Homeಆರೋಗ್ಯಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಶೇಕಡಾ 60 ರಷ್ಟು ಜನರು ಒಲವು ತೋರಿದ್ದಾರೆ ಎಂದು ಸರ್ವೆ ತಿಳಿಸಿದೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ದಾಖಲೆಗಳನ್ನು ಬಿಟ್ಟು ಸೂಕ್ಷ್ಮವಾದ ವೈಯಕ್ತಿಕ ಡೇಟಾವನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಮಹತ್ವಾಕಾಂಕ್ಷೆಯ ಎನ್‌ಡಿಎಚ್‌ಎಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ಈ ಸಮೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಡಿಜಿಟಲ್ ಹೆಲ್ತ್ ಐಡಿ ರಚಿಸಬೇಕೆ ಎಂಬ ಪ್ರಶ್ನೆಗೆ ಸುಮಾರು 9,000 ಜನರು ಪ್ರತಿಕ್ರಿಯಿಸಿದ್ದಾರೆ. ಇದರ ಪ್ರಕಾರ ಶೇಕಡಾ 59 ರಷ್ಟು ಜನರು ಡಿಜಿಟಲ್ ಹೆಲ್ತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಬಯಸಿದ್ದಾರೆ. ಶೇಕಡಾ 23 ಪ್ರತಿಶತದಷ್ಟು ಜನರು ಆರೋಗ್ಯ ID ಯನ್ನು ರಚಿಸಲು ಬೆಂಬಲಿಸಿದ್ದಾರೆ. ಶೇಕಡಾ 18 ರಷ್ಟು ಜನರು ಇದನ್ನು ರಚಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಎಲ್ಲಾ ಭಾರತೀಯರಿಗಾಗಿ ಡಿಜಿಟಲ್ ಹೆಲ್ತ್ ಐಡಿಗಳನ್ನು ರಚಿಸಲು ಪ್ರಸ್ತಾಪಿಸಿರುವ ರಾಷ್ಟ್ರೀಯ ಆರೋಗ್ಯ ದತ್ತಾಂಶ ನಿರ್ವಹಣಾ ನೀತಿಗೆ ಸಂಬಂಧಿಸಿ ಲೋಕಲ್ ಸರ್ಕಲ್ಸ್ ನೀಡಿದ್ದ ನಾಲ್ಕು ಪ್ರಶ್ನೆಗಳಿಗೆ ಸುಮಾರು 34,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.

ಇನ್ನು ಡಿಜಿಟಲ್ ಹೆಲ್ತ್ ಐಡಿ ಡೇಟಾವನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಬೇಕು ಎಂಬ ಪ್ರಶ್ನೆಗೆ ಸುಮಾರು 8,600 ಪ್ರತಿಕ್ರಿಯೆಗಳು ಬಂದಿದ್ದು,  ಇದರಲ್ಲಿ ಶೇಕಡಾ 57 ರಷ್ಟು ಜನರು ಡೇಟಾ ಸಂಗ್ರಹಣೆಯನ್ನು ಆರೋಗ್ಯ ಮಾಹಿತಿಗಾಗಿ ಮಾತ್ರ ಮಾಡಬೇಕು ಮತ್ತು ಅದು ಕೇಂದ್ರ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳನ್ನು ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಮಾಡುವವರಿಗೆ ಸಲ್ಲಿಸಲಾಗುವುದು. ಇದರಿಂದ ಜನರ ಅಭಿಪ್ರಾಯ ಸರ್ಕಾರಕ್ಕೆ ತಲುಪಲಿದೆ ಎನ್ನುತ್ತಾರೆ ಲೋಕಲ್ ಸರ್ಕಲ್ಸ್‌ನ ಜನರಲ್ ಮ್ಯಾನೇಜರ್ ಅಕ್ಷಯ್ ಗುಪ್ತಾ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ : ಪ್ರೊ.ಪಾರ್ಥೋಸಾರಥಿ ರಾಯ್ ಗೆ NIA ನೋಟೀಸ್

ವ್ಯಕ್ತಿಯ ವೈಯಕ್ತಿಕ ಡೇಟಾವನ್ನು ಆತನ ಒಪ್ಪಿಗೆಯ ಮೇರೆಗೆ ಮಾತ್ರ ಸಂಗ್ರಹಿಸಬಹುದು. ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ), ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ದೇಶದಲ್ಲಿ ಎನ್‌ಡಿಎಚ್‌ಎಂ ವಿನ್ಯಾಸಗೊಳಿಸಲು ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ.

ಸರ್ಕಾರದ ಪ್ರಸ್ತಾವನೆ ಪ್ರಕಾರ, ಎನ್‌ಡಿಎಚ್‌ಎಂಗಾಗಿ ದಾಖಲಾದ ಪ್ರತಿಯೊಬ್ಬರೂ ಆರೋಗ್ಯ ಐಡಿಯನ್ನು ಉಚಿತವಾಗಿ ಪಡೆಯುತ್ತಾರೆ ಮತ್ತು ತಮ್ಮ ವೈಯಕ್ತಿಕ ಡೇಟಾದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಮತ್ತು ಪ್ರತಿಕ್ರಿಯೆಗಳನ್ನು ಕೋರಿ ಈ ದಾಖಲೆಯನ್ನು ಎನ್‌ಡಿಎಚ್‌ಎಂನ ಅಧಿಕೃತ ವೆಬ್‌ಸೈಟ್‌ನಲ್ಲಿ ಇರಿಸಲಾಗಿದೆ. ಸಲಹೆ, ಸೂಚನೆಗಳನ್ನು ನೀಡಲು ಸೆಪ್ಟೆಂಬರ್ 21 ರವರೆಗೆ ಸಮಯ ನೀಡಿದೆ.


ಇದನ್ನೂ ಓದಿ: ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...