Homeಆರೋಗ್ಯಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಶೇಕಡಾ 60 ರಷ್ಟು ಜನರು ಒಲವು ತೋರಿದ್ದಾರೆ ಎಂದು ಸರ್ವೆ ತಿಳಿಸಿದೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ದಾಖಲೆಗಳನ್ನು ಬಿಟ್ಟು ಸೂಕ್ಷ್ಮವಾದ ವೈಯಕ್ತಿಕ ಡೇಟಾವನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಮಹತ್ವಾಕಾಂಕ್ಷೆಯ ಎನ್‌ಡಿಎಚ್‌ಎಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ಈ ಸಮೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಡಿಜಿಟಲ್ ಹೆಲ್ತ್ ಐಡಿ ರಚಿಸಬೇಕೆ ಎಂಬ ಪ್ರಶ್ನೆಗೆ ಸುಮಾರು 9,000 ಜನರು ಪ್ರತಿಕ್ರಿಯಿಸಿದ್ದಾರೆ. ಇದರ ಪ್ರಕಾರ ಶೇಕಡಾ 59 ರಷ್ಟು ಜನರು ಡಿಜಿಟಲ್ ಹೆಲ್ತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಬಯಸಿದ್ದಾರೆ. ಶೇಕಡಾ 23 ಪ್ರತಿಶತದಷ್ಟು ಜನರು ಆರೋಗ್ಯ ID ಯನ್ನು ರಚಿಸಲು ಬೆಂಬಲಿಸಿದ್ದಾರೆ. ಶೇಕಡಾ 18 ರಷ್ಟು ಜನರು ಇದನ್ನು ರಚಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಎಲ್ಲಾ ಭಾರತೀಯರಿಗಾಗಿ ಡಿಜಿಟಲ್ ಹೆಲ್ತ್ ಐಡಿಗಳನ್ನು ರಚಿಸಲು ಪ್ರಸ್ತಾಪಿಸಿರುವ ರಾಷ್ಟ್ರೀಯ ಆರೋಗ್ಯ ದತ್ತಾಂಶ ನಿರ್ವಹಣಾ ನೀತಿಗೆ ಸಂಬಂಧಿಸಿ ಲೋಕಲ್ ಸರ್ಕಲ್ಸ್ ನೀಡಿದ್ದ ನಾಲ್ಕು ಪ್ರಶ್ನೆಗಳಿಗೆ ಸುಮಾರು 34,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.

ಇನ್ನು ಡಿಜಿಟಲ್ ಹೆಲ್ತ್ ಐಡಿ ಡೇಟಾವನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಬೇಕು ಎಂಬ ಪ್ರಶ್ನೆಗೆ ಸುಮಾರು 8,600 ಪ್ರತಿಕ್ರಿಯೆಗಳು ಬಂದಿದ್ದು,  ಇದರಲ್ಲಿ ಶೇಕಡಾ 57 ರಷ್ಟು ಜನರು ಡೇಟಾ ಸಂಗ್ರಹಣೆಯನ್ನು ಆರೋಗ್ಯ ಮಾಹಿತಿಗಾಗಿ ಮಾತ್ರ ಮಾಡಬೇಕು ಮತ್ತು ಅದು ಕೇಂದ್ರ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳನ್ನು ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಮಾಡುವವರಿಗೆ ಸಲ್ಲಿಸಲಾಗುವುದು. ಇದರಿಂದ ಜನರ ಅಭಿಪ್ರಾಯ ಸರ್ಕಾರಕ್ಕೆ ತಲುಪಲಿದೆ ಎನ್ನುತ್ತಾರೆ ಲೋಕಲ್ ಸರ್ಕಲ್ಸ್‌ನ ಜನರಲ್ ಮ್ಯಾನೇಜರ್ ಅಕ್ಷಯ್ ಗುಪ್ತಾ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ : ಪ್ರೊ.ಪಾರ್ಥೋಸಾರಥಿ ರಾಯ್ ಗೆ NIA ನೋಟೀಸ್

ವ್ಯಕ್ತಿಯ ವೈಯಕ್ತಿಕ ಡೇಟಾವನ್ನು ಆತನ ಒಪ್ಪಿಗೆಯ ಮೇರೆಗೆ ಮಾತ್ರ ಸಂಗ್ರಹಿಸಬಹುದು. ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ), ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ದೇಶದಲ್ಲಿ ಎನ್‌ಡಿಎಚ್‌ಎಂ ವಿನ್ಯಾಸಗೊಳಿಸಲು ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ.

ಸರ್ಕಾರದ ಪ್ರಸ್ತಾವನೆ ಪ್ರಕಾರ, ಎನ್‌ಡಿಎಚ್‌ಎಂಗಾಗಿ ದಾಖಲಾದ ಪ್ರತಿಯೊಬ್ಬರೂ ಆರೋಗ್ಯ ಐಡಿಯನ್ನು ಉಚಿತವಾಗಿ ಪಡೆಯುತ್ತಾರೆ ಮತ್ತು ತಮ್ಮ ವೈಯಕ್ತಿಕ ಡೇಟಾದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಮತ್ತು ಪ್ರತಿಕ್ರಿಯೆಗಳನ್ನು ಕೋರಿ ಈ ದಾಖಲೆಯನ್ನು ಎನ್‌ಡಿಎಚ್‌ಎಂನ ಅಧಿಕೃತ ವೆಬ್‌ಸೈಟ್‌ನಲ್ಲಿ ಇರಿಸಲಾಗಿದೆ. ಸಲಹೆ, ಸೂಚನೆಗಳನ್ನು ನೀಡಲು ಸೆಪ್ಟೆಂಬರ್ 21 ರವರೆಗೆ ಸಮಯ ನೀಡಿದೆ.


ಇದನ್ನೂ ಓದಿ: ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...