Homeಮುಖಪುಟಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

- Advertisement -
- Advertisement -

ನನ್ನ ಮಾತುಗಳನ್ನ ಶೇಕ್ಸ್‌ಪಿಯರ್‌ನ ಜೂಲಿಯಸ್ ಸೀಜರ್ ದುರಂತ ನಾಟಕದಿಂದ ಆರಂಭಿಸುತ್ತೇನೆ. ಸೀಜರ್ ಜಗತ್ತನ್ನೇ ಗೆಲ್ಲುವ ತಾಕತ್ತಿದ್ದ ಯುದ್ಧ ನಿಪುಣ. ರೋಮ್ ಸಾಮ್ರಾಜ್ಯದ ಸೈನ್ಯದ ಮುಖ್ಯಸ್ಥ, ಸೇನಾಧಿಕಾರಿ, ರೋಮ್ ದೇಶವನ್ನು ಶ್ರೀಮಂತಗೊಳಿಸಿದವನು.

ಇವನ ಮಹತ್ವಾಕಾಂಕ್ಷೆಗೆ ಅವನ ಸುತ್ತಲಿನ ಗೆಳೆಯರೇ ಭೀತಿಗೊಳಗಾಗುತ್ತಾರೆ. ಸೀಜರ್‌ನನ್ನು ಮುಗಿಸಲು ತವಕಿಸುತ್ತಾರೆ. ಆದರೆ ಯಾರಿಗೂ ಮುಟ್ಟಲು ಎದೆಗಾರಿಕೆ ಇರಲಿಲ್ಲ. ಕೊನೆಗವರು ಹುಡುಕುವುದು ಸೀಜರ್‌ನ ಪರಮಾಪ್ತ ನಂಬಿಕಸ್ಥ ಬ್ರೂಟಸ್‌ನನ್ನು.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ

ಬ್ರೂಟಸ್ ಅಪ್ರತಿಮ ದೇಶಭಕ್ತ ಎಂದೂ ಕೂಡ ಹೆಸರು ಪಡೆದವನು. ಬ್ರೂಟಸ್, ಸೀಜರ್‌ನ ಹೃದಯಕ್ಕೆ ಚೂರಿ ಹಾಕುತ್ತಾನೆ. ದೇಶಭಕ್ತ ಎಂದು ಬ್ರಾಂಡ್ ಆದವರು ಏನುಬೇಕಾದರೂ ಮಾಡಿ ದಕ್ಕಿಸಿಕೊಳ್ಳಬಹುದೆಂದು ಕಾಣುತ್ತದೆ! ಆ ಸೀಜರ್‌ನ ಹೆಣದ ಮುಂದೆ ಮಾರ್ಕ್ ಆಂಟ್ಯೋನಿ ‘The most unkindest cut of all’ ಎಂದು ಉದ್ಗಾರ ಮಾಡುತ್ತಾನೆ.

ವ್ಯಾಕರಣದ ಪ್ರಕಾರ, The most ಮತ್ತು Unkindest – ಈ ಎರಡೂ ಅತಿಶಯೋಕ್ತಿಗಳು ಒಂದೇ ವಾಕ್ಯದಲ್ಲಿ ಬರಬಾರದು. ಆದರೆ ಶೇಕ್ಸ್‌ಪಿಯರ್‌ ನಂಬಿಕಸ್ಥನೇ ಕೊಲೆ ಮಾಡುವ ಈ ಘಾತುಕ ಕೃತ್ಯವನ್ನು ಹೇಗಿದೆಯೋ ಹಾಗೆಯೇ ಕಟ್ಟಿಕೊಡಲು ವ್ಯಾಕರಣವನ್ನೇ ಮುರಿದು ಕಟ್ಟುತ್ತಾನೆ. ಈ ದುರಂತ ನಾಟಕವನ್ನು ಇಲ್ಲಿಗೇ ಬಿಡೋಣ. ಯಥಾವತ್ತಾಗಿ ಇಂದಿಗೆ ಇಲ್ಲಿಗೆ ಅಳವಡಿಸಿಕೊಳ್ಳಲೂ ಆಗದು. ಆದರೆ ನಂಬಿಕಸ್ಥನೇ ಕೊಲೆ ಮಾಡಿದ್ದಕ್ಕೆ ಅಭಿವ್ಯಕ್ತಿಗೊಂಡ ‘The most …. all’ ಎಂಬ ಮಾತು? ಇಂದು ಇದು ಭಾರತದಲ್ಲಿ ಜರುಗುತ್ತಿಲ್ಲವೇ? ಹೌದು ಎಂದೆನ್ನಿಸಿಬಿಡುತ್ತದೆ.

ಈಗ ಕರ್ನಾಟಕ ರಾಜ್ಯ ಸರ್ಕಾರ ಜೂನ್ 2020 ರಂದು ಭೂಸುಧಾರಣೆ ಕಾಯ್ದೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಕೂಡ ರೈತರ ಏಳ್ಗೆಗಾಗಿ ಎನ್ನುತ್ತಲೇ ಅವರ ಬದುಕನ್ನೇ ಎತ್ತಂಗಡಿಯಾಗಿಸುತ್ತದೆ. ಇದರ ಮೂಲ ಹುಡುಕಿದರೆ ಇದರ ಕಾರಸ್ಥಾನ ತಮಗೆಲ್ಲಾ ಗೊತ್ತಿರಬಹುದು. ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರ ಸರ್ಕಾರದ ಪ್ರಗತಿಪರವಾದ 2013 ರ ಭೂಸ್ವಾಧೀನ ಕಾಯ್ದೆಗೆ 2015 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸುಗ್ರೀವಾಜ್ಞೆ ತಂದು ಭೂಸುಧಾರಣೆಯ ಬುಡವನ್ನೇ ಕತ್ತರಿಸಿ ಧ್ವಂಸ ಮಾಡಲು ಹವಣಿಸಿತ್ತು.

ಇದರೂ ಓದ: ಬುಡ ಅಲ್ಲಾಡಿಸುತ್ತಿರುವ ಭೂಷಣ್ ಟ್ವೀಟ್ಸ್ – ದೇವನೂರ ಮಹಾದೇವ

ಬ್ರಿಟಿಷ್ ಕಾಲದ 1894 ರ ಕಾಯ್ದೆಯಲ್ಲಿ ಭೂಮಿಯ ಮಾಲೀಕರಿಗೆ ಆಕ್ಷೇಪ ಎತ್ತಲು ಅವಕಾಶವಾದರೂ ಇತ್ತು. ಆದರೆ ಆ ಬಿಜೆಪಿ ಸುಗ್ರೀವಾಜ್ಞೆ ಅದನ್ನೂ ಕಿತ್ತುಕೊಂಡಿತ್ತು. ಇದನ್ನು ಎಂ.ಲಕ್ಷ್ಮಣ ಅವರು 8 ಪುಟಗಳ ಒಂದು ಫೋಲ್ಡರ್‌‌ನಲ್ಲಿ ಬಿಜೆಪಿಯ ಅಮಾನುಷ ಸುಗ್ರೀವಾಜ್ಞೆಯ ವಿವರಗಳನ್ನು ಬಿಚ್ಚಿಡುತ್ತಾರೆ. ಆ ಸುಗ್ರೀವಾಜ್ಞೆಯ ವಿರುದ್ಧ ಆಗ ಭುಗಿಲೆದ್ದ ಪ್ರತಿಭಟನೆಗಳು ಬಿಜೆಪಿ ಸುಗ್ರೀವಾಜ್ಞೆಯನ್ನು ತಡೆಗಟ್ಟುತ್ತವೆ. ಆಗ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾರ ಆ ಸುಗ್ರೀವಾಜ್ಞೆಯನ್ನೇನೋ ಹಿಂತೆಗೆದುಕೊಳ್ಳುತ್ತದೆ. ನೆನಪಿರಲಿ, ಅದನ್ನು ರದ್ದು ಮಾಡಿಲ್ಲ! ಬಹುಶಃ ಹೊಂಚು ಹಾಕುತ್ತಿದೆ.

ಇದರ ವಾಸನೆ ಹಿಡಿದು ನೋಡುವುದಾದರೆ, ಟೆಸ್ಟಿಂಗ್ ಡೋಸ್ ಎಂಬಂತೆ ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಈ ತಿದ್ದುಪಡಿ ಸುಗ್ರೀವಾಜ್ಞೆ ತಂದಿರಬಹುದು ಅನ್ನಿಸುತ್ತದೆ. ರೈತಾಪಿ ಹಿತ ಕಾಪಾಡುವ ದೇವರಾಜ್ ಅರಸು ಅವರ 1974 ರ ಕಾಯ್ದೆಗಳನ್ನೆಲ್ಲಾ ನಿರ್ದಯವಾಗಿ ಈ ಸುಗ್ರೀವಾಜ್ಞೆ ಕತ್ತರಿಸಿ ಹಾಕಿದೆ.

ಈ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಮನಮುಟ್ಟುವಂತೆ ಮಾತಾಡಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ಗಂಭೀರವಾದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಹಾಗೆ ಶಿವಸುಂದರ್ ಚಿಕಿತ್ಸಕ ನೋಟ ಬೀರಿದ್ದಾರೆ. ಹೆಚ್ಚು ವಿವರಗಳಿಗೆ ನಾನು ಹೋಗುವುದಿಲ್ಲ. ಎಷ್ಟೂಂತ, ಯಾವು ಯಾವುದು ಅಂತ ಹೇಳುವುದು?

ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

‘ಕೊರೋನಾ ಎಂಬ ದೇವರ ಆಟದಿಂದ ರಾಜ್ಯಗಳ ಬಾಬ್ತು ನೀಡಲು ಆಗುತ್ತಿಲ್ಲ’ ಎನ್ನುವ ಅರ್ಥಸಚಿವರನ್ನು ಭಾರತ ಪಡೆದಿದೆ! ಭಾರತದ ಒಕ್ಕೂಟ ವ್ಯವಸ್ಥೆಯ ಬುಡವನ್ನೇ ಕಡಿದು ಹಾಕಿ, ರಾಜ್ಯಗಳ ಸ್ಥಾನವನ್ನು ದೈನೇಸಿ ಸ್ಥಾನಕ್ಕೆ ತಳ್ಳುವ ಜಿಎಸ್‌ಟಿ ತಂದು ದೆವ್ವದ ಆಟ ಆಡಿದವರು ಯಾರು? ಜನರಿಗೆ ಕನಸು ಕಾಣಿಸಿ ನೋಟ್‌ಬ್ಯಾನ್ ತಂದು ಭಾರತದ ಬದುಕನ್ನ ದುಃಸ್ವಪ್ನ ಮಾಡಿದ ಭೂತದ ಆಟ ಆಡಿದವರು ಯಾರು? ದೇವರ ಆಟವೋ ಏನೋ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ.

ಯಾಕೆಂದರೆ ಕೊರೋನಾ ಭೀಕರ ವಾತಾವರಣದಲ್ಲಿ ಜನ ಸಮುದಾಯ ಧ್ವನಿ ತೆಗೆಯಲು ಕಷ್ಟಕರವಾದ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುವ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದನ್ನು ನೋಡುತ್ತಿದ್ದರೆ ಇನ್ನೇನು ಹೇಳಬೇಕು? ‘The most unkindest cut of all’ ಎಂದೇ ಅನ್ನಿಸುತ್ತದೆ.

ಇಂತಹ ಧಾರುಣ ಪರಿಸ್ಥಿತಿಯಲ್ಲೂ, ಎಷ್ಟೆಂದರೆ, ಬಾಲಾಕೋಟ್ ವಾಯುದಾಳಿಯ ಸಂದರ್ಭದಲ್ಲಿ “…ಮೋಡಗಳಿವೆ, ಮಳೆ ಬರ‍್ತಾ ಇದೆ ಅಂದರೆ ನಾವು ರಾಡಾರ್‌ನಿಂದ ಬಚಾವ್ ಆಗಬಹುದು. ದಾಳಿ ಮಾಡಿ” ಎಂದು ದೇಶದ ಚುಕ್ಕಾಣಿ ಹಿಡಿದ ವ್ಯಕ್ತಿ ಸ್ಪ್ಯಾನಿಷ್ ಲೇಖಕ ಸರ್ವಂಟೀಸ್‌ನ ಕಾದಂಬರಿಯ ನಾಯಕ ಡಾನ್‌ಕ್ವಿಕ್ಯಾಟ್‌ನ ತದ್ರೂಪಿಯಂತೆ ವರ್ತಿಸುತ್ತಿದ್ದರೂ ಇದನ್ನೆಲ್ಲಾ ನೋಡಿಯೂ ಭ್ರಮಾಲೋಕದಲ್ಲಿ ಬದುಕುತ್ತಿರುವುದೇನೋ ಎಂಬಂತಿರುವ ಭಾರತಕ್ಕೆ, ಇಂದು ಸೆಪ್ಟೆಂಬರ್ 5, 2020 ಸುಮಾರು 500 ರಷ್ಟು ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂದು ಒಕ್ಕೊರಲಿನಿಂದ ಕೂಗಿ ಹೇಳುತ್ತಿವೆ.

ಅವರು ಮಹಿಳೆಯರ ಸಮಸ್ಯೆಗಳನ್ನು ಮಾತ್ರ ಎತ್ತುತ್ತಿಲ್ಲ; ರೈತ, ದಲಿತ, ಕಾರ್ಮಿಕ, ದಿನಗೂಲಿ, ವಲಸೆ ಕಾರ್ಮಿಕರು, ಪೌರ ಕಾರ್ಮಿಕರು, ಪ್ರಕೃತಿ-ಪರಿಸರ, ಪೌರತ್ವದ ಪ್ರಶ್ನೆ, ರಾಜಕೀಯ ಕೈದು, ಮಾಹಿತಿ ಹಕ್ಕು ಕಾಯ್ದೆ… ಇತ್ಯಾದಿ ಹೀಗೆ ಎಲ್ಲವನ್ನೂ ಕೂಡಿಸಿ ಹೇಳುತ್ತಾ “ನಮ್ಮ ಸಂವಿಧಾನ ಮತ್ತು ಪ್ರಜಾತಂತ್ರವನ್ನು ರಕ್ಷಿಸಿಕೊಳ್ಳಲು ನಾವು ಒಂದುಗೂಡುತ್ತಿದ್ದೇವೆ” ಎಂದು ಕೂಗಿ ಹೇಳುತ್ತಿದ್ದಾರೆ. ಒಂಟಿ ಸಂಘಟನೆಗಳಾದ ನಾವೂ ಕೂಡ ಒಕ್ಕೂಟವಾಗಬೇಕಾಗಿದೆ. ಎಲ್ಲರೂ ಸಮುದಾಯದೊಳಗೆ ಕರಗಿ ಹೋಗಬೇಕಾಗಿದೆ.

ಸಮುದಾಯದೊಳಗಿಂದ ಹೊಸ ಮಾತು, ಹೊಸ ನುಡಿಗಟ್ಟು, ಹೊಸ ನಡೆ ಹುಟ್ಟಬೇಕಾಗಿದೆ. ಅದು ಇದೀಗ ಚಿಗುರೊಡೆಯುತ್ತಿದೆ ಎಂದೆನಿಸುತ್ತಿದೆ.

ಕೃಪೆ: ನಮ್ಮ ಬನವಾಸಿ


ಇದನ್ನೂ ಓದಿ: ಸಂವಿಧಾನಕ್ಕೆ ಮೊದಲು ನಮಸ್ಕರಿಸಿ, ಆಮೇಲೆ ಅದರ ಆಶಯಕ್ಕೆ ಗುಂಡು ಹೊಡೆದ ಮೋದಿ: ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...