Homeಮುಖಪುಟಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಗುಂಪು ಹಲ್ಲೆಯಲ್ಲಿ ಯುಪಿ ಮಾಜಿ ಶಾಸಕನ ಸಾವು: ಪೊಲೀಸರ ಮೇಲೆ ಆರೋಪ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, "ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ" ಎಂದು ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಭೂ ವಿವಾದದ ಕಾರಣಕ್ಕೆ ಉತ್ತರ ಪ್ರದೇಶದ ಮಾಜಿ ಶಾಸಕರಾದ ನಿರ್ವೇಂದ್ರ ಕುಮಾರ್ ಮಿಶ್ರಾ ಅವರ ಮೇಲೆ ಗುಂಪು ಹಲ್ಲೆ ನಡೆಸಿದ್ದು ಅವರು ಭಾನುವಾರ ನಿಧನರಾಗಿದ್ದಾರೆ. ಇದಕ್ಕೆ ಪೊಲೀಸರೂ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಹಳೆಯ ಭೂ ವಿವಾದದ ಬಗ್ಗೆ ನಡೆದ ಜಗಳದಲ್ಲಿ ಹಲ್ಲೆ ಮಾಡಲಾಗಿದ್ದು ಶಾಸಕರು ಮರಣ ಹೊಂದಿದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ.

ನಿರ್ವೇಂದ್ರ ಕುಮಾರ್ ಮಿಶ್ರಾ 1993 ರಲ್ಲಿ ಸಮಾಜವಾದಿ ಪಕ್ಷದಿಂದ ಗೆಲ್ಲುವ ಮೊದಲು 1989 ಮತ್ತು 1991 ರಲ್ಲಿ ಎರಡು ಬಾರಿ ಸ್ವತಂತ್ರರಾಗಿ ಜಿಲ್ಲೆಯ ನಿಘಾಸನ್ ಸ್ಥಾನದಿಂದ ಶಾಸಕರಾಗಿದ್ದರು.

ಪಲ್ಲಿಯಾ ಗ್ರಾಮದ ನಿವಾಸಿಗಳಾದ ಸಮೀರ್ ಗುಪ್ತಾ ಮತ್ತು ರಾಧೇಶ್ಯಾಂ ಗುಪ್ತಾ ಅವರೊಂದಿಗೆ ಮಿಶ್ರಾ ವಿವಾದಿತ ಭೂಮಿಯ ಬಗ್ಗೆ ವಾದ ನಡೆಸಿದ್ದರು. ವಿವಾದಿತ ಭೂಮಿ ಸಮೀರ್ ಹೆಸರಿನಲ್ಲಿತ್ತು. ಹಾಗಾಗಿ ಮಿಶ್ರಾ ಈ ಸ್ವಾಧೀನವನ್ನು ವಿರೋಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಸೆಕ್ಷನ್ 107/116 ರ ಅಡಿಯಲ್ಲಿ ಮಿಶ್ರಾ ಮತ್ತು ಅವರ ಮಗನ ವಿರುದ್ಧ ಈ ಹಿಂದೆ ಪ್ರಕರಣ ದಾಖಲಾಗಿತ್ತು.

‘ಮೇಲು ನೋಟಕ್ಕೆ, ನಿರ್ವೇಂದ್ರ ಕುಮಾರ್ ಮಿಶ್ರಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಊಹಿಸಬಹುದು. ಏಕೆಂದರೆ ಅವರ ದೇಹದಲ್ಲಿ ಯಾವುದೇ ಗಾಯದ ಲಕ್ಷಣಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ” ಎಂದು ಪೊಲೀಸರು ಹೇಳಿರುವುದಾಗಿ ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಕೊಲೆ: ಪೊಲೀಸರೇ ಆರೋಪಿಗಳೆಂದ ಕುಟುಂಬ!

“ಎರಡೂ ಕಡೆಯವರ ನಡುವೆ ವಿವಾದ ಆರಂಭವಾಗಿತ್ತು. ನಂತರ ಇದು ಜಗಳಕ್ಕೆ ತಿರುಗಿತು. ಆ ಸಂದರ್ಭದಲ್ಲಿ ಮಿಶ್ರಾ ನೆಲಕ್ಕೆ ಕುಸಿದು ಬಿದ್ದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸತ್ತರು ಎಂದು ಘೋಷಿಸಲಾಯಿತು. ಅವರ ಮಗ ಸಂಜೀವ್ ಸ್ಥಿತಿ ಕೂಡಾ ಗಂಭೀರವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಅವರು ನನಗೆ ಹೊಡೆದರು. ಅವರು ನಮ್ಮ ತಂದೆಯನ್ನು ಹೊಡೆದು ಸಾಯಿಸಿದರು. ನನ್ನ ತಂದೆಯನ್ನು ಕೊಲ್ಲಲಾಯಿತು” ಎಂದು ಮಿಶ್ರಾ ಅವರ ಮಗ ಸ್ಥಳೀಯ ವರದಿಗಾರರೊಂದಿಗೆ ಹೇಳಿದರು.

ಈ ಹಲ್ಲೆಯಲ್ಲಿ ಪೊಲೀಸರ ಪಾತ್ರವನ್ನೂ ಪ್ರಶ್ನಿಸಿದ ಅವರು, ತಂದೆಯ ಮೇಲೆ ಹಲ್ಲೆ ನಡೆಸಿದವರನ್ನು ಪೊಲೀಸರು ರಕ್ಷಿಸುತ್ತಿದ್ದಾರೆ ಸಂಜೀವ್ ಆರೋಪಿಸಿದ್ದಾರೆ. ಮಿಶ್ರಾ ಅವರ ಮರಣದ ನಂತರ, ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟುಗೂಡಿ, ಅವರ ಮೃತ ದೇಹವನ್ನು ತ್ರಿಕೋಲಿಯಾ ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಕೊಲೆಗಾರರೊಂದಿಗೆ ಯುಪಿ ಪೊಲೀಸರು ಶಾಮೀಲಾಗಿದ್ದಾರೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ನನ್ನ ತಂದೆ ನೆಲಕ್ಕೆ ಕುಸಿದ ನಂತರ, ಸ್ಥಳೀಯರು ಗುಂಪು ಹಲ್ಲೆ ಮಾಡಿದ ಕೆಲವು ಆರೋಪಿಗಳನ್ನು ಹಿಮ್ಮೆಟ್ಟಿಸಿ ಹಿಡಿದರು. ಆದರೆ ಪೊಲೀಸರು ಬಂದು ಅವರಿಗೆ ಮುಕ್ತವಾಗಿ ಹೋಗಲು ಅವಕಾಶ ಮಾಡಿಕೊಟ್ಟರು ಎಂದು ಮಿಶ್ರಾ ಅವರ ಮಗ ಸಂಜೀವ್ ಆರೋಪಿಸಿದ್ದಾರೆ.

ತ್ರಿಕೋಲಿಯ ಪಧುವಾ ಬಸ್ ನಿಲ್ದಾಣದ ಬಳಿ 40ಕ್ಕೂ ಹೆಚ್ಚು ಗೂಂಡಾಗಳು ಗುಂಪು ಹಲ್ಲೆ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೂಮಿಯನ್ನು ವಶಪಡಿಸಿಕೊಳ್ಳಲು, ಪುರುಷರ ಗುಂಪು ಶಸ್ತ್ರಾಸ್ತ್ರಗಳೊಂದಿಗೆ ಬಂದಿದ್ದರು. ನಿರ್ವೇಂದ್ರ ಕುಮಾರ್ ಮಿಶ್ರಾ ಮತ್ತು ಅವರ ಮಗ ಸಂಜೀವ್ ಮಿಶ್ರಾ ಇದನ್ನು ವಿರೋಧಿಸಿದ ನಂತರ ಅವರ ಹಲ್ಲೆ ಮಾಡಲಾಗಿದೆ ಎಂದು ಮಿಶ್ರಾ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಭೂ ವಿವಾದದ ವಿಷಯವೂ ನ್ಯಾಯಾಲಯದಲ್ಲಿ ವಿಚಾರಣೆಯಾಗುತ್ತಿದೆ ಎಂದು ವರದಿಯಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, “ಪೊಲೀಸರ ಸಮ್ಮುಖದಲ್ಲಿ ಹಗಲು ಹೊತ್ತಿನಲ್ಲಿ ನಡೆದ ಹೃದಯ ವಿದ್ರಾವಕ ಕೊಲೆ ರಾಜ್ಯವನ್ನು ಬೆಚ್ಚಿಬೀಳಿಸಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...