Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...