Homeಮುಖಪುಟಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತರ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

- Advertisement -
- Advertisement -

ಮತ್ತೆ ಸೆಪ್ಟೆಂಬರ್‌ 14 ಹಿಂದಿ ದಿನ ಬರುತ್ತಿದೆ. ಭಾರತ ಹಲವು ರಾಜ್ಯಗಳ ಒಕ್ಕೂಟ ವ್ಯವಸ್ಥೆಯಾಗಿದ್ದುಕೊಂಡು, ಇಲ್ಲಿನ ಯಾವುದೇ ಭಾಷೆಗಳಿಗೆ ಕೊಡದಷ್ಟು ಮಹತ್ವವನ್ನು ಹಿಂದಿಗೆ ಕೊಡುತ್ತಿದೆ. ಇದುವರೆಗೆ ಬಂದ ಎಲ್ಲಾ ಆಡಳಿತಗಳು ಕೂಡಾ ಹಿಂದಿಯನ್ನು ಪೊಷಿಸುತ್ತಲೇ ಬಂದಿದೆ. ಈಗಿನ ಸರ್ಕಾರವಂತೂ ಹಿಂದಿಯಿಂದಲೇ ಭಾರತದ ಅಭಿವೃದ್ದಿ ಸಾಧ್ಯ ಎಂದು ಸುಳ್ಳನ್ನು ಹೇಳುತ್ತಿದೆ. ಇದಕ್ಕೆ ಹಲವಾರು ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಎಂದಿನಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಅಲ್ಲಿನ ಕಲಾವಿದರು ಸಹ ಹಿಂದಿ ಹೇರಿಕೆ ವಿರುದ್ದ ತೀವ್ರ ಧ್ವನಿ ಎತ್ತುತ್ತಲೇ ಇದ್ದಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಕರೆಯುವುದು ಹಾಗೂ ಇತರ ಭಾಷೆಗಳನ್ನು ಪ್ರಾದೇಶಿಕ ಭಾಷೆ ಎಂದು ಕರೆಯುವುದರಲ್ಲೇ ಒಂದು ರಾಜಕೀಯ ಅಡಗಿದೆ. ಬಹುಮುಖ್ಯವಾಗಿ ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದ, ಅದೂ ಅಲ್ಲದೆ ಪಕ್ಕಾ ಭಾರತೀಯವಲ್ಲದ ಭಾಷೆಯನ್ನು ರಾಷ್ಟ್ರ ಭಾಷೆ ಎಂದು ಕರೆಯುವುದು ಕೂಡಾ ವ್ಯಂಗ್ಯವೆ ಆಗಿದೆ. ಬಹುಸಂಸ್ಕೃತಿಯ ದೇಶವನ್ನು ಏಕ ಭಾಷೆಯ ದೇಶವನ್ನಾಗಿ ಮಾಡಲು ಹೊರಟಿರವುದು ಮೂರ್ಖತನವಲ್ಲದೆ ಬೇರೇನು ಎಂಬ ಪ್ರಶ್ನೆ ಭಾರತೀಯರದು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಹಕ ವ್ಯವಹಾರದಲ್ಲಿ ಕನ್ನಡ ಭಾಷೆಯಾಗಿ ಹೋರಾಡುತ್ತಿರುವ ಅರುಣ್ ಜಾವಗಲ್, “ಭಾಷಾ ವೈವಿದ್ಯತೆ ಇರುವ ದೇಶದಲ್ಲಿ ಕೇವಲ ಒಂದು ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ ಎಂದರೆ ಉಳಿದ ಭಾಷೆಗೆ ಅನ್ಯಾಯ ಮಾಡಿದ ಹಾಗೆ ಆಗುತ್ತದೆ. ಹಾಗಾಗಿ ನಾವು ಹಿಂದಿ ದಿನವನ್ನು ಎರಡು ರೀತಿಯಲ್ಲಿ ವಿರೋಧಿಸುತ್ತೇವೆ. ಮೊದಲನೆಯದಾಗಿ ವಿವಿದ ಭಾಷೆಗಳಿರುವ ದೇಶದಲ್ಲಿ ಒಂದು ಭಾಷೆಯನ್ನು ಹೇರುವುದರ ವಿರುದ್ಧ ಹಾಗೂ ಎರಡನೆಯದಾಗಿ ಬೇರೆ ಯಾವುದೇ ಭಾಷೆಗಿರದ ಹೆಚ್ಚುಗಾರಿಕೆಯನ್ನು ಹಿಂದಿಗೆ ನೀಡುವುದನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

“1930 ರ ದಶಕದಲ್ಲೆ ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ ಭಾಷಾವಾರು ರಾಜ್ಯಗಳ ಸ್ಥಾಪನೆಗೆ ತಾತ್ವಿಕವಾಗಿ ಒಪ್ಪಿಕೊಂಡಿದ್ದರು. ಸ್ವಾತಂತ್ರ್ಯ ಬಂದಮೇಲೆ ಅವರುಗಳು ಕೊಟ್ಟಿದ್ದ ಮಾತನ್ನು ಜಾರಿಗೆ ತರುವುದು ಕಾಂಗ್ರೆಸ್‌ನ ಜವಾಬ್ದಾರಿ ಕೂಡ ಆಗಿತ್ತು. ಆದರೆ ಕಾಂಗ್ರೆಸ್ ನ ಹಲವಾರು ನಾಯಕರು ಮತ್ತು ಅಂಬೇಡ್ಕರ್‌ರಂತಹವರಿಗೆ ಭಾಷಾವಾರು ರಾಜ್ಯಗಳ ಸ್ಥಾಪನೆ ಮಾಡಿದರೆ ಭಾರತೀಯ ರಾಷ್ಟ್ರೀಯತೆಗೆ ಧಕ್ಕೆ ಬರುತ್ತದೆ, ಜೊತೆಗೆ ಒಕ್ಕೂಟ ವ್ಯವಸ್ಥೆಯ ಬುನಾದಿಯೇ ದುರ್ಬಲ ಆಗಬಹುದು ಅನ್ನುವ ಆತಂಕ ಇತ್ತು. ಆದರೆ ದೇಶಾದ್ಯಂತ ಇದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸ್ಥಳೀಯ ಜನರ ಇಚ್ಚೆ ಏನಿತ್ತು ಅನ್ನುವುದು ಗೊತ್ತಿದ್ದರಿಂದ ಕಾಂಗ್ರೆಸ್ ಸರ್ಕಾರದೊಳಗೆ ಇದ್ದುಕೊಂಡು ಭಾರತವನ್ನು ಭಾಷಾವಾರು ರಾಜ್ಯಗಳ ಒಂದು ಒಕ್ಕೂಟ ವ್ಯವಸ್ಥೆಯನ್ನಾಗಿ ರೂಪಿಸಿದರು.” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

“ಅಂದು ನೆಹರೂ ಭಾಷಾವಾರು ರಾಜ್ಯಗಳ ಸ್ಥಾಪನೆಯನ್ನು ಮಾಡದೇ ಇದ್ದಿದ್ದರೆ ಕಾಂಗ್ರೆಸ್ ಪಕ್ಷ ಒಡೆದು ಹೋಗುತ್ತಿತ್ತು, ಜೊತೆಗೆ ಒಕ್ಕೂಟ ವ್ಯವಸ್ಥೆ ಕೂಡ ಒಡೆದು ಹೋಗುತ್ತಿತ್ತು. ಆದರೆ ನೆಹರೂ ಇದಕ್ಕೆ ಅವಕಾಶ ಕೊಡದೇ ಜನರ ಆಶೋತ್ತರಗಳನ್ನು ಪೂರೈಸುತ್ತಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸುವುದರ ಜೊತೆಗೆ ಇನ್ನೂ ಗಟ್ಟಿ ಮಾಡಿದ್ದಾರೆ. ಈಗ ಹಿಂದಿ ಹೇರಿಕೆ ಮೂಲಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬಾರದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಪ್ರಚಾರ ಮಾಡಲು ಪ್ರತಿ ವರ್ಷ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತದೆ. ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮೃತ ಭಾಷೆ ಎಂದು ಕರೆಯಲ್ಪಡುವ ಸಂಸ್ಕೃತದ ಪ್ರಚಾರಕ್ಕಾಗಿ 643.84 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೆ ಇತರ ಐದು ಶಾಸ್ತ್ರೀಯ ಭಾರತೀಯ ಭಾಷೆಗಳಾದ ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾಗಳ ಅಭಿವೃದ್ದಿಗೆ ಕೇವಲ 29 ಕೋಟಿ ರೂ.ಗಳನ್ನಷ್ಟೆ ಖರ್ಚು ಮಾಡಿದೆ.

PC: Kanimozhi@twitter

2014-19 ರಲ್ಲಿ ಕೇಂದ್ರ ಸರ್ಕಾರ ಹಿಂದಿಯನ್ನು ವಿಶ್ವದಾದ್ಯಂತ ಹರಡಲು 43.48 ಕೋಟಿ ರೂ. ಖರ್ಚು ಮಾಡಿದೆ. ಹಿಂದಿಯನ್ನು ವಿಶ್ವದಾದ್ಯಂತ ಹರಡಲು ಖರ್ಚು ಮಾಡುವಾಗ ಭಾರತದ ಇತರ ಭಾಷೆಗಳ ಅಭಿವೃದ್ದಿಗೆ ಏಕೆ ಮುಂದಾಗುವುದಿಲ್ಲ? ಒಟ್ಟಿನಲ್ಲಿ ಭಾರತ ಎಂದರೆ ಹಿಂದಿ ಎಂದು ವಿಶ್ವಕ್ಕೆ ಹೇಳಲು ಕೇಂದ್ರ ಸರ್ಕಾರ ಹೊರಟಿದೆ.

ಕೇಂದ್ರ ಸರ್ಕಾರದ ಭಾಷಾ ದಬ್ಬಾಳಿಕೆ ಎಷ್ಟಿದೆ ಎಂದರೆ, ಹೊಸ ಕರಡು ಪರಿಸರ ಪರಿಣಾಮಗಳ ಅಧ್ಯಯನ (ಇಐಎ) ಅಧಿಸೂಚನೆ- 2020 ಅನ್ನುಭಾರತದ ಇತರ ಭಾಷೆಗಳಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ಕೊಡುತ್ತಿರುವ ಕಾರಣ ಎಷ್ಟು ಹಾಸ್ಯಾಸ್ಪದವೆಂದರೆ ಭಾರತದ ಇತರ ಭಾಷೆಗಳಲ್ಲಿ ಅದಕ್ಕೆ ಪದಗಳು ಸಿಗುತ್ತಿಲ್ಲ ಎಂಬುದಾಗಿದೆ.

“ಆಡಳಿತದ ಅಗತ್ಯತೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಅಂಗೀಕರಿಸಲಾಗುತ್ತಿದ್ದ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ಇತ್ಯಾದಿಗಳ ’ಸ್ಥಳೀಯ ಭಾಷೆ’ಗಳ ಅನುವಾದವನ್ನು ಕೋರಿ ಮುಂದಿನ ದಿನಗಳಲ್ಲಿ ಇದೇ ರೀತಿಯ ಪ್ರಕರಣಗಳನ್ನು ದಾಖಲಿಸಲು ಪ್ರಾರಂಭವಾಗುತ್ತದೆ” ಎಂದು ಕೇಂದ್ರ ಸರ್ಕಾರ ಕೋರ್ಟ್‌‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ಹಿಂದಿ ಹೇರಿಕೆಯು ಬ್ರಾಹ್ಮಣರಿಗೆ ಕುರಾನ್ ಕೊಟ್ಟಂತೆ’: ಪತ್ರಬರೆದ IRS ಅಧಿಕಾರಿ

ಅಷ್ಟಕ್ಕೂ ಸರ್ಕಾರ ಅಂಗೀಕರಿಸುವ ವಿವಿಧ ನಿರ್ಣಯಗಳು, ಸಾಮಾನ್ಯ ಆದೇಶಗಳು, ನಿಯಮಗಳು, ಅಧಿಸೂಚನೆಗಳು ನಮ್ಮ ಭಾಷೆಗಳಲ್ಲಿ ಕೇಳಿದರೆ ತಪ್ಪೇನು? ಅದು ನಮ್ಮ ಹಕ್ಕಲ್ಲವೆ ? ನಾವು ಆಯ್ಕೆ ಮಾಡಿರುವ ಸರ್ಕಾರ ನಮ್ಮ ಜೊತೆ ನಮಗೆ ಗೊತ್ತಿರುವ ಭಾಷೆಯಲ್ಲಿ ವ್ಯವಹರಿಸುವುದರಲ್ಲಿ ತಪ್ಪೇನಿದೆ. ಅದು ಅವರ ಕರ್ತವ್ಯವಲ್ಲವೆ?

ಒಟ್ಟಿನಲ್ಲಿ ಹಿಂದಿ ಭಾಷೆಗೆ ನಮ್ಮ ವಿರೋಧ ಇರಬಾರದು. ಒಂದು ಭಾಷೆಯಾಗಿ ಹಿಂದಿ ಬೇಕಾದವರು ಕಲಿಯಲಿ, ಅದರಲ್ಲಿ ತಪ್ಪೇನಿಲ್ಲ. ಬಲವಂತವಾಗಿ ಕಲಿಯಲೇ ಬೇಕೆನ್ನುವುದು ಅಥವಾ ಹಿಂದಿಯೇರ ರಾಜ್ಯದಲ್ಲಿರುವ ಭಾಷೆಯನ್ನು ಕಡೆಗಣಿಸಿ ಹಿಂದಿಗೆ ಪ್ರಾಧಾನ್ಯತೆಯನ್ನು ಬಿತ್ತುವುದು ಅನ್ಯಾಯವಲ್ಲದೆ ಇನ್ನೇನು? ಈ ಹಿನ್ನಲೆಯಲ್ಲಿ ಮುಂದಿನ ವಾರ ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸುವ ’ಹಿಂದಿ ದಿನ’ವನ್ನು ನಾವು ವಿರೋಧಿಸಲೇ ಬೇಕಿದೆ.

ಒಂದು ಒಕ್ಕೂಟ ಸರ್ಕಾರವಾಗಿ ಹೆಚ್ಚಿನ ಜನರು ಬಳಸುತ್ತಾರೆ ಎಂಬ ಕಾರಣಕ್ಕೆ ಅದನ್ನು ಮೆರೆಸುವುದು ಅಥವಾ ಅದಕ್ಕೆ ಪ್ರಾಧಾನ್ಯತೆ ನೀಡುವುದನ್ನು ನಾವು ಪದೇ ಪದೇ ಪ್ರಶ್ನಿಸಲೇಬೇಕು. ಪ್ರಜಾಪ್ರಭುತ್ವವೆಂದರೆ ಬಹುಸಂಖ್ಯಾತವಾದ ಅಲ್ಲ ಅಲ್ಪಸಂಖ್ಯಾತ ಧ್ವನಿಯನ್ನು ಸಹ ಕಿವಿಗೊಟ್ಟು ಆಲಿಸುವುದಾಗಿದೆ.

ಇದನ್ನೂ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...