Homeಮುಖಪುಟಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸಿದ್ದಾರೆ.

- Advertisement -
- Advertisement -

ಶಾಲಾ ಶಿಕ್ಷಕನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯೊಬ್ಬನನ್ನು ಜನರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿ, ಕೊಲೆ ಮಾಡಿರುವ ಘಟನೆ ಪೂರ್ವ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಜನರು ಕೋಲು, ಬಡಿಗೆಗಳಿಂದ ವ್ಯಕ್ತಿಗೆ ಹೊಡೆಯುತ್ತಿರುವುದು, ಸುತ್ತಲೂ ಪೊಲೀಸರು ನಿಂತಿರುವ ವಿಡಿಯೋ ವೈರಲ್ ಆಗಿದೆ.

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಆ ವ್ಯಕ್ತಿ ನೆಲಕ್ಕೆ ಬಿದ್ದರೂ ಸಹ ಜನ ಮಾತ್ರ ಹೊಡೆಯುವುದನ್ನು ನಿಲ್ಲಿಸಲಿಲ್ಲ. ವ್ಯಕ್ತಿಯ ತಲೆಯಿಂದ ರಕ್ತ ಬರುವವರೆಗೂ ಹೊಡೆದು ಸಾಯಿಸಿದ್ದಾರೆ.

ಪೊಲೀಸರ ಪ್ರಕಾರ ಮೃತ ಆರೋಪಿ ಗೋರಖ್‌ಪುರದವರು. ಆತನ ಮೆಲೆ ತನ್ನ ತಂದೆಯ ಬಂದೂಕನ್ನು ಬಳಸಿ ಶಿಕ್ಷಕನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂಬ ಆರೋಪವಿದೆ. ಈತ ಸುಧೀರ್ ಕುಮಾರ್ ಸಿಂಗ್ ಎಂಬುವರನ್ನು ಭೇಟಿಯಾಗಲು ಬಂದಿದ್ದ. ತಾನು ಸಿಂಗ್ ಅವರ ಹಿರಿಯ ಸಹೋದರನ ಸ್ನೇಹಿತ ಎಂದು ಮನೆಯಲ್ಲಿ ಕುಳಿತು ಚಹಾ ಸೇವಿಸಿದ್ದ. ಸಿಂಗ್ ಸ್ನಾನ ಮಾಡಿ ಹೊರಗೆ ಬರುತ್ತಿದ್ದಂತೆ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಕುಶಿನಗರ ಪೊಲೀಸ್ ಅಧೀಕ್ಷಕ ವಿನೋದ್ ಕುಮಾರ್ ಮಿಶ್ರಾ ಹೇಳಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

PC: NDTV.com

ಘಟನೆಯ ನಂತರ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಆದರೆ ಮನೆಯ ಹೊರಗೆ ಜನಸಮೂಹವಿದ್ದರಿಂದ ಆತ ಟೆರೇಸ್ ಮೇಲೆ ಹತ್ತಿದ್ದನು. ತನ್ನ ಬಳಿ ಇದ್ದ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಆಗ ಸ್ಥಳೀಯರು ಪೊಲೀಸರನ್ನು ಕರೆದರು. ಪೊಲೀಸರು ಶರಣಾಗುವಂತೆ ಹೇಳಿದರೂ, ಕೆಳಗಿಳಿದು ಕೋಣೆಯಲ್ಲಿ ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದ, ತಕ್ಷಣ ಜನರ ಗುಂಪೊಂದು ದಾಳಿ ಮಾಡಿ ಆತನನ್ನು ಪೊಲೀಸರು ತಲುಪುವ ಮುನ್ನವೇ ಕೊಂದರು ಎಂದು ಮಿಶ್ರಾ ಹೇಳಿದ್ದಾರೆ.

ಆದರೆ ಸ್ಥಳೀಯರ ಪ್ರಕಾರ  ಶಿಕ್ಷಕರ ಮೇಲೆ ಗುಂಡು ಹಾರಿಸಿದ ನಂತರ, ಆತ ಮನೆಯ ಟೆರೇಸ್ ಹತ್ತಿ ಗುಂಡು ಹಾರಿಸಿದನು. ಪೊಲೀಸರು ಬಂದಾಗ, ಶರಣಾಗತಿಯಲ್ಲಿ ಕೈ ಎತ್ತಿದ್ದ.  ಪೊಲೀಸರು ಅವರನ್ನು ಕೆಳಕ್ಕೆ ಇಳಿಸಿ ಪೊಲೀಸ್ ವಾಹನದಲ್ಲಿ ಕೂರಿಸುತ್ತಿದ್ದಾಗ ಗ್ರಾಮಸ್ಥರು ಆತನನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿದರು ಎಂದಿದ್ದಾರೆ.

ತಮ್ಮ ಮುಂದೆಯೇ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಯುತ್ತಿದ್ದರು ಪೊಲೀಸರು ಏನು ಮಾಡದೆ ಇದ್ದರು. ಆದರೆ ಹೇಳಿಕೆಯಲ್ಲಿ ಮಾತ್ರ ನಾವು ತಲುಪುವ ಮುನ್ನವೇ ಘಟನೆ ನಡೆದುಹೋಯಿತು ಎಂದು ತಮ್ಮದೇನು ತಪ್ಪಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಘಟನೆ ನಂತರ ಸಿಕ್ಕಿರುವ ವಿಡಿಯೋದಲ್ಲಿ ಪೊಲೀಸರಿರುವುದು, ಅವರ ಮುಂದೆಯೇ ಹಲ್ಲೆ ನಡೆಯುತ್ತಿರುವುದು ಕಾಣಬಹುದಾಗಿದೆ.


ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...