Homeಮುಖಪುಟಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ‘ಮಹಾರಾಷ್ಟ್ರವನ್ನು ಅಪಖ್ಯಾತಿಗೆ ಗುರಿ ಮಾಡಿದ ವ್ಯಕ್ತಿಗೆ ವೈ-ಪ್ಲಸ್ ಭದ್ರತಾ ರಕ್ಷಣೆ ಒದಗಿಸಿರುವುದು ನೋವಿನ ಮತ್ತು ಆಶ್ಚರ್ಯಕರ ವಿಷಯ' ಎಂದಿದ್ದಾರೆ.

- Advertisement -
- Advertisement -

ನಟಿ ಕಂಗನಾ ರಾಣಾವತ್ ಟ್ವಿಟ್ಟರ್ ಪೋಸ್ಟ್‌ಗಳು, ವಿವಾದಿತ ಹೇಳಿಕೆಗಳು ಶಿವಸೇನೆ ಮತ್ತು ಬಿಜೆಪಿಗೆ ಕೆಸರೆರಚಾಟಕ್ಕೆ ಹೊಸ ಕಾರಣ ನೀಡಿದೆ. ಮುಂಬೈ ಪೊಲೀಸರ ಬಗ್ಗೆ ನಟಿ ಕಂಗನಾ ಇತ್ತಿಚಿನ ಹೇಳಿಕೆಗಳು, ಮುಂಬೈಯನ್ನು ಪಾಕ್ ಆಕ್ರಮಿತ ಪ್ರದೇಶಕ್ಕೆ ಹೋಲಿಸಿದ್ದು, ಬಿಜೆಪಿ ಮತ್ತು ಸೇನಾ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟವು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳಲು ಕಾರಣವಾಗಿವೆ.

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ನಟಿ ಕಂಗನಾ ಹೇಳಿಕೆ ವಿರುದ್ಧ ತಿರುಗಿಬಿದ್ದಿದ್ದರೇ, ಅದೇ ಬಿಜೆಪಿ ಆಕೆಯ ಸುರಕ್ಷತೆ ಬಗ್ಗೆ ಯೋಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

ಶಿವಸೇನೆ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಟಿ ಕಂಗನಾ ಪಿಒಕೆ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವು ಜನರು ತಮಗೆ ಜೀವನಾಧಾರವಾದ ನಗರದ ಬಗ್ಗೆ ಕೃತಜ್ಞತೆ ಹೊಂದಿರುವುದಿಲ್ಲ ಎಂದಿದ್ದಾರೆ.

PC: Times of India

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ-ಕಾಶ್ಮೀರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದರು. ತಾನು ‘ಮೂವಿ ಮಾಫಿಯಾ’ಗಿಂತ ಹೆಚ್ಚು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ ಮತ್ತು “ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ” ಬಗ್ಗೆ ಮಾತಾಡಿದ್ದರಿಂದ ನಾನು ಕೇಂದ್ರ ಅಥವಾ ಹಿಮಾಚಲ ಪ್ರದೇಶದಿಂದ ರಕ್ಷಣೆ ಪಡೆಯುವುದಾಗಿ ರಾಣಾವತ್ ಹೇಳಿದ್ದಾರೆ.

ವಿಶೇಷವೆಂದರೆ, ಕೇಂದ್ರವು ಸೋಮವಾರ ಕಂಗನಾಕ್ಕೆ ವೈ-ಪ್ಲಸ್ ಭದ್ರತೆಯನ್ನು ನೀಡಿತು. ಜೊತೆಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ‘ಕಂಗನಾಕ್ಕೆ ಖಂಡಿತವಾಗಿಯೂ ರಕ್ಷಣೆ ಬೇಕು’ ಎಂದಿದ್ದಾರೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಟಿಯ ಹೇಳಿಕೆ ವಿಚಾರದ ಕುರಿತು “ಕಂಗನಾ ಹೇಳಿದ್ದನ್ನು ಯಾರೂ ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸಿದ್ದೇವೆ. ಆದರೆ ಇದರರ್ಥ ನಾವು ಪರಾವಲಂಬಿ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ ಎಂದಲ್ಲ. ಆಕೆಯ ಹೇಳಿಕೆ ಒಪ್ಪದಿದ್ದೂ, ಪ್ರತಿಯೊಬ್ಬ ನಾಗರಿಕನನ್ನು ರಕ್ಷಿಸುವುದು ರಾಜ್ಯದ ಜವಾಬ್ದಾರಿಯಾಗಿದೆ. ಎಂದು ಫಡ್ನವಿಸ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ‘ಮಹಾರಾಷ್ಟ್ರವನ್ನು ಅಪಖ್ಯಾತಿಗೆ ಗುರಿ ಮಾಡಿದ ವ್ಯಕ್ತಿಗೆ ವೈ-ಪ್ಲಸ್ ಭದ್ರತಾ ರಕ್ಷಣೆ ಒದಗಿಸಿರುವುದು ನೋವಿನ ಮತ್ತು ಆಶ್ಚರ್ಯಕರ ವಿಷಯ’ ಎಂದಿದ್ದಾರೆ.

ಇನ್ನೊಬ್ಬ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ವಿಜಯ್ ವಾಡೆಟ್ಟಿವಾರ್, ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರವು ಅವರಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಮತ್ತು ಕಂಗನಾ ರಾಣಾವತ್ ವಿವಾದಗಳು ಬಿಹಾರ ಚುನಾವಣೆ ನಡೆಯುವವರೆಗೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಮಾತನಾಡಿ, “ಮೋದಿ ಸರ್ಕಾರವು ತನ್ನ ಬೆಂಬಲಿಗರನ್ನು ಮತ್ತು ಜನರನ್ನು ತಮ್ಮ ಅಜೆಂಡಾ ಮುಂದುವರಿಸುವುದಕ್ಕಾಗಿ ಚೆನ್ನಾಗಿ ನೋಡಿಕೊಳ್ಳುತ್ತದೆ” ಎಂದು ಹೇಳಿದರು. ಜೊತೆಗೆ “ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ” ಇರುವ ಬಗ್ಗೆ ಕಂಗನಾ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಸಾವಂತ್ ಒತ್ತಾಯಿಸಿದ್ದಾರೆ.

ಒಟ್ಟಾರೆ ಬಿಜೆಪಿ ಸರ್ಕಾರ ರಾಣಾವತ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಲೇ ಆಕೆಗೆ ಭದ್ರತೆ ಒದಗಿಸಿದೆ. ಆಕೆಗೆ ಬೆಂಬಲವಾಗಿ ನಿಂತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಶಿವಸೇನೆ, ಕಾಂಗ್ರೆಸ್ ಮಾತ್ರ ಆಕೆಯ ಹೇಳಿಕೆ ವಿರುದ್ಧ ಕೆಂಡಾಮಂಡಲವಾಗಿದ್ದು, ಒಬ್ಬರಲ್ಲ ಒಬ್ಬರೂ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಮಹಾರಾಷ್ಟರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ವತಃ ಹೇಳಿಕೆ ನೀಡಿ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಇನ್ನೊಂದೆಡೆ ಬಿಹಾರದ ಚುನಾವಣೆಗೆ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಬಿಜೆಪಿಯು ತನ್ನ ಕರಪತ್ರಗಳಲ್ಲಿ ಸುಶಾಂತ್ ಫೋಟೊ ಜೊತೆಗೆ “#JusticeForSushanth” ಎಂದು ಬರೆದಿರುವ ಪೋಸ್ಟರ್, ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದೆ.

ನಟನ ಸಾವನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಿಲುವನ್ನು ಖಂಡಿಸಿ ಆಲ್ ಇಂಡಿಯಾ ಪ್ರೊಫೆಷನಲ್ ಕಾಂಗ್ರೆಸ್ ಸೌತ್ ಮುಂಬೈ ನಿನ್ನೆ ಟ್ವೀಟ್ ಮಾಡಿದೆ. ಜೊತೆಗೆ ಸಾರ್ವಜನಿಕರು ಸಹ ಛೀಮಾರಿ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೇ, ಏನೇ ಇದ್ದರೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಮತ್ತು ಕಂಗನಾ ರಾಣಾವತ್ ವಿವಾದಗಳು ಬಿಹಾರ ಚುನಾವಣೆ ನಡೆಯುವವರೆಗೂ ಮುಂದುವರಿಯಲಿದೆ ಎಂಬ ಸಚಿವ ವಿಜಯ್ ವಾಡೆಟ್ಟಿವಾರ್ ಮಾತು ನಿಜವಾಗುವುದರಲ್ಲಿ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...