Homeಚಳವಳಿಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಕುರಿತು ಮೋದಿ ನಾಯಕತ್ವದ ವಿರುದ್ಧ ಯುವಸಮೂಹ ತಿರುಗಿಬಿದ್ದಿದೆ. ದೇಶಾದ್ಯಂತ ತಟ್ಟೆ, ಲೋಟಗಳನ್ನು ಬಡಿಯುತ್ತಾ ನಿರುದ್ಯೋಗದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಹೆಚ್ಚುತ್ತಿದ್ದ ನಿರುದ್ಯೋಗ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಗರಿಷ್ಟ ಮಟ್ಟ ತಲುಪಿದೆ. ಆದರೆ ಸರ್ಕಾರ ಯಾವುದೇ ರೀತಿಯಲ್ಲೂ ಯುವಜನರ ಸಂಕಷ್ಟಗಳಿಗೆ ಸ್ಪಂದಿಸದಿರುವುದು ಅವರು ರೊಚ್ಚಿಗೇಳುವಂತೆ ಪ್ರೇರೇಪಿಸಿದೆ ಎನ್ನಲಾಗುತ್ತಿದೆ.

ಇಷ್ಟು ದಿನ ರಸ್ತೆಗಳಲ್ಲಿ, ಕಚೇರಿಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ನಡೆಯುತ್ತಿದ್ದ ಪ್ರತಿಭಟನೆ ಈಗ ವಿಭಿನ್ನ ಸ್ವರೂಪ ಪಡೆದುಕೊಂಡಿದೆ. ದೇಶಾದ್ಯಂತ ವಿದ್ಯಾರ್ಥಿಗಳು ಒಂದಾಗಿ ತಟ್ಟೆ, ಲೋಟಗಳನ್ನು ಬಡಿಯುತ್ತಾ, ಹಾಡುಗಳನ್ನು ಹಾಡುತ್ತಾ ರಸ್ತೆಗಳಲ್ಲಿ ಸಾಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಓಡಿಸಲು ತಟ್ಟೆ ಬಡಿಯುವ ಸಲಹೆ ನೀಡಿದ್ದನೇ ಇವರು ನಿರುದ್ಯೋಗ ಓಡಿಸಲು ತಟ್ಟೆ, ಲೋಟಗಳನ್ನು ಬಡಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ದೇಶದ ಜಿಡಿಪಿ ಅತ್ಯಂತ ಕೆಳಮಟ್ಟದಲ್ಲಿದೆ, ಲಾಕ್‌ಡೌನ್ ಸಮಯದಲ್ಲಿ ಕೋಟ್ಯಾಂತರ ಜನರ ಉದ್ಯೋಗಗಳು ಕಳೆದುಹೋಗಿವೆ, ಕಳೆದ 45 ವರ್ಷಗಳಲ್ಲಿ ನಿರುದ್ಯೋಗವು ಅತ್ಯಧಿಕವಾಗಿದೆ, ಇದಕ್ಕೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಸ್ಪಷ್ಟವಾಗಿ ಕಾರಣವಾಗಿವೆ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ: ಯೂತ್ ಕಾಂಗ್ರೆಸ್ ಅಭಿಯಾನ

ಯುವಜನತೆ ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ವಾಯಸೇನೆಯ ನಿವೃತ್ತ ಪೈಲಟ್ ರಾಜೀವ್ ತ್ಯಾಗಿ ಅವರು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಹಂಚಿಕೊಂಡಿದ್ದು, ಆ ಪೋಸ್ಟ್‌ ಅನ್ನು 300ಕ್ಕೂ ಅಧಿಕ ಮಂದಿ ಹಂಚಿಕೊಂಡಿದ್ದಾರೆ.

Young citizens on 5th at 5 PM for 5 minutes, beating thaali for jobs… 🙂

Posted by Rajiv Tyagi on Sunday, September 6, 2020

ಇತ್ತ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಖಾಸಗೀಕರಣದ ವಿರುದ್ಧ ಲಂಕಾ ಗೇಟ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನಿರುದ್ಯೋಗ ಹೆಚ್ಚಾಗಲೂ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ಚಪ್ಪಾಳೆ ತಟ್ಟಿ, ತಟ್ಟೆಗಳನ್ನು ಬಡಿಯುವ ಮೂಲಕ ಪ್ರತಿರೋಧ ದಾಖಲಿಸಿದ್ದಾರೆ.

ಸಾಂಕ್ರಾಮಿಕ ರೋಗ ಮತ್ತು ನಿರುದ್ಯೋಗದಿಂದ ದೇಶದ ಕೋಟ್ಯಂತರ ಬಡಜನರು ತೊಂದರೆಗೀಡಾದಾಗ, ಕೇಂದ್ರ ಸರ್ಕಾರವು ತನ್ನ ಸಾರ್ವಜನಿಕ ಆಸ್ತಿಯನ್ನು ದೇಶದ ಕೆಲವು ದೊಡ್ಡ ಕೈಗಾರಿಕೋದ್ಯಮಿಗಳಿಗೆ ನಿರಂತರವಾಗಿ ಮಾರಾಟ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

PC: Joint Action Committee – BHU/ FACEBOOK

ಈ ಕುರಿತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ಅವರ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿಎಸ್‌ಟಿ, ಮುಂದಾಲೋಚನೆಯಿಲ್ಲದ ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಇದನ್ನು ಒಪ್ಪಿಕೊಂಡು ಸರಿಪಡಿಸಬೇಕಾದ ಸರ್ಕಾರ ಮತ್ತೆ ಜಾತಿ, ಧರ್ಮಗಳ ಹೆಸರಿನಲ್ಲಿ ಯುವ ಜನರನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿದೆ. ಆದರೆ ಯುವಜನರು ಇದರಿಂದ ರೋಸಿಹೋಗಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಮೋದಿ ವಿಡಿಯೋಗಳಿಗೆ ಡಿಸ್‌ಲೈಕ್ ಒತ್ತುತ್ತಿದ್ದಾರೆ” ಎಂದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳದೇ, ವೈದ್ಯರು ಮತ್ತು ಇತರರಿಗೆ ಸಹಾಯ ಮಾಡದೇ ಕೇವಲ ತಟ್ಟೆ ಲೋಟ ಬಡಿಯಿರಿ ಎಂದರು ಪ್ರಧಾನಿ. ಆದರೆ ಕೊರೊನಾ ಜಾಸ್ತಿ ಆಗಿದೆ. ಅದೇ ರೀತಿ ನಾವು ತಟ್ಟೆ ಲೋಟ ಬಡಿಯುವುದರಿಂದ ಉದ್ಯೋಗ ಜಾಸ್ತಿಯಾಗುವುದಿಲ್ಲ ಬದಲಿಗೆ ಸರ್ಕಾರ ಇದರಿಂದ ಎಚ್ಚೆತ್ತುಕೊಳ್ಳಬೇಕು. ಆದರೆ ಅವೈಜ್ಞಾನಿಕವಾಗಿ ಚಿಂತಿಸುವ ಸರ್ಕಾರಕ್ಕೆ ಯುವಜನರು ತಟ್ಟೆ ಲೋಟ ಬಡಿಯುವ ಮೂಲಕ ಅವೈಜ್ಞಾನಿಕ ರೀತಿಯಲ್ಲಿ ಎದುರೇಟು ನೀಡುತ್ತಿದ್ದಾರೆ. ಈಗಲಾದರು ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು ಸರೋವರ್ ತಿಳಿಸಿದ್ದಾರೆ.

ಯುವಸಮೂಹ ಉದ್ಯೋಗಕ್ಕಾಗಿ ಪಟ್ಟುಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಸಮರ ಸಾರಿದ್ದಾರೆ. ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

ಯುವ ಸಮೂಹದ ಈ ಪ್ರಯತ್ನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಿನ ದಿನಕ್ಕೂ ನಿರುದ್ಯೋಗ ಹೆಚ್ಚಾಗುತ್ತಿದೆ. ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿಭಟನೆ, ವಿಭಿನ್ನ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡರೂ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...