HomeUncategorizedದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಮೇಲಿನ ತನ್ನ ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜಿಎಸ್‌‌ಟಿಯ ದೋಷಪೂರಿತ ಅನುಷ್ಠಾನವು ಆರ್ಥಿಕತೆಯನ್ನು ನಾಶಪಡಿಸಿದೆ, ಇದು ಆರ್ಥಿಕತೆಯಲ್ಲಿರುವ ಅಸಂಘಟಿತ ವಲಯಕ್ಕೆ ಎರಡನೇ ದೊಡ್ಡ ಹೊಡೆತವಾಗಿದೆ ಎಂದು ಆರೋಪಿಸಿದ್ದಾರೆ.

ಯುಪಿಎ ಸರ್ಕಾರದ ಸುಲಭ ತೆರಿಗೆ ವಿಧಿಸುವ ಕಲ್ಪನೆಯಾದ ಜಿಎಸ್‌ಟಿಯನ್ನು ಬಿಜೆಪಿ ಸರ್ಕಾರ ಸಂಕೀರ್ಣ ಮತ್ತು ಕಷ್ಟಕರವನ್ನಾಗಿ ಮಾಡಿದೆ ಎಂದು ತನ್ನ ಸರಣಿಯ ಮೂರನೇ ವೀಡಿಯೊದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹ ಕುಸಿತ: ದೇವರ ಕಾರ್ಯ ಎಂದ ಕೇಂದ್ರ ಸರ್ಕಾರ!

“ಎನ್‌ಡಿಎ ಸರ್ಕಾರವು ಜಾರಿಗೆ ತಂದ ಜಿಎಸ್‌ಟಿ ವಿಭಿನ್ನವಾಗಿದೆ. ಯಾಕೆಂದರೆ ನಾಲ್ಕು ಹಂತದ ತೆರಿಗೆಗಳು ಶೇಕಡಾ 28 ರಷ್ಟಿದೆ, ಇದು ತುಂಬಾ ಸಂಕೀರ್ಣವಾಗಿದೆ ಮತ್ತು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ” ಎಂದು ಅವರು ಹೇಳಿದರು.

ದೊಡ್ಡ ಕಂಪನಿಗಳು ಸಾಕಷ್ಟು ಅಕೌಂಟೆಂಟ್‌ಗಳನ್ನು ನೇಮಿಸಬಹುದು, ಆದರೆ ಸಣ್ಣ ಮತ್ತು ಮಧ್ಯಮ ವ್ಯವಹಾರಗಳು ಈ ತೆರಿಗೆ ವಿಧಾನವನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ತೆರಿಗೆ ದರಗಳ ನಾಲ್ಕು ಹಂತಗಳಲ್ಲಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಸಂಪನ್ಮೂಲಗಳನ್ನು ಹೊಂದಿರುವವರು ಇದನ್ನು ಅನುಸರಿಸಬಹುದು, ಆದರೆ ಸಣ್ಣ ಮತ್ತು ಅಲ್ಪ ವ್ಯವಹಾರಗಳು ಹೊಂದಿರುವವರು ಇದರಿಂದ ತೊಂದರೆ ಅನುಭವಿಸುತ್ತಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಭಾರತದ ದೊಡ್ಡ 15 ರಿಂದ 20 ಕೈಗಾರಿಕೋದ್ಯಮಿಗಳಿಗೆ ಲಾಭ ಆಗುತಂತೆ ಮಾಡಲು ಈ ತೆರಿಗೆ ಪದ್ದತಿಯನ್ನು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ; ಫ್ಯಾಕ್ಟ್‌‌ಚೆಕ್‌

“ಜಿಎಸ್‌ಟಿ ಸಂಪೂರ್ಣ ವೈಫಲ್ಯವಾಗಿದೆ, ಅದು ಯಶಸ್ವಿಯಾಗುವುದಿಲ್ಲ, ಇದು ಬಡವರ ಮೇಲೆ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳ ಮೇಲಿನ ಆಕ್ರಮಣವಾಗಿದೆ. ಜಿಎಸ್‌ಟಿ ತೆರಿಗೆ ವ್ಯವಸ್ಥೆಯಲ್ಲ, ಇದು ಭಾರತದ ಬಡವರ ಮೇಲಿನ ಆಕ್ರಮಣವಾಗಿದೆ. ಇದು ಒಂದು ಸಣ್ಣ ಅಂಗಡಿಯವರು, ಸಣ್ಣ ಮತ್ತು ಮಧ್ಯಮ ವ್ಯವಹಾರಗಳು, ರೈತರು ಮತ್ತು ಕಾರ್ಮಿಕರ ಮೇಲೆ ದಾಳಿ” ಎಂದು ಅವರು ತೀವ್ರ ದಾಳಿ ಮಾಡಿದ್ದಾರೆ.

ಈ ದಾಳಿಯನ್ನು ಗುರುತಿಸಿ ಮತ್ತು ಅದರ ವಿರುದ್ಧ ಒಟ್ಟಾಗಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಕರೆ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ತಂದಿರುವ ಜಿಎಸ್‌ಟಿಯ ಫಲಿತಾಂಶವೇನು ಎಂದು ಕೇಳಿರುವ ಅವರು, ಇಂದು ಭಾರತ ಸರ್ಕಾರಕ್ಕೆ ಜಿಎಸ್‌ಟಿ ಪರಿಹಾರದ ಹಣವನ್ನು ರಾಜ್ಯಗಳಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರಿ ನೌಕರರಿಗೆ ಹಣವನ್ನು ನೀಡಲು ರಾಜ್ಯಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಾನವ ನಿರ್ಮಿತ ವಿಪತ್ತುಗಳಿಗಾಗಿ ದೇವರನ್ನು ದೂಷಿಸಬೇಡಿ: ಪಿ.ಚಿದಂಬರಂ

ಜಿಎಸ್‌ಟಿ ಸಂಗ್ರಹ ಕುಸಿತದ ಬಗ್ಗೆ ಆಗಸ್ಟ್‌ 27 ರಂದು ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯವಾಗಿದ್ದು ಇದರಿಂದಾಗಿ ಜಿಎಸ್‌‌ಟಿ ಸಂಗ್ರಹ ಕುಸಿದಿದೆ ಎಂದು ಅಸಹಾಯಕತೆ ಪ್ರದರ್ಶಿಸಿದ್ದರು.

ರಾಹುಲ್ ಗಾಂಧಿ ಕಳೆದ ಬುಧವಾರ ಪ್ರಸಾರ ಮಾಡಿದ್ದ ವಿಡಿಯೋದಲ್ಲಿ ನೋಟ್‌ಬ್ಯಾನ್‌ ವಿಷಯವೆತ್ತಿ ಕೇಂದ್ರ ಸರ್ಕಾರದ ವಿರುದ್ದ ದಾಳಿ ಮಾಡಿದ್ದರು. ನೋಟ್‌ಬ್ಯಾನ್‌ ಭಾರತದ ಬಡವರು, ರೈತರು, ಕಾರ್ಮಿಕರು ಮತ್ತು ಸಣ್ಣ ಅಂಗಡಿಯವರ ಮೇಲಿನ ದಾಳಿ ಎಂದಿದ್ದ ಅವರು ಇದು ಭಾರತದ ಅಸಂಘಟಿತ ಆರ್ಥಿಕತೆಯ ಮೇಲಿನ ದಾಳಿ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...