Homeಮುಖಪುಟಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ಕಾಂಗ್ರೆಸ್ ವಕ್ತಾರ ಮೃಂಜಯ್ ತಿವಾರಿ, "ಯಾರೊಬ್ಬರ ಮೃತದೇಹವನ್ನು, ಯಾರೂ ರಾಜಕೀಯಕ್ಕೆ ಬಳಸಿಕೊಳ್ಳಬಾರದು" ಎಂದಿದ್ದಾರೆ.

- Advertisement -
- Advertisement -

ಅಕ್ಟೋಬರ್ ನಲ್ಲಿ ನಡೆಯಲಿರುವ ಬಿಹಾರ ಚುನಾವಣಾ ಪ್ರಚಾರಕ್ಕೆ ಬಿಜೆಪಿಯು ಸುಶಾಂತ್ ಸಿಂಗ್ ರಜಪೂತ್ ಸಾವನ್ನು ಬಿಡದೇ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯು ತನ್ನ ಕರಪತ್ರಗಳಲ್ಲಿ ಸುಶಾಂತ್ ಫೋಟೊ ಜೊತೆಗೆ “#JusticeForSushanth” ಎಂದು ಬರೆದಿರುವ ಪೋಸ್ಟರ್, ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದೆ.

ಜುಲೈ 14 ರಂದು ಸುಶಾಂತ್ ಸಿಂಗ್ ರಜಪೂತ್ ಮುಂಬೈನಲ್ಲಿರುವ ತನ್ನ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದನ್ನು ಮುಂಬೈ ಪೊಲೀಸರು ಆತ್ಮಹತ್ಯೆ ಎಂದು ಕರೆದಿದ್ದರು. ಈ ಸಾವಿನ ಸುತ್ತ ಅನುಮಾನಗಳು ಮೂಡಿದ್ದರಿಂದ, ಬಿಹಾರ ಪೊಲೀಸರ ಪೂರ್ಣಪ್ರಮಾಣದ ಎಫ್.ಐ.ಆರ್ ವರದಿಯ ಆಧಾರದ ಮೇಲೆ ನ್ಯಾಯಾಲಯವು ಈ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಿಬಿಐ ರಿಯಾ ಚಕ್ರವರ್ತಿ ಸೇರಿದಂತೆ ಹಲವರನ್ನು ವಿಚಾರಣೆ ನಡೆಸುತ್ತಿದೆ. ಇತ್ತೀಚೆಗೆ ಈ ಸಾವಿಗೂ ಡ್ರಗ್ಸ್ ಗೂ ನಂಟಿದೆ ಎಂಬ ಸಂಶಯ ವ್ಯಕ್ತವಾಗಿದೆ.

ಈ ವಿಷಯವನ್ನು ರಾಜಕೀಯ ಬಂಡವಾಳ ಮಾಡಿಕೊಂಡಿರುವ ಬಿಜೆಪಿ, ಬಿಹಾರದ ಚುನಾವಣಾ ಪ್ರಚಾರಕ್ಕಾಗಿ ಬಿಡುಗಡೆ ಮಾಡಿರುವ ಸ್ಟಿಕ್ಕರ್‌ಗಳಲ್ಲಿ, “ಸುಶಾಂತ್ ಗೆ ನ್ಯಾಯ ದೊರಕಲಿ, ನಾ ಭೂಲೆ ಹೈ, ನಾ ಭೂಲ್ನೆ ದೇಂಗೆ (ನಾವು ಮರೆತಿಲ್ಲ, ಯಾರನ್ನೂ ಮರೆಯಲು ಬಿಡುವುದಿಲ್ಲ)” ಎಂದು ಬರೆದಿರುವ ಸುಮಾರು 25,000 ಸ್ಟಿಕ್ಕರ್‌ಗಳನ್ನು ಮತ್ತು 30,000 ಮಾಸ್ಕ್ ಗಳನ್ನು ಮುದ್ರಿಸಿ, ಜುಲೈ ತಿಂಗಳಿನಿಂದಲೇ ಹಲವು ಕಡೆ ವಿತರಿಸುತ್ತಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

ನಟನ ಸಾವನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಿಲುವನ್ನು ಖಂಡಿಸಿ ಆಲ್ ಇಂಡಿಯಾ ಪ್ರೊಫೆಷನಲ್ ಕಾಂಗ್ರೆಸ್ ಸೌತ್ ಮುಂಬೈ ನಿನ್ನೆ ಟ್ವೀಟ್ ಮಾಡಿದೆ.

“ನಟನ ಸಾವು ನಮಗೆ ರಾಜಕೀಯ ವಿಷಯವಲ್ಲ, ಭಾವನಾತ್ಮಕ ವಿಷಯ. ಅದಾಗ್ಯೂ ಇದನ್ನು ರಾಜಕೀಯಗೊಳಿಸುತ್ತಿರುವುದು ಕೇವಲ ಕಾಕತಾಳೀಯವಷ್ಟೆ” ಎಂದು ರಾಜ್ಯ ಬಿಜೆಪಿ ಘಟಕದ ಕಲೆ ಮತ್ತು ಸಂಸ್ಕೃತಿ ವಿಭಾಗದ ವರುಣ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂಬುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೊತೆಗೆ ಈಗಾಗಲೇ ಬಿಜೆಪಿ ನಿರ್ಮಿಸಿರುವ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಮತ್ತು ಸಾಧನೆಯ ಕುರಿತಂತೆ ಎರಡು ಕಂತುಗಳ ವಿಡಿಯೋಗಳು ಶೀಘ್ರದಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಯಾಗಲಿದೆ ಎಂದು ವರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಿಜೆಪಿಯು, ಪಾಟ್ನಾದ ರಾಜೀವ್ ನಗರದ ಚೌಕವೊಂದಕ್ಕೆ ಸುಶಾಂತ್ ಸಿಂಗ್ ರಜಪೂತ್ ಹೆಸರಿಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದೆ.

ಈ ಪೋಸ್ಟರ್ ಮತ್ತು ಸ್ಟಿಕ್ಕರ್ ಸಂಬಂಧಿತ ಚರ್ಚೆಗಳು ಬಿಜೆಪಿ ಮತ್ತು ಬಿಜೆಪಿಯೇತರ ಪಕ್ಷಗಳ ನಡುವೆ ವಾದ-ವಿವಾದಗಳಿಗೆ ಎಡೆಮಾಡಿಕೊಟ್ಟಿದೆ.

ಕಾಂಗ್ರೆಸ್ ವಕ್ತಾರ ಮೃಂಜಯ್ ತಿವಾರಿ, “ಯಾರೊಬ್ಬರ ಮೃತದೇಹವನ್ನು, ಯಾರೂ ರಾಜಕೀಯಕ್ಕೆ ಬಳಸಿಕೊಳ್ಳಬಾರದು” ಎಂದಿದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...