Homeಮುಖಪುಟನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

ಮೆಟ್ರೋ (2016) ತಮಿಳು ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸೆ.5 ರಂದು ನಟ ಶಿರೀಶ್ ಅವರು “ಆಳವಾದ ಚರ್ಚೆಯಲ್ಲಿ, ಒಳ್ಳೆಯ ವಿಷಯಗಳು ನಮ್ಮ ಹಾದಿಗೆ ಬರುತ್ತಿವೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

ಈ ಫೋಟೋ ಇಷ್ಟೊಂದು ವೈರಲ್ ಆಗಲು ಕಾರಣ ಇಬ್ಬರು ಧರಿಸಿದ್ದ ಟೀ ಶರ್ಟ್‌ಗಳು. ಹೌದು, ಯುವನ್ ಅವರ ಟೀ ಶರ್ಟ್‌ ಮೇಲೆ  ತಮಿಳು ಕವಿ ತಿರುವಳ್ಳುವರ್ ಅವರ ಆಧುನಿಕ ಸ್ಕೆಚ್‌ನೊಂದಿಗೆ, “ನಾನು ತಮೀಝ್ ಪೆಸುಮ್ ಇಂಡಿಯನ್” ಎಂದಿದ್ದರೆ, ಶಿರೀನ್ ಧರಿಸಿದ್ದ ಕೆಂಪು ಟೀಶರ್ಟ್ ಮೇಲೆ  “ಹಿಂದಿ ಥೆರಿಯಾದು, ಪೋಡಾ!”ಎಂಬ ಪದಗಳಿದ್ದವು. ಇವು ಈ ಫೋಟೋ ವೈರಲ್ ಆಗಲು ಕಾರಣವಾಯಿತು.

ಈ ಚಿತ್ರ ತಮಿಳುನಾಡಿನಲ್ಲಿ ಹೊಸ ಅಲೆಯನ್ನೇ ಹುಟ್ಟುಹಾಕಿತು. ಟ್ವಿಟ್ಟರ್‌ನಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವಾರು ಜನರು ಇದೇ ರೀತಿಯ ಟೀ ಶರ್ಟ್ ಧರಿಸಿದ ಫೋಟೋಗಳನ್ನು ಸಾಮಾಜಿಕ ಸಾಲತಾಣಗಳಲ್ಲಿ ಹಂಚಿಕೊಂಡರು.

ತೂತುಕುಡಿ ಸಂಸದೆ ಕನಿಮೋಳಿ ಹೇಳುವಂತೆ ಡಿಎಂಕೆ ಮುಖಂಡರು ಈ ಕೆಲಸವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಿದ್ದು, ಟೀ ಶರ್ಟ್‌ಗಳನ್ನು ಮುದ್ರಿಸಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕನಿಮೋಳಿ ಭಾನುವಾರ ಟಿ-ಶರ್ಟ್ ಧರಿಸಿದ ಯುವಕರ ಗುಂಪಿನೊಂದಿಗೆ ತನ್ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಟೀ-ಶರ್ಟ್‌ ತಯಾರಿಕೆಗೆ ಹೆಸರುವಾಸಿಯಾದ ತಿರುಪ್ಪೂರಿನ ಗಾರ್ಮೆಂಟ್ ತಯಾರಕರು ಇದೇ ರೀತಿಯ ಟೀಶರ್ಟ್‌‌ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಬರೀ ಟೀ ಶರ್ಟ್‌‌ಗಳೇ ಅಲ್ಲದೆ ಮೊಬೈಲ್ ಪೌಚ್‌ಗಳು, ಮೀಮ್ಸ್‌ಗಳಲ್ಲೂ ಹಿಂದಿ ಥೆರಿಯಾದು, ಪೋಡಾ ಟ್ರೆಂಡಿಂಗ್‌ನಲ್ಲಿದೆ.

ತಮ್ಮ ಮೇಲೆ ಹಿಂದಿ ಹೇರಿಕೆ ಮಾಡಲು ಬಂದರೇ ಯಾವ ಯಾವ ರೀತಿಯ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ತಮಿಳುನಾಡಿನ ಜನತೆ ತೋರಿಸುತ್ತಲೇ ಇದ್ದಾರೆ. ಈಗ ಇದಕ್ಕೆ ಟೀ-ಶರ್ಟ್‌ ಅಭಿಯಾನ ಸೇರಿಕೊಂಡಿದೆ. ತಮಿಳುನಾಡಿನಲ್ಲಿ ಜನರ ಜೊತೆಗೆ ಚಿತ್ರರಂಗ, ರಾಜಕೀಯ ನಾಯಕರು ಸಹ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...