Homeಚಳವಳಿಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಪ್ರಧಾನಿ ವಿರುದ್ಧ ಹೆಚ್ಚಿದ ಆಕ್ರೋಶ: ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿಯುತ್ತಿರುವ ಯುವಸಮೂಹ!

ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಕುರಿತು ಮೋದಿ ನಾಯಕತ್ವದ ವಿರುದ್ಧ ಯುವಸಮೂಹ ತಿರುಗಿಬಿದ್ದಿದೆ. ದೇಶಾದ್ಯಂತ ತಟ್ಟೆ, ಲೋಟಗಳನ್ನು ಬಡಿಯುತ್ತಾ ನಿರುದ್ಯೋಗದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲೇ ಹೆಚ್ಚುತ್ತಿದ್ದ ನಿರುದ್ಯೋಗ ಕೊರೊನಾ ಲಾಕ್‌ಡೌನ್‌ ಕಾರಣಕ್ಕೆ ಗರಿಷ್ಟ ಮಟ್ಟ ತಲುಪಿದೆ. ಆದರೆ ಸರ್ಕಾರ ಯಾವುದೇ ರೀತಿಯಲ್ಲೂ ಯುವಜನರ ಸಂಕಷ್ಟಗಳಿಗೆ ಸ್ಪಂದಿಸದಿರುವುದು ಅವರು ರೊಚ್ಚಿಗೇಳುವಂತೆ ಪ್ರೇರೇಪಿಸಿದೆ ಎನ್ನಲಾಗುತ್ತಿದೆ.

ಇಷ್ಟು ದಿನ ರಸ್ತೆಗಳಲ್ಲಿ, ಕಚೇರಿಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ನಡೆಯುತ್ತಿದ್ದ ಪ್ರತಿಭಟನೆ ಈಗ ವಿಭಿನ್ನ ಸ್ವರೂಪ ಪಡೆದುಕೊಂಡಿದೆ. ದೇಶಾದ್ಯಂತ ವಿದ್ಯಾರ್ಥಿಗಳು ಒಂದಾಗಿ ತಟ್ಟೆ, ಲೋಟಗಳನ್ನು ಬಡಿಯುತ್ತಾ, ಹಾಡುಗಳನ್ನು ಹಾಡುತ್ತಾ ರಸ್ತೆಗಳಲ್ಲಿ ಸಾಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ಓಡಿಸಲು ತಟ್ಟೆ ಬಡಿಯುವ ಸಲಹೆ ನೀಡಿದ್ದನೇ ಇವರು ನಿರುದ್ಯೋಗ ಓಡಿಸಲು ತಟ್ಟೆ, ಲೋಟಗಳನ್ನು ಬಡಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

ದೇಶದ ಜಿಡಿಪಿ ಅತ್ಯಂತ ಕೆಳಮಟ್ಟದಲ್ಲಿದೆ, ಲಾಕ್‌ಡೌನ್ ಸಮಯದಲ್ಲಿ ಕೋಟ್ಯಾಂತರ ಜನರ ಉದ್ಯೋಗಗಳು ಕಳೆದುಹೋಗಿವೆ, ಕಳೆದ 45 ವರ್ಷಗಳಲ್ಲಿ ನಿರುದ್ಯೋಗವು ಅತ್ಯಧಿಕವಾಗಿದೆ, ಇದಕ್ಕೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಸ್ಪಷ್ಟವಾಗಿ ಕಾರಣವಾಗಿವೆ ಎಂದು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉದ್ಯೋಗ ನೀಡಿ ಆತ್ಮಹತ್ಯೆ ನಿಲ್ಲಿಸಿ: ಯೂತ್ ಕಾಂಗ್ರೆಸ್ ಅಭಿಯಾನ

ಯುವಜನತೆ ಉದ್ಯೋಗಕ್ಕಾಗಿ ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ವಾಯಸೇನೆಯ ನಿವೃತ್ತ ಪೈಲಟ್ ರಾಜೀವ್ ತ್ಯಾಗಿ ಅವರು ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಹಂಚಿಕೊಂಡಿದ್ದು, ಆ ಪೋಸ್ಟ್‌ ಅನ್ನು 300ಕ್ಕೂ ಅಧಿಕ ಮಂದಿ ಹಂಚಿಕೊಂಡಿದ್ದಾರೆ.

Young citizens on 5th at 5 PM for 5 minutes, beating thaali for jobs… 🙂

Posted by Rajiv Tyagi on Sunday, September 6, 2020

ಇತ್ತ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಖಾಸಗೀಕರಣದ ವಿರುದ್ಧ ಲಂಕಾ ಗೇಟ್‌ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನಿರುದ್ಯೋಗ ಹೆಚ್ಚಾಗಲೂ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳೇ ಕಾರಣ ಎಂದು ಚಪ್ಪಾಳೆ ತಟ್ಟಿ, ತಟ್ಟೆಗಳನ್ನು ಬಡಿಯುವ ಮೂಲಕ ಪ್ರತಿರೋಧ ದಾಖಲಿಸಿದ್ದಾರೆ.

ಸಾಂಕ್ರಾಮಿಕ ರೋಗ ಮತ್ತು ನಿರುದ್ಯೋಗದಿಂದ ದೇಶದ ಕೋಟ್ಯಂತರ ಬಡಜನರು ತೊಂದರೆಗೀಡಾದಾಗ, ಕೇಂದ್ರ ಸರ್ಕಾರವು ತನ್ನ ಸಾರ್ವಜನಿಕ ಆಸ್ತಿಯನ್ನು ದೇಶದ ಕೆಲವು ದೊಡ್ಡ ಕೈಗಾರಿಕೋದ್ಯಮಿಗಳಿಗೆ ನಿರಂತರವಾಗಿ ಮಾರಾಟ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

PC: Joint Action Committee – BHU/ FACEBOOK

ಈ ಕುರಿತು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆಯವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಆದರೆ ಅವರ ನೋಟು ರದ್ಧತಿ ಮತ್ತು ಅವೈಜ್ಞಾನಿಕ ಜಿಎಸ್‌ಟಿ, ಮುಂದಾಲೋಚನೆಯಿಲ್ಲದ ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಇದನ್ನು ಒಪ್ಪಿಕೊಂಡು ಸರಿಪಡಿಸಬೇಕಾದ ಸರ್ಕಾರ ಮತ್ತೆ ಜಾತಿ, ಧರ್ಮಗಳ ಹೆಸರಿನಲ್ಲಿ ಯುವ ಜನರನ್ನು ದಿಕ್ಕುತಪ್ಪಿಸಲು ಯತ್ನಿಸುತ್ತಿದೆ. ಆದರೆ ಯುವಜನರು ಇದರಿಂದ ರೋಸಿಹೋಗಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಮೋದಿ ವಿಡಿಯೋಗಳಿಗೆ ಡಿಸ್‌ಲೈಕ್ ಒತ್ತುತ್ತಿದ್ದಾರೆ” ಎಂದರು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳದೇ, ವೈದ್ಯರು ಮತ್ತು ಇತರರಿಗೆ ಸಹಾಯ ಮಾಡದೇ ಕೇವಲ ತಟ್ಟೆ ಲೋಟ ಬಡಿಯಿರಿ ಎಂದರು ಪ್ರಧಾನಿ. ಆದರೆ ಕೊರೊನಾ ಜಾಸ್ತಿ ಆಗಿದೆ. ಅದೇ ರೀತಿ ನಾವು ತಟ್ಟೆ ಲೋಟ ಬಡಿಯುವುದರಿಂದ ಉದ್ಯೋಗ ಜಾಸ್ತಿಯಾಗುವುದಿಲ್ಲ ಬದಲಿಗೆ ಸರ್ಕಾರ ಇದರಿಂದ ಎಚ್ಚೆತ್ತುಕೊಳ್ಳಬೇಕು. ಆದರೆ ಅವೈಜ್ಞಾನಿಕವಾಗಿ ಚಿಂತಿಸುವ ಸರ್ಕಾರಕ್ಕೆ ಯುವಜನರು ತಟ್ಟೆ ಲೋಟ ಬಡಿಯುವ ಮೂಲಕ ಅವೈಜ್ಞಾನಿಕ ರೀತಿಯಲ್ಲಿ ಎದುರೇಟು ನೀಡುತ್ತಿದ್ದಾರೆ. ಈಗಲಾದರು ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಭಾರೀ ಅನಾಹುತವನ್ನು ಎದುರಿಸಬೇಕಾಗುತ್ತದೆ ಎಂದು ಸರೋವರ್ ತಿಳಿಸಿದ್ದಾರೆ.

ಯುವಸಮೂಹ ಉದ್ಯೋಗಕ್ಕಾಗಿ ಪಟ್ಟುಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಸಮರ ಸಾರಿದ್ದಾರೆ. ಜಾಲತಾಣಗಳಲ್ಲಿನ ಪ್ರಧಾನಿ ವಿಡಿಯೋಗಳನ್ನು ಡಿಸ್‌ಲೈಕ್ ಮಾಡುವ ಮೂಲಕ ಉದ್ಯೋಗ ನೀಡಿ ಎಂದು ಕೇಳುತ್ತಿದ್ದಾರೆ. ಪ್ರಧಾನಿಯವರ ಪ್ರತಿ ವಿಡಿಯೋಗಳ ಕಾಮೆಂಟ್ ಸೆಕ್ಷನ್‌ನಲ್ಲಿ ರೋಜ್‌ಗಾರ್ ದೋ, ಉದ್ಯೋಗ ನೀಡಿ ಎಂಬ ಕಾಮೆಂಟ್‌ಗಳು ಸಾಮಾನ್ಯವಾಗಿಬಿಟ್ಟಿವೆ.

ಯುವ ಸಮೂಹದ ಈ ಪ್ರಯತ್ನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಿನ ದಿನಕ್ಕೂ ನಿರುದ್ಯೋಗ ಹೆಚ್ಚಾಗುತ್ತಿದೆ. ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿಭಟನೆ, ವಿಭಿನ್ನ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡರೂ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಜಿಡಿಪಿ ಕುಸಿತ: “ಮೋದಿನಾಮಿಕ್ಸ್” ವಿಫಲವಾಗಿದೆ: ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...