯಶೋಧನೆಯ ಮೂಲ ಉದ್ದೇಶದ ಬಗ್ಗೆಯೇ ಸಂಶಯ ಏಳುವುದು ಇಲ್ಲಿ.

ಈ ಸಂತೋಷ್ ತಮ್ಮಯ್ಯ ಎನ್ನುವ ಪತ್ರಕರ್ತ, ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಟಿಪ್ಪು ಜಯಂತಿ ವಿರೋಧಿಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದವರು. ಅಲ್ಲದೇ ತಮ್ಮ ಹಲವು ಲೇಖನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿ ಬಿಜೆಪಿ ಪಕ್ಷವನ್ನು ಹೊಗಳಿರುವವರು. ಇಂತವರು ಸತ್ಯಶೋಧನಾ ಸಮಿತಿಯ ಭಾಗವಾದರೆ ವರದಿ ಹೇಗಿರುತ್ತದೆ?

ಇನ್ನು ಬಹಳ ಮುಖ್ಯವಾದ ವಿಚಾರ ಎಂದರೆ ಸಮಿತಿಯು ತನ್ನ ವರದಿಯನ್ನು ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ಹೆಸರಿನಲ್ಲಿ ಹೊರತಂದಿದೆ. ಅದರ ಹಾಲಿ ಅಧ್ಯಕ್ಷ ಎಸ್‌.ಆರ್‌ ಹಿರೇಮಠ್‌ರವರು ‘ಸಿಟಿಜನ್ ಫಾರ್ ಡೆಮಾಕ್ರಸಿ’ಗೂ ಸತ್ಯಶೋಧನಾ ವರದಿಗೂ ಯಾವುದೇ ಸಂಬಂಧವಿಲ್ಲ. ಕೂಡಲೇ ವರದಿಯನ್ನು ಹಿಂಪಡೆದು ನಮ್ಮ ಸಂಘಟನೆಯ ಹೆಸರು ಕೈಬಿಟ್ಟು ಬೇರೆ ಸಂಘಟನೆಗಳ ಹೆಸರಿನಲ್ಲಿ ಪ್ರಕಟಿಸಬೇಕು ಎಂದು ತಾಕೀತು ಮಾಡಿದ್ದಾರೆ.

1974ರಲ್ಲಿ ಜಯಪ್ರಕಾಶ್ ನಾರಾಯಣ್‌ರವರ ಮೊದಲ ಅಧ್ಯಕ್ಷರಾಗಿ ಸ್ಥಾಪನೆಯಾಗಿದ್ದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ತುರ್ತುಪರಿಸ್ಥಿತಿಯ ವಿರುದ್ಧ ದಿಟ್ಟ ಹೋರಾಟ ನಡೆಸಿತ್ತು. ಆನಂತರವೂ ಸಹ ಹಲವು ಜನಪರ ಖ್ಯಾತನಾಮರು ಅದರ ಅಧ್ಯಕ್ಷರಾಗಿ ತುಳಿತಕ್ಕೊಳಗಾದವರ ಪರ ದನಿ ಎತ್ತಿದ್ದಾರೆ. ಅಂತಹ ಸಂಘಟನೆಯ ಹೆಸರನ್ನು ಬಿಜೆಪಿಯು ಬಳಸಿಕೊಂಡು ವರದಿ ತಯಾರಿಸಿದೆ ಎಂದರೆ ಏನರ್ಥ ಬರಬಹುದು ಎಂದು ಸಮಿತಿಯಲ್ಲಿದ್ದ ಘಟಾನುಘಟಿಗಳು ಯೋಚಿಸಿಲ್ಲವೇ? ಬಿಜೆಪಿ ಹೆಸರಿನಲ್ಲಿ ಪ್ರಕಟಿಸಿದರೆ ಜನ ಒಪ್ಪುವುದಿಲ್ಲ ಎಂದು ತಿಳಿದು ಜನಪರ ಸಂಘಟನೆಗಳ ಹೆಸರಿನಲ್ಲಿ ಬಿಜೆಪಿಯವರೆ ತಯಾರಿಸಿದ ವರದಿ ಪ್ರಕಟಿಸಿ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ….. ಹೇಳುತ್ತಾರೆ.


ಇದನ್ನೂ ಓದಿ: ಎಸ್‌ಡಿಪಿಐಗೆ ನೇರ ಪ್ರಶ್ನೆಗಳು: ರಾಜ್ಯಾಧ್ಯಕ್ಷ ಇಲ್ಯಾಸ್ ತುಂಬೆಯವರ ಸಂದರ್ಶನ


ಇನ್ನು ಸತ್ಯಶೋಧನಾ ತಂಡವು ವರದಿಯಲ್ಲಿ ತನ್ನ ಕಚೇರಿ ವಿಳಾಸವನ್ನು ನಮೂದಿಸಿದೆ. ಅದರ ಜಾಡು ಹಿಡಿದು ಹೊರಟರೆ ಅದು ನಿಮ್ಮನ್ನು ಬೆಂಗಳೂರಿನ ಚಾಮರಾಜಪೇಟೆಯ ‘ವಿಕ್ರಮ’ ಪತ್ರಿಕಾ ಕಚೇರಿಗೆ ಕರೆದುಕೊಂಡು ಹೋಗುತ್ತದೆ. ತನ್ನನ್ನು ತಾನು ಹಿಂದೂತ್ವ ಪತ್ರಿಕೆ ಎಂದು ಕರೆದುಕೊಳ್ಳುತ್ತದೆ. “ಹಿಂದು ಸಂಘಟನೆ ಮತ್ತು ವ್ಯಕ್ತಿತ್ವ ನಿರ್ಮಾಣದ ಕೆಲಸವನ್ನು ವಿವಿಧ ಸಂಘಟನೆಗಳು ಮಾಡುತ್ತಿವೆ ಮತ್ತು ಅದರಲ್ಲಿ ಯಶಸ್ವಿಯೂ ಆಗಿದೆ. ಆದರೆ ವೈಚಾರಿಕ ಜಾಗೃತಿಯ ಜವಾಬ್ದಾರಿ ಇರುವುದು ಪತ್ರಿಕೆಗಳು ಮತ್ತು ಕೃತಿಗಳ ಹೆಗಲ ಮೇಲೆ. ಈ ಉದ್ದೇಶದಿಂದಲೇ 1948ರ ವಿಜಯದಶಮಿಯಂದು ವಿಕ್ರಮ ವಾರಪತ್ರಿಕೆ ಸ್ಥಾಪನೆಯಾಯಿತು” ಎಂದು ಘೋಷಿಸಿಕೊಂಡ ಪತ್ರಿಕೆಯ ವಿಳಾಸವನ್ನು ಸತ್ಯಶೋಧನೆಯ ವರದಿಗೆ ಏಕೆ ನೀಡಲಾಯಿತು? ಆರೆಸ್ಸಸ್ ಮುಖಂಡರು ಹೇಳಲು ಅಂಜುವಂತಹ ಸಂಗತಿಗಳನ್ನೂ ವಿಕ್ರಮ ಪ್ರಕಟಿಸುತ್ತದೆ.

ಇನ್ನು ಈ ಸತ್ಯಶೋಧನಾ ತಂಡದ ಮುಖ್ಯ ಸಮನ್ವಯಕಾರರು ಕ್ಷಮಾ ನರಗುಂದ್. ಅವರು ಆರ್‌ಎಸ್‌ಎಸ್‌ನ ಮಹಿಳಾ ವಿಭಾಗ ದುರ್ಗಾವಾಹಿನಿಯ ಸದಸ್ಯೆ ಎನ್ನಲಾಗುತ್ತಿದೆ. ಅವರು ತಮ್ಮ ಟ್ವಿಟ್ಟರ್ ಬಯೋದಲ್ಲಿ ತಾವೊಬ್ಬ ಆರ್‌ಎಸ್‌ಎಸ್‌ ಸೇವಿಕ ಎಂದು ಘೋಷಿಸಿಕೊಂಡಿದ್ದಾರೆ.

ಸಮಿತಿಯಲ್ಲಿರುವ ಆರ್‌.ಕೆ.ಮಟ್ಟೂ ಎಂಬ ಪತ್ರಕರ್ತರು ಸಹ ಆರೆಸ್ಸೆಸ್ ಪರವಾದ ನಿಲುವಿಗೆ ಪ್ರಖ್ಯಾತರು.

ಇಷ್ಟೆಲ್ಲಾ ಸಂಘಪರಿವಾರದ ಮತ್ತು ಬಿಜೆಪಿಯ ವ್ಯಕ್ತಿಗಳು ಕೂತು ಬರೆದಿರುವ ವರದಿಯನ್ನು ‘ಸತ್ಯಶೋಧನೆ’ ಎಂದು ಕರೆಯಲಾಗುವುದೇ? ಆರೆಸ್ಸೆಸ್ ಪರಿವಾರವೇ ಹೋಗಿ ತಮ್ಮ ಪರವಾಗಿ ವರದಿ ಬರೆದುಕೊಂಡರೇ? ಎಂಬ ಪ್ರಶ್ನೆಗಳು ಉದ್ಭವವಾಗಿವೆ.

ಜೊತೆಗೆ ಇನ್ನೂ ಒಂದು ಗಮನಿಸಬೇಕಾದ ವಿಚಾರವಿದೆ: ಸಾಮಾನ್ಯವಾಗಿ ಆಡಳಿತ ನಡೆಸುವವರು ತಮ್ಮ ಅಡಿಯಲ್ಲೇ ಕೆಲಸ ಮಾಡುವ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವನ್ನಿಟ್ಟುಕೊಂಡಿರುತ್ತಾರೆ. ಹಾಗಾಗಿ ಆಡಳಿತ ವಿರೋಧಿಗಳು ಅಥವಾ ಆಡಳಿತದ ಬಗ್ಗೆ ಸಂಶಯ ಹೊಂದಿರುವವರು ‘ಸತ್ಯ ಶೋಧನೆ’ ನಡೆಸುತ್ತಾರೆ.‌ ಆದರೆ ಇಲ್ಲಿ ಆಡಳಿತ ಕೂಟವೇ ‘ಸತ್ಯ ಶೋಧನಾ ತಂಡ’ ರಚಿಸಿರುವುದನ್ನು ನೋಡಿದರೆ ಪೊಲೀಸರು ಹೇಳಬಹುದಾದ ಸತ್ಯಕ್ಕಿಂತ‌ ಹೆಚ್ಚಿನದ್ದನ್ನು ಬಿಜೆಪಿ ಪರಿವಾರ ಬಯಸಿದೆ.


ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...