Homeಮುಖಪುಟಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

- Advertisement -
- Advertisement -

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿಯನ್ನು ನಿನ್ನೆ ಮಾಧ್ಯಮಗಳು ನಡೆಸಿಕೊಂಡ ರೀತಿ ನಿಜಕ್ಕೂ ಅಸಹನೀಯವಾದದ್ದು. ಯಾವುದೇ ವ್ಯಕ್ತಿಗೂ ತನ್ನದೇ ಆದ ವೈಯಕ್ತಿಕ ಗೌರವಗಳಿರುತ್ತವೆ. ಆದರೆ ನಿನ್ನೆ ರಿಯಾ ವಿಚಾರಣೆಗೆ ಆಗಮಿಸಿದಾಗ ಮಾಧ್ಯಮಗಳು ತಮ್ಮ ಮಿತಿಯನ್ನು ಉಲ್ಲಂಘಿಸಿದವು. ನೂರಾರು ಜನ ಗಂಡಸರು ಒಮ್ಮೆಲೇ ಆಕೆಯ ಮೇಲೆ ಮುಗಿಬಿದ್ದದ್ದು ಯಾವ ದೌರ್ಜನ್ಯಕ್ಕಿಂತ ಕಡಿಮೆಯಲ್ಲ.

ರಿಯಾ ಆರೋಪಿಯೇ ನಿಜ. ಹಾಗೆಂದ ಮಾತ್ರಕ್ಕೆ ಆಕೆಯನ್ನೂ ಅಷ್ಟು ಕೆಟ್ಟದಾಗಿ ನಡೆಸಿಕೊಳ್ಳುವ ಹಕ್ಕು ಯಾವ ಮಾಧ್ಯಮದವರಿಗೂ ಇಲ್ಲ. ತಮ್ಮ ಚಾನೆಲ್‌ಗಳ ಟಿಆರ್‌ಪಿ, ನಾವೇ ಮೊದಲು ಎಂಬುದು ಮಾತ್ರ ಗಮನದಲ್ಲಿರಿಸಿಕೊಳ್ಳುವ ಮಾಧ್ಯಮ ಮಿತ್ರರು ತಾವೊಂದು ಹೆಣ್ಣಿನ ಜೊತೆ ಹೇಗೆ ವರ್ತಿಸಬೇಕೆಂಬ ಕನಿಷ್ಠ ಜ್ಞಾನ ಇಲ್ಲದೇ ಹೋದದ್ದು ವಿಷಾದನೀಯ.

ಭಾರತದಲ್ಲಿ ಮಹಿಳೆ ಪ್ರತಿ ದಿನ ತನ್ನ ಹಕ್ಕುಗಳಿಗಾಗಿ ಹೋರಾಡುತ್ತಲೇ ಇದ್ದಾಳೆ. ನಟಿ ರಿಯಾಳ ತನ್ನ ಖಾಸಗಿ ಸಮಯ, ತನ್ನದೇ ದೇಹದ ಮೇಲಿನ ಹಕ್ಕುಗಳು ಕೂಡ ಆಕೆಯಿಂದ ಕಿತ್ತುಕೊಳ್ಳಲಾಯಿತು. ಕ್ಯಾಮೆರಾ, ಚಾನೆಲ್ ಲೋಗೋ ಅಷ್ಟೇ ಏಕೆ ವರದಿಗಾರರ ಕೈಗಳು ಆಕೆಯ ದೇಹವನ್ನು ಚುಚ್ಚುತ್ತಿದ್ದವು. ಇದ್ಯಾವೂದು ದೌರ್ಜನ್ಯ ಅಂತ ಅಲ್ಲಿದ್ದವರಿಗೆ ಅನ್ನಿಸಲೇ ಇಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಹದ್ದುಗಳಂತೆ ಆಕೆಯ ಮೇಲೆ ದಾಳಿ ನಡೆಸಿದ್ದಾರೆ.

ದೇಶದ ಪ್ರಧಾನ ಮಂತ್ರಿಗಳು, ರಾಜಕಾರಣಿಗಳು ದೇಶದಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಮುಖ್ಯ ಎಂದು ಭಾಷಣಗಳನ್ನು ಮಾತ್ರ ಮಾಡುತ್ತಾರೆ. ಹೊಸ ಹೊಸ ಕಾನೂನು ಜಾರಿ ಮಾಡುತ್ತಾರೆ ಆದರೆ ಇಂತಹ ಘಟನೆಗಳು ನಡೆದಾಗ ಅದರ ವಿರುದ್ಧ ಯಾರೂ ಸೊಲ್ಲೆತ್ತುವುದಿಲ್ಲ.

ಇನ್ನು ಹತ್ತಾರು ಜನ ಸೇರಿ ಮಾಡುವ ಪ್ರತಿಭಟನೆಗಳಲ್ಲೇ ದೊಂಬಿ, ಗಲಾಟೆ ಎನ್ನುವ ಪೊಲೀಸರು ಆಕೆಯ ಹಕ್ಕುಗಳನ್ನು ಉಲ್ಲಂಘಿಸಿದಕ್ಕಾಗಿ ಸ್ವಯಂ ಪ್ರೇರಿತರಾಗಿ ಕೇಸ್ ದಾಖಲಿಸಬಹುದಾಗಿತ್ತು ಆದರೆ ಅದು ಆಗಲಿಲ್ಲ. ಚಿಂತಕರು, ಮಹಿಳಾಪರ ಹೋರಾಟಗಾರರು, ಮಾನವ ಹಕ್ಕುಗಳ ಆಯೋಗ ಕೂಡ ಇದರ ಬಗ್ಗೆ ದನಿ ಎತ್ತಬಹುದಾಗಿತ್ತು ಆದರೇ ಆರೋಪಿಯೆಂಬ ಕಾರಣಕ್ಕೆ ಇಷ್ಟೇಲ್ಲಾ ಸಹಿಸಬೇಕಾಯಿತು ಆ ಹೆಣ್ಣು.

ಆದರೂ ಕೆಲವು ಪ್ರಜ್ಞಾವಂತರು ಆಕೆಯ ಪರವಾಗಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಿಆರ್‌ಪಿಗಾಗಿ ಮಾದ್ಯಮ ತನ್ನೆಲ್ಲಾ ರೂಲ್ಸ್‌ಗಳನ್ನು ಬ್ರೇಕ್ ಮಾಡಿಮಾಡಿದೆ ಎಂದು ಸುರೇಂದ್ರ ಸಿಂಗ್ ಶರ್ಮಾ ಎಂಬುವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರಾಣಾ ಆಯುಬ್ ತಮ್ಮ ಟ್ವೀಟ್‌ನಲ್ಲಿ “ನೂರಾರು ಪುರುಷರು, ಅವರ ಕ್ಯಾಮೆರಾಗಳು ಅವಳನ್ನು, ಅವಳ ದೇಹವನ್ನು ಮುಟ್ಟುತ್ತವೆ, ಅವಳಿಗೆ ಜಾಗ ನೀಡದೆ ಕಾನೂನು ಉಲ್ಲಂಘಿಸುತ್ತಿದ್ದವು. ಇದು ನಾಳೆ ನಿಮ್ಮ ಮೇಲೆಯೂ ನಡೆಯಬಹುದು. ಆದರೆ ಈಗ ನೀವು ಮೌನವಾಗಿ ಇದನ್ನು ನೋಡುತ್ತಾ ಖುಷಿ ಪಡುತ್ತಿರುತ್ತಿರಿ. ಏಕೆಂದರೆ ಅವಳು ನಿಮ್ಮ ಅನೈತಿಕ ಪ್ರಪಂಚದ ಕಣ್ಣಿಗೆ, ಮಹಿಳೆಯರಿಗೆ ಭದ್ರತೆ ನೀಡಿದ್ದೇವೆ ಎನ್ನುವ ಪ್ರಧಾನಿಯ ದೇಶದ ಖಳನಾಯಕಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮಿರಕ್ಕೆ ಹೋಲಿಸಿದ್ದ ನಟಿ ಕಂಗನಾ ರಾಣಾವತ್‌ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ, ಆದರೆ ರಿಯಾ ಚಕ್ರವರ್ತಿಗೆ? ಎಂದು ಟ್ವೀಟ್ ಒಂದರಲ್ಲಿ ಪ್ರಶ್ನಿಸಲಾಗಿದೆ.

ಆಕೆ ತಪ್ಪು ಮಾಡಿದ್ದಾಳೆ, ಹಾಗಾಗಿ ಆಕೆಯ ಜೊತೆಗೆ ಹಾಗೇಯೇ ನಡೆದುಕೊಳ್ಳಬೇಕು ಎಂಬುದು ನಿಮ್ಮ ಅಭಿಪ್ರಾಯವಾದರೆ, ಆಕೆ ಆರೋಪಿಯಷ್ಟೇ ಎಂಬುದನ್ನು ನೀವು ನೆನಪಲ್ಲಿ ಇಟ್ಟುಕೊಳ್ಳಬೇಕು. ಕಾನೂನು ಪ್ರಕಾರ ತನಿಖೆ ನಡೆದು ತಪ್ಪು ಸರಿ ನಿರ್ಣಯವಾಗುತ್ತದೆ. ಆಗ ಒಂದು ವೇಳೆ ಆಕೆ ಅಪರಾಧಿಯೇ ಆದರೂ ಸಹ ನಿಮಗೆ ಆಕೆಯೊಂದಿಗೆ ಹೀನಾಯವಾಗಿ ವರ್ತಿಸುವ ಹಕ್ಕಿರುವುದಿಲ್ಲ. ಹೆಣ್ಣಿಗೆ ಗೌರವ ಕೊಡುವುದು ಎಂದರೆ ಎಲ್ಲಾ ಹೆಣ್ಣುಮಕ್ಕಳನ್ನೂ ಗೌರವದಿಂದ ಕಾಣುವುದೆ ಆಗಿದೆ.

ಸುಶಾಂತ್ ಸಿಂಗ್ ರಾಜ್‌ಪೂತ್‌ಗೆ ನ್ಯಾಯ ದೊರಕಬೇಕಿರುವುದು ಸರಿಯೇ. ಆದರೆ ಇನ್ನೊಬ್ಬ ವ್ಯಕ್ತಿಯ ಗೌರವಕ್ಕೆ ಧಕ್ಕೆ ತರುವುದು ಕೂಡ ಅನ್ಯಾಯ ಎಂಬುದನ್ನು ಮೊದಲು ಪರಿಗಣಿಸಬೇಕು. ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವ ಹಕ್ಕು ಯಾವ ಮಾಧ್ಯಮಗಳಿಗೂ ಇಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿಕೊಳ್ಳುವ ಮಾಧ್ಯಮಗಳ ಈ ನಡೆ ನಿಜಕ್ಕೂ ಅವಹೇಳನಕಾರಿಯಾದದ್ದು.


ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...