Homeಆರೋಗ್ಯಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಶೇಕಡಾ 60 ರಷ್ಟು ಜನರು ಒಲವು ತೋರಿದ್ದಾರೆ ಎಂದು ಸರ್ವೆ ತಿಳಿಸಿದೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ದಾಖಲೆಗಳನ್ನು ಬಿಟ್ಟು ಸೂಕ್ಷ್ಮವಾದ ವೈಯಕ್ತಿಕ ಡೇಟಾವನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಮಹತ್ವಾಕಾಂಕ್ಷೆಯ ಎನ್‌ಡಿಎಚ್‌ಎಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ಈ ಸಮೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಡಿಜಿಟಲ್ ಹೆಲ್ತ್ ಐಡಿ ರಚಿಸಬೇಕೆ ಎಂಬ ಪ್ರಶ್ನೆಗೆ ಸುಮಾರು 9,000 ಜನರು ಪ್ರತಿಕ್ರಿಯಿಸಿದ್ದಾರೆ. ಇದರ ಪ್ರಕಾರ ಶೇಕಡಾ 59 ರಷ್ಟು ಜನರು ಡಿಜಿಟಲ್ ಹೆಲ್ತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಬಯಸಿದ್ದಾರೆ. ಶೇಕಡಾ 23 ಪ್ರತಿಶತದಷ್ಟು ಜನರು ಆರೋಗ್ಯ ID ಯನ್ನು ರಚಿಸಲು ಬೆಂಬಲಿಸಿದ್ದಾರೆ. ಶೇಕಡಾ 18 ರಷ್ಟು ಜನರು ಇದನ್ನು ರಚಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಎಲ್ಲಾ ಭಾರತೀಯರಿಗಾಗಿ ಡಿಜಿಟಲ್ ಹೆಲ್ತ್ ಐಡಿಗಳನ್ನು ರಚಿಸಲು ಪ್ರಸ್ತಾಪಿಸಿರುವ ರಾಷ್ಟ್ರೀಯ ಆರೋಗ್ಯ ದತ್ತಾಂಶ ನಿರ್ವಹಣಾ ನೀತಿಗೆ ಸಂಬಂಧಿಸಿ ಲೋಕಲ್ ಸರ್ಕಲ್ಸ್ ನೀಡಿದ್ದ ನಾಲ್ಕು ಪ್ರಶ್ನೆಗಳಿಗೆ ಸುಮಾರು 34,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.

ಇನ್ನು ಡಿಜಿಟಲ್ ಹೆಲ್ತ್ ಐಡಿ ಡೇಟಾವನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಬೇಕು ಎಂಬ ಪ್ರಶ್ನೆಗೆ ಸುಮಾರು 8,600 ಪ್ರತಿಕ್ರಿಯೆಗಳು ಬಂದಿದ್ದು,  ಇದರಲ್ಲಿ ಶೇಕಡಾ 57 ರಷ್ಟು ಜನರು ಡೇಟಾ ಸಂಗ್ರಹಣೆಯನ್ನು ಆರೋಗ್ಯ ಮಾಹಿತಿಗಾಗಿ ಮಾತ್ರ ಮಾಡಬೇಕು ಮತ್ತು ಅದು ಕೇಂದ್ರ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳನ್ನು ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಮಾಡುವವರಿಗೆ ಸಲ್ಲಿಸಲಾಗುವುದು. ಇದರಿಂದ ಜನರ ಅಭಿಪ್ರಾಯ ಸರ್ಕಾರಕ್ಕೆ ತಲುಪಲಿದೆ ಎನ್ನುತ್ತಾರೆ ಲೋಕಲ್ ಸರ್ಕಲ್ಸ್‌ನ ಜನರಲ್ ಮ್ಯಾನೇಜರ್ ಅಕ್ಷಯ್ ಗುಪ್ತಾ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ : ಪ್ರೊ.ಪಾರ್ಥೋಸಾರಥಿ ರಾಯ್ ಗೆ NIA ನೋಟೀಸ್

ವ್ಯಕ್ತಿಯ ವೈಯಕ್ತಿಕ ಡೇಟಾವನ್ನು ಆತನ ಒಪ್ಪಿಗೆಯ ಮೇರೆಗೆ ಮಾತ್ರ ಸಂಗ್ರಹಿಸಬಹುದು. ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ), ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ದೇಶದಲ್ಲಿ ಎನ್‌ಡಿಎಚ್‌ಎಂ ವಿನ್ಯಾಸಗೊಳಿಸಲು ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ.

ಸರ್ಕಾರದ ಪ್ರಸ್ತಾವನೆ ಪ್ರಕಾರ, ಎನ್‌ಡಿಎಚ್‌ಎಂಗಾಗಿ ದಾಖಲಾದ ಪ್ರತಿಯೊಬ್ಬರೂ ಆರೋಗ್ಯ ಐಡಿಯನ್ನು ಉಚಿತವಾಗಿ ಪಡೆಯುತ್ತಾರೆ ಮತ್ತು ತಮ್ಮ ವೈಯಕ್ತಿಕ ಡೇಟಾದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಮತ್ತು ಪ್ರತಿಕ್ರಿಯೆಗಳನ್ನು ಕೋರಿ ಈ ದಾಖಲೆಯನ್ನು ಎನ್‌ಡಿಎಚ್‌ಎಂನ ಅಧಿಕೃತ ವೆಬ್‌ಸೈಟ್‌ನಲ್ಲಿ ಇರಿಸಲಾಗಿದೆ. ಸಲಹೆ, ಸೂಚನೆಗಳನ್ನು ನೀಡಲು ಸೆಪ್ಟೆಂಬರ್ 21 ರವರೆಗೆ ಸಮಯ ನೀಡಿದೆ.


ಇದನ್ನೂ ಓದಿ: ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...