Homeಮುಖಪುಟಚೀನಾ ಪಡೆಗಳಿಂದಲೇ ಪ್ರಚೋದನೆ- ಗಾಳಿಯಲ್ಲಿ ಗುಂಡು ಹಾರಿಸಿದ್ದವು: ಭಾರತದ ಪ್ರತ್ಯುತ್ತರ

ಚೀನಾ ಪಡೆಗಳಿಂದಲೇ ಪ್ರಚೋದನೆ- ಗಾಳಿಯಲ್ಲಿ ಗುಂಡು ಹಾರಿಸಿದ್ದವು: ಭಾರತದ ಪ್ರತ್ಯುತ್ತರ

ಉನ್ನತ ಮಟ್ಟದಲ್ಲಿ ರಾಜತಾಂತ್ರಿಕ ಮಾತುಕತೆಗಳು ಮುಂದುವರೆಯುತ್ತಿರುವ ಸಮಯದಲ್ಲಿಯೂ ಕೂಡ ಚೀನಾದ ಸೈನ್ಯವು ನಿರ್ದಯವಾಗಿ ಒಪ್ಪಂದಗಳನ್ನು ಉಲ್ಲಂಘಿಸುತ್ತಿದೆ ಎಂದು ಭಾರತ ದೂರಿದೆ. 

- Advertisement -
- Advertisement -

ಪೂರ್ವ ಲಡಾಖ್‌ನ ಪಾಂಗೋಂಗ್ ಸರೋವರದ ದಕ್ಷಿಣ ದಂಡೆಯ ನೈಜ ನಿಯಂತ್ರಣ ರೇಖೆ ದಾಟಿ ಭಾರತೀಯ ಸೇನೆಯು ಸೋಮವಾರ ರಾತ್ರಿ ಎಚ್ಚರಿಕೆಯ ಫೈರಿಂಗ್ ನಡೆಸಿದೆ ಎಂಬ ಚೀನಾದ ಆರೋಪವನ್ನು ಭಾರತ ತಳ್ಳಿಹಾಕಿದೆ. ಭಾರತದ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ತರಲು ಚೀನಾ ಪ್ರಯತ್ನಿಸುತ್ತಿದೆ ಎಂದು ಭಾರತ ಆರೋಪಿಸಿದೆ.

ಉನ್ನತ ಮಟ್ಟದಲ್ಲಿ ರಾಜತಾಂತ್ರಿಕ ಮಾತುಕತೆಗಳು ಮುಂದುವರೆಯುತ್ತಿರುವ ಸಮಯದಲ್ಲಿಯೂ ಕೂಡ ಚೀನಾದ ಸೈನ್ಯವು ನಿರ್ದಯವಾಗಿ ಒಪ್ಪಂದಗಳನ್ನು ಉಲ್ಲಂಘಿಸುತ್ತಿದೆ ಎಂದು ಭಾರತ ದೂರಿದೆ.

ಸೆಪ್ಟಂಬರ್ 7 ರಾತ್ರಿ ಚೀನಾದ ಸೈನ್ಯವು ಭಾರತದ ಸ್ಥಾನಗಳನ್ನು ಮುಚ್ಚಲು ಬೆದರಿಕೆಯೊಡ್ಡಿದೆ. ಗಾಳಿಯಲ್ಲಿ ಗುಮಡು ಹಾರಿಸುವ ಮೂಲಕ ಪ್ರಚೋದನೆ ನೀಡಿದೆ. ಆದರೂ ಭಾರತೀಯ ಪಡೆಗಳು ಸಂಯಮದಿಂದ ನಡೆದುಕೊಂಡಿವೆ. ಪ್ರಬುದ್ಧ ಮತ್ತು ಜವಾಬ್ದಾರಿಯುವ ನಡವಳಿಕೆಯ ಮೂಲಕ ಗಡಿ ಸಂಘರ್ಷ ಉಲ್ಬಣಗೊಳ್ಳದಂತೆ ಭಾರತದ ಪಡೆಗಳು ಎಚ್ಚರಿಕೆ ವಹಿಸಿದೆ ಎಂದು ಸರ್ಕಾರ ಹೇಳಿದೆ.

ಇದಕ್ಕೂ ಮೊದಲು ಚೀನಾ ಲಿಬರೇಷನ್ ಆರ್ಮಿಯ ಪಶ್ಚಿಮ ಕಮಾಂಡರ್ ಕರ್ನಲ್ ಝಾಂಗ್ ಸುಯಿಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ನೈಜ ನಿಯಂತ್ರಣ ರೇಖೆ ದಾಟಿ ಭಾರತದ ಪಡೆಗಳಿಂದ ಏಕಾಏಕಿ ದಾಳಿ ನಡೆಸಲಾಯಿತು. ಇದನ್ನು ತಡೆಯಲು ಚೀನಾ ಸಹ ಪ್ರತಿ ದಾಳಿ ನಡೆಸಿದೆ. ಭಾರತದ ನಡೆಯು ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳುವ ಪರಸ್ಪರ ಒಪ್ಪಂದದ ಗಂಭೀರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದರು.

ಇದು ತೀವ್ರ ಗಂಭೀರ ನಡೆಯಾಗಿದೆ. ಈ ಕೂಡಲೇ ಭಾರತದ ಮುಂಚೂಣಿ ಪಡೆಗಳು ಹಿಂದೆ ಸರಿಯುವಂತೆ ನಿರ್ದೇಶನ ನೀಡಬೇಕೆಂದು ಭಾರತದ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಫೈರಿಂಗ್‌ಗೆ ಕಾರಣರಾದವರ ಮೇಲೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು. ಇದು ಮತ್ತೆ ಪುನಾರಾವರ್ತನೆ ಆಗದಂತೆ ತಡೆಯಬೇಕು ಎಂದು ಚೀನಾದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿತ್ತು.

ಮೇ ತಿಂಗಳಿನಲ್ಲಿ ಗಡಿ ಸಮಸ್ಯೆ ಉದ್ಬವವಾದಾಗಿನಿಂದ ಹಲವು ಮಾತುಕತೆಗಳು ನಡೆದರೂ ದೊಡ್ಡ ಮಟ್ಟದಲ್ಲಿ ಸೆಪ್ಟಂಬರ್ 5 ರಂದು ಮಾಸ್ಕೋದಲ್ಲಿ ನಡೆಸ ಶಾಂಘೈ ಸಹಕಾರ ಸಭೆಯಲ್ಲಿ ಭಾರತ ಚೀನಾ ಈ ಕುರಿತು ಮಾತುಕತೆ ನಡೆಸಿದ್ದವು. ಆದರೆ ಮೂರೇ ದಿನದಲ್ಲಿ ಮತ್ತೆ ಗಡಿ ಉದ್ವಿಗ್ನತೆ ಆರಂಭವಾಗಿದ್ದು ಆತಂಕ ಮೂಡಿಸಿದೆ.


ಇದನ್ನೂ ಓದಿ: ಪಾಂಗೋಂಗ್ ತ್ಸೋ ಎಲ್‌ಎಸಿ ಬಳಿ ಭಾರತದ ಪಡೆಗಳಿಂದ ಫೈರಿಂಗ್: ಚೀನಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...