Homeಮುಖಪುಟಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ.

- Advertisement -
- Advertisement -

ಭಾರತದಲ್ಲೇ ನಿರ್ಮಿಸಿದ ಅತ್ಯಾಧುನಿಕ ಹೈಪರ್‌ ಸಾನಿಕ್ ತಂತ್ರಜ್ಞಾನದ ಡೆಮಾನ್‌ಸ್ಟ್ರೇಷರ್‌ ವೆಹಿಕಲ್(HSTDV) ಪರೀಕ್ಷಾರ್ಥ ಉಡಾವಣೆ ನಿನ್ನೆ ಯಶಸ್ವಿಯಾಗಿ ಒಡಿಶಾದ ಬಲಾಸೂರ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.

ಈ ಮೂಲಕ ಭಾರತವು HSTDV ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದುವರೆಗೆ ರಷ್ಯಾ, ಚೀನಾ ಮತ್ತು ಅಮೇರಿಕಾ ಮಾತ್ರ ಇದನ್ನು ಹೊಂದಿತ್ತು. “ರಕ್ಷಣಾ ಕ್ಷೇತ್ರದಲ್ಲಿ ಇದೊಂದು ದೊಡ್ಡ ಮೈಲಿಗಲ್ಲು” ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯ (DRDO) ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಹೇಳಿದ್ದಾರೆ.

ಏನಿದು ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV?

ಹೈಪರ್​ ಸಾನಿಕ್ ಟೆಕ್ನಾಲಜಿ ಡೆಮಾನ್ಸ್​‌ಟ್ರೇಟರ್ ವೆಹಿಕಲ್ ಎಂಬುವುದು ಮಾನವರಹಿತ ಸ್ಕ್ರಾಮ್‌‌ಜೆಟ್ ಪ್ರಾತ್ಯಕ್ಷಿಕೆ ವಿಮಾನ.ಇದು ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ, ಒಂದು ಸೆಕೆಂಡ್‍ಗೆ 2 ಕಿ,ಮೀ. ಎತ್ತರ ನೆಗೆಯಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

HSTDV

ಪ್ರಸ್ತುತ ಈ ಹೈಪರ್‌ಸಾನಿಕ್ ವೆಹಿಕಲ್ 20 ಸೆಕೆಂಡುಗಳ ಹಾರಾಟ ನಡೆಸುತ್ತದೆ. ಅಂತಿಮವಾಗಿ 20 ಮೈಲಿ ದೂರವನ್ನು ತಲುಪುವುದು DRDO ಗುರಿಯಾಗಿದೆ. ಉಡಾವಣಾ ವಾಹನಗಳನ್ನು ಮರುಬಳಕೆ ಮಾಡಲು ಸಾಧ್ಯ ಇರುವ ಹಾಗೆ ಅಭಿವೃದ್ದಿ ಪಡಿಸುವುದು DRDO ಯೋಜನೆಯಲ್ಲಿ ಸೇರಿದೆ.

HSTDV ಯ ಅಣಕು ಯೋಜನೆಯನ್ನು ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾದಲ್ಲಿ ಪ್ರದರ್ಶಿಸಲಾಗಿತ್ತು. DRDO ಇದಕ್ಕೆ ಸಂಬಂಧಿಸಿದ ವೈಮಾನಿಕ ಚೌಕಟ್ಟಿನ ವಿನ್ಯಾಸವನ್ನು 2004 ರಲ್ಲಿಯೇ ಪೂರ್ಣಗೊಳಿಸಿತ್ತು.

ಇದನ್ನು ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಅಷ್ಟೇ ಅಲ್ಲದೆ 15-20 ಕಿ.ಮೀ. ಎತ್ತರದಲ್ಲಿ ಇದರ ಎಂಜಿನ್ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಬಯಸಿರುವುದಾಗಿ 2008 ರಲ್ಲಿ DRDO ತಿಳಿಸಿತ್ತು. ಸ್ಕ್ರಾಮ್‌ಜೆಟ್ ಎಂಜಿನ್ ಶಕ್ತಿಯೊಂದಿಗೆ ಹೈಪರ್‌ಸಾನಿಕ್ ವಾಹನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದ್ವಿ-ಬಳಕೆ ತಂತ್ರಜ್ಞಾನ ಬಹುಬಳಕೆಗೆ ಸಿಗಲಿದೆ ಎಂದು ಅದು ಹೇಳಿತ್ತು.

DRDO ತಂಡಕ್ಕೆ ಗಣ್ಯ ಶುಭಾಶಯ

ದೇಶದ ರಕ್ಷಣಾ ಕಾರ್ಯದಲ್ಲಿ ಮೈಲುಗಲ್ಲನ್ನು ಸ್ಥಾಪಿಸಿದ DRDO ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, “ಹೈಪರ್ಸಾನಿಕ್ ಟೆಸ್ಟ್ ಪ್ರಾತ್ಯಕ್ಷಿಕೆ ವಾಹನದ ಯಶಸ್ವಿ ಹಾರಾಟಕ್ಕಾಗಿ DRDO ಗೆ ಅಭಿನಂದನೆಗಳು. ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ಕ್ರ್ಯಾಮ್‌ಜೆಟ್ ಎಂಜಿನ್ ಹಾರಾಟವು ಶಬ್ದದ ವೇಗಕ್ಕಿಂತ 6 ಪಟ್ಟು ವೇಗವನ್ನು ಸಾಧಿಸಲು ಸಹಾಯ ಮಾಡುತ್ತದೆ. ಕೆಲವೇ ಕೆಲವು ದೇಶಗಳು ಇಂತಹ ಸಾಮರ್ಥ್ಯವನ್ನು ಹೊಂದಿವೆ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಇದೊಂದು ಮೈಲಿಗಲ್ಲಾಗಲಿದೆ. ಡಿಆರ್‌ಡಿಓ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಎಲ್ಲ ವಿಜ್ಞಾನಿಗಳಿಗೆ ಶುಭಾಶಯ ಹೇಳುತ್ತೇನೆ. ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸೈನ್ಯಾಧಿಕಾರಿಯು ಆಗಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್, ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‌ಸ್ಟ್ರೇಟರ್ ವೆಹಿಕಲ್‌ನ ಯಶಸ್ವಿ ಹಾರಾಟ ಪರೀಕ್ಷೆಗೆ DRDO ವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವಾರು ಜನರು DRDO ಗೆ ಶುಭಾಶಯ ಕೋರಿದ್ದಾರೆ.


ಇದನ್ನೂ ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...