Homeಮುಖಪುಟಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ - ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರ: ಕೇಂದ್ರವು ರಾಜ್ಯಗಳನ್ನು ಬಂಜರುಗೊಳಿಸಿದೆ – ಹೇಮಂತ್ ಸೊರೆನ್

ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ.

- Advertisement -
- Advertisement -

ಜಿಎಸ್‌ಟಿ ಪರಿಹಾರದ ಬಗ್ಗೆ ಕೇಂದ್ರ ಮತ್ತು ರಾಜ್ಯಗಳ ನಡುವೆ ಕ್ಷೀಣಿಸುತ್ತಿರುವ ನಂಬಿಕೆಯನ್ನ ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ರ ಬರೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಬಲಪಡಿಸಲು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಸೊರೆನ್ ಮನವಿ ಮಾಡಿದ್ದಾರೆ.

ಜಿಎಸ್‌ಟಿ ಪರಿಹಾರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಯಲ್ಲಿ ಈಗಾಗಲೇ ಹಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈಗ ಜಾರ್ಖಂಡ್ ಸಿಎಂ ಕೂಡ ಅವರ ಸಾಲಿಗೆ ಸೇರಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಗಳನ್ನು ಬಂಜರುಗೊಳಿಸಿದೆ ಎಂದು ತಮ್ಮ ಪತ್ರದಲ್ಲಿ ಸೊರೆನ್ ತಿಳಿಸಿದ್ದಾರೆ. ಕೇಂದ್ರ ಸಂಸತ್ತಿನಲ್ಲಿ ನಡೆದ ಎಲ್ಲಾ ಕೌನ್ಸಿಲ್ ಸಭೆಗಳಲ್ಲೂ ರಾಜ್ಯಗಳಿಗೆ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ. ಸಹಕಾರಿ ಒಕ್ಕೂಟ ವ್ಯವಸ್ಥೆಯ ಮನೋಭಾವಕ್ಕೆ ವಿರುದ್ಧವಾಗಿ ನಡೆಯುವ ಕೇಂದ್ರ ಸರ್ಕಾರದ ನಡೆ ದೇಶದ ಸಾರ್ವಭೌಮಕ್ಕೆ ದಕ್ಕೆ ತರುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ನಮ್ಮ ಪಾಲಿನ ಜಿಎಸ್‌ಟಿ ಪರಿಹಾರ ಕೊಡಲೇಬೇಕು: ಮೋದಿಗೆ ಪಿಣರಾಯಿ ವಿಜಯನ್ ಪತ್ರ

2017ರ ಜಿಎಸ್‌ಟಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣವನ್ನು ನೆನೆಸಿಕೊಳ್ಳುವ ಹೇಮಂತ್ ಸೊರೆನ್ ನೀವು ಒಕ್ಕೂಟ ವ್ಯವಸ್ಥೆಯಿಂದ ಭಾರತ ಬೆಳೆಯಲು ಸಾಧ್ಯ  ಎಂದಿದ್ದಿರಿ. ಆದರೆ ಈಗ ಜಿಎಸ್‌ಟಿ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ತನ್ನ ಸಾಂವಿಧಾನಿಕ ಕಟ್ಟುಪಾಡುಗಳನ್ನು ಪೂರೈಸಲು ಹಿಂಜರಿಯುತ್ತಿರುವುದು ರಾಜ್ಯಗಳ ಹಿತಾಸಕ್ತಿಗಳಿಗೆ ಮತ್ತು ಸಹಕಾರಿ ಫೆಡರಲಿಸಂನ ಮನೋಭಾವಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

ಇನ್ನು ಖನಿಜ ವಲಯದಿಂದಲೇ ಜಾರ್ಖಂಡ್ ಸುಮಾರು 5,000 ಕೋಟಿ ರೂ. ಪರಿಹಾರ ನಿಧಿಗೆ ಕೊಡುಗೆ ನೀಡುತ್ತದೆ, ಆದರೆ ಪ್ರತಿಯಾಗಿ ಪಡೆಯುವುದು ಮಾಸಿಕ ಪರಿಹಾರವಾಗಿ ಕೇವಲ 150 ಕೋಟಿ ರೂಪಾಯಿಗಳ ಅಲ್ಪ ಮೊತ್ತವಾಗಿದೆ. ಈಗ ಸರ್ಕಾರಿ ನೌಕರರ ವೇತನವನ್ನು ಪೂರೈಸಲು ರಾಜ್ಯಕ್ಕೆ ಕಷ್ಟವಾಗಿರುವ ಸಮಯದಲ್ಲಿ ಸಾಲ ಪಡೆಯಲು ಹೇಳಲಾಗುತ್ತಿದೆ. ಕೊರೊನಾ ಸಮಯದಲ್ಲಿ ನೀವು  ಪರಿಹಾರಕ್ಕಿಂತ ಹೆಚ್ಚಿನದನ್ನು ನೀಡಬೇಕೆಂದು ನಾವು ಸ್ವಾಭಾವಿಕವಾಗಿ ನಿರೀಕ್ಷಿಸಿದ್ದೇವೆ” ಎಂದು ಸೊರೆನ್ ಹೇಳಿದರು.

2020-21 ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಪರಿಹಾರದಲ್ಲಿ 2.35 ಲಕ್ಷ ಕೋಟಿ ರೂ.ಗಳ ಕೊರತೆಯನ್ನು ಪೂರೈಸಲು ಆಗಸ್ಟ್ 29 ರಂದು ಕೇಂದ್ರ ಹಣಕಾಸು ಸಚಿವಾಲಯ ರಾಜ್ಯಗಳ ಮುಂದೆ ಎರಡು ಆಯ್ಕೆಗಳನ್ನು ಇಟ್ಟಿತ್ತು.  ಮೊದಲ ಆಯ್ಕೆಯಾಗಿ ಆರ್‌ಬಿಐನಿಂದ 97,000 ಕೋಟಿ ರೂ. ಸಾಲ ಪಡೆಯಬಹುದು ಮತ್ತು ಎರಡನೇ ಆಯ್ಕೆಯಾಗಿ ಹೊರಗಿನಿಂದ 2.35 ಲಕ್ಷ ಕೋಟಿ ಸಾಲ ಪಡೆಯಬಹುದೆಂಬ ಮತ್ತು ಅದನ್ನು 2022 ರ ನಂತರ ಕೇಂದ್ರ ಸರ್ಕಾರ ಭಾಗಶಃ ತೀರಿಸುತ್ತದೆ ಎಂಬ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದಿಟ್ಟಿತ್ತು.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕೊರತೆ: ಸಾಲ ಪಡೆಯಿರಿ ಎಂಬ ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ಕೇರಳ

ಜಿಎಸ್‌ಟಿ ಪರಿಹಾರ ಕೋರಿ ಸೆಪ್ಟೆಂಬರ್ 2 ರಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೋದಿಗೆ ಪತ್ರ ಬರೆದು, ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆ ಪರಿಹಾರವನ್ನು ನಿರಾಕರಿಸುವುದು ನಮ್ಮ ರಾಷ್ಟ್ರದ ಫೆಡರಲಿಸ್ಟ್ ನೀತಿಗೆ ಅಸಹನೀಯ ಹೊಡೆತ ಎಂದಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜಿಎಸ್‌ಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಕೇರಳ ಮತ್ತು ಛತ್ತೀಸ್‌ಘಡ ಸರ್ಕಾರಗಳು ಕೇಂದ್ರವೇ ಸಾಲ ಪಡೆದು ಜಿಎಸ್‌ಟಿ ನೀಡಲು ಕೇಂದ್ರವನ್ನು ಕೇಳಿಕೊಂಡಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದು ಈ ಸಮಯದಲ್ಲಿ ಕಾನೂನುಬದ್ಧವಾದ ಮತ್ತು ಸುಸ್ಥಿರ ಆಯ್ಕೆಗಳನ್ನು ಪರಿಗಣಿಸುವಂತೆ ತಿಳಿಸಿದ್ದರು.. ಅಂತೆಯೇ, ಆದಾಯ ನಷ್ಟಕ್ಕೆ ರಾಜ್ಯಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಬದ್ಧವಾಗಿದೆ ಎಂದು ಪುದುಚೇರಿ ಮುಖ್ಯಮಂತ್ರಿ ಹೇಳಿದ್ದಾರೆ.

ತಮ್ಮ ಹಕ್ಕುಗಳಿಗಾಗಿ, ಕೇಂದ್ರದಿಂದ ಬರಬೇಕಾದ ಬಿಎಸ್‌ಟಿ ಪರಿಹಾರಕ್ಕಾಗಿ ಬಿಜೆಪಿಯೇತರ ಸರ್ಕಾರಗಳು ಪ್ರಧಾನಿಗೆ ಪತ್ರ ಬರೆದು ಪರಿಹಾರ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ಕರ್ನಾಟಕ ಸರ್ಕಾರ ಮಾತ್ರ ಕೇಂದ್ರ ನೀಡಿದ ಮೊದಲ ಆಯ್ಕೆ ತೆಗೆದುಕೊಂಡಿದ್ದು, ಸಾಲ ಪಡೆಯಲು ಸಿದ್ಧವಾಗಿದೆ.


ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...