Homeಮುಖಪುಟನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

ಮೆಟ್ರೋ (2016) ತಮಿಳು ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸೆ.5 ರಂದು ನಟ ಶಿರೀಶ್ ಅವರು “ಆಳವಾದ ಚರ್ಚೆಯಲ್ಲಿ, ಒಳ್ಳೆಯ ವಿಷಯಗಳು ನಮ್ಮ ಹಾದಿಗೆ ಬರುತ್ತಿವೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

ಈ ಫೋಟೋ ಇಷ್ಟೊಂದು ವೈರಲ್ ಆಗಲು ಕಾರಣ ಇಬ್ಬರು ಧರಿಸಿದ್ದ ಟೀ ಶರ್ಟ್‌ಗಳು. ಹೌದು, ಯುವನ್ ಅವರ ಟೀ ಶರ್ಟ್‌ ಮೇಲೆ  ತಮಿಳು ಕವಿ ತಿರುವಳ್ಳುವರ್ ಅವರ ಆಧುನಿಕ ಸ್ಕೆಚ್‌ನೊಂದಿಗೆ, “ನಾನು ತಮೀಝ್ ಪೆಸುಮ್ ಇಂಡಿಯನ್” ಎಂದಿದ್ದರೆ, ಶಿರೀನ್ ಧರಿಸಿದ್ದ ಕೆಂಪು ಟೀಶರ್ಟ್ ಮೇಲೆ  “ಹಿಂದಿ ಥೆರಿಯಾದು, ಪೋಡಾ!”ಎಂಬ ಪದಗಳಿದ್ದವು. ಇವು ಈ ಫೋಟೋ ವೈರಲ್ ಆಗಲು ಕಾರಣವಾಯಿತು.

ಈ ಚಿತ್ರ ತಮಿಳುನಾಡಿನಲ್ಲಿ ಹೊಸ ಅಲೆಯನ್ನೇ ಹುಟ್ಟುಹಾಕಿತು. ಟ್ವಿಟ್ಟರ್‌ನಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವಾರು ಜನರು ಇದೇ ರೀತಿಯ ಟೀ ಶರ್ಟ್ ಧರಿಸಿದ ಫೋಟೋಗಳನ್ನು ಸಾಮಾಜಿಕ ಸಾಲತಾಣಗಳಲ್ಲಿ ಹಂಚಿಕೊಂಡರು.

ತೂತುಕುಡಿ ಸಂಸದೆ ಕನಿಮೋಳಿ ಹೇಳುವಂತೆ ಡಿಎಂಕೆ ಮುಖಂಡರು ಈ ಕೆಲಸವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಿದ್ದು, ಟೀ ಶರ್ಟ್‌ಗಳನ್ನು ಮುದ್ರಿಸಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕನಿಮೋಳಿ ಭಾನುವಾರ ಟಿ-ಶರ್ಟ್ ಧರಿಸಿದ ಯುವಕರ ಗುಂಪಿನೊಂದಿಗೆ ತನ್ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಟೀ-ಶರ್ಟ್‌ ತಯಾರಿಕೆಗೆ ಹೆಸರುವಾಸಿಯಾದ ತಿರುಪ್ಪೂರಿನ ಗಾರ್ಮೆಂಟ್ ತಯಾರಕರು ಇದೇ ರೀತಿಯ ಟೀಶರ್ಟ್‌‌ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಬರೀ ಟೀ ಶರ್ಟ್‌‌ಗಳೇ ಅಲ್ಲದೆ ಮೊಬೈಲ್ ಪೌಚ್‌ಗಳು, ಮೀಮ್ಸ್‌ಗಳಲ್ಲೂ ಹಿಂದಿ ಥೆರಿಯಾದು, ಪೋಡಾ ಟ್ರೆಂಡಿಂಗ್‌ನಲ್ಲಿದೆ.

ತಮ್ಮ ಮೇಲೆ ಹಿಂದಿ ಹೇರಿಕೆ ಮಾಡಲು ಬಂದರೇ ಯಾವ ಯಾವ ರೀತಿಯ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ತಮಿಳುನಾಡಿನ ಜನತೆ ತೋರಿಸುತ್ತಲೇ ಇದ್ದಾರೆ. ಈಗ ಇದಕ್ಕೆ ಟೀ-ಶರ್ಟ್‌ ಅಭಿಯಾನ ಸೇರಿಕೊಂಡಿದೆ. ತಮಿಳುನಾಡಿನಲ್ಲಿ ಜನರ ಜೊತೆಗೆ ಚಿತ್ರರಂಗ, ರಾಜಕೀಯ ನಾಯಕರು ಸಹ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...