Homeಮುಖಪುಟಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ವಿಶ್ಲೇಷಣಾತ್ಮಕ ಲೇಖನಗಳಿಗೆ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ವೆಬ್‌ಸೈಟ್ ಹೇಳಿದೆ.

- Advertisement -
- Advertisement -

’ಜನಶಕ್ತಿ’ ವಾರಪತ್ರಿಕೆಯ ಜಾಲತಾಣ ರೂಪವಾದ ’ಜನಶಕ್ತಿ ಮೀಡಿಯಾ’ ವೆಬ್‌ ಪತ್ರಿಕೆಯು ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಲಿದ್ದು, ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರ ವರೆಗೆ ಪರ್ಯಾಯ ಮಾಧ್ಯಮ ಏಕೆ? ಹೇಗೆ ? ಕುರಿತು ಬರಹ ಮತ್ತು ವೆಬಿನಾರ್‌ಗಳ ಸಂವಾದ ನಡೆಯಲಿದೆ.

ಜನಶಕ್ತಿ ಮೀಡಿಯಾ ವೆಬ್, ಫೇಸ್‌ಬುಕ್, ಪಾಡ್ಕಾಸ್ಟ್ ಮತ್ತು ಯೂ ಟ್ಯೂಬ್ ಚಾನೆಲುಗಳು ಈಗಾಗಲೇ ಸಕ್ರಿಯವಾಗಿದ್ದು, ಪ್ರಸ್ತುತ ಹೊಸ ವಿನ್ಯಾಸದೊಂದಿಗೆ ಪ್ರಕಟಿಸುವ ಸಿದ್ಧತೆ ನಡೆಯುತ್ತಿದೆ. ವೆಬ್ ಪತ್ರಿಕೆಯಲ್ಲಿ ಪ್ರಸಕ್ತ ವಿದ್ಯಮಾನಗಳ ವಸ್ತುನಿಷ್ಠ ವರದಿ, ಟೀಕೆ ಟಿಪ್ಪಣಿ ವಿಮರ್ಶೆಗಳಿರುತ್ತವೆ ಎಂದು ಹೇಳಿಕೆಯಲ್ಲಿ ವಸಂತರಾಜು ಎನ್‌.ಕೆ ತಿಳಿಸಿದ್ದಾರೆ.

ಇದು ರಾಜ್ಯ, ರಾಷ್ಟ್ರ ಮತ್ತು ಅಂರ‍್ರಾಷ್ಟ್ರೀಯ ಮಟ್ಟದ ಚಿಂತಕರ, ಪರಿಣಿತರ, ಬರಹಗಾರರ, ಪತ್ರಕರ್ತರ ವೈವಿಧ್ಯಮಯ ಅಭಿಪ್ರಾಯಗಳಿಗೆ ವೇದಿಕೆಯಾಗಿರುತ್ತದೆ. ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ವಿಜ್ಙಾನ-ತಂತ್ರಜ್ಙಾನ ಇತ್ಯಾದಿ ವಿಷಯಗಳ ಕುರಿತು ವಿಶ್ಲೇಷಣಾತ್ಮಕ ಲೇಖನಗಳಿಗೂ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

“ಕರ್ನಾಟಕ 2020: ಕೊರೊನಾ ಕಾಲದಲ್ಲಿ ಮತ್ತು ನಂತರ” ವಿಷಯದ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಕಾಲದಲ್ಲಿ ಹೇಗೆ ವರ್ತಿಸಿದವು? ಈ ವರ್ತನೆಗೆ ಕೊರೊನಾ ಕಾರಣವೇ?  ಅಲ್ಲದಿದ್ದರೆ ಇದಕ್ಕೆ ಕಾರಣಗಳೇನು? ಮುಖ್ಯವಾಹಿನಿ ಮಾಧ್ಯಮಗಳನ್ನು ‘ಸುಧಾರಿಸಲು’ ಸಾಧ್ಯವಿಲ್ಲವೇ? ಇದೆ ಎನ್ನುವುದಾದರೆ ಏನು ಮಾಡಬೇಕು? ಇಲ್ಲವಾದರೆ ಪರ್ಯಾಯ ಏನು? ಪರ್ಯಾಯ ಮಾಧ್ಯಮದ ಸ್ವರೂಪ, ಕಾರ್ಯವಿಧಾನ ಹೇಗಿರಬೇಕು? ಅದಕ್ಕೆ ಸಂಪನ್ಮೂಲ ಹೊಂದಿಸುವುದು ಹೇಗೆ? ಇನ್ನಿತ್ಯಾದಿ ಪ್ರಶ್ನೆಗಳನ್ನಿಟ್ಟುಕೊಂಡು ಸರಣಿ ಬರಹ ಮತ್ತು ಚರ್ಚೆ ನಡೆಸಲು ಮೀಡಿಯ ತಂದ ಮುಂದಾಗಿದೆ.

ಇದನ್ನೂ ಓದಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ಥೀಮ್‌ ಕುರಿತ ಅಭಿಪ್ರಾಯಗಳನ್ನು ಬರಹ, ಅಡಿಯೋ ಅಥವಾ ವಿಡಿಯೋ ರೂಪದಲ್ಲಿ ಸೆಪ್ಟೆಂಬರ್ 20 ರೊಳಗಾಗಿ 9845172249, 9449260183/ [email protected] ಮೈಲ್/ವಾಟ್ಸಪ್ ಗೆ ಕಳಿಸಿಕೊಡಬೇಕು ಎಂದು ಜನಶಕ್ತಿ ಮೀಡಿಯ ತಂಡ ವಿನಂತಿಸಿದೆ.


ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...