Homeಮುಖಪುಟ’ಮೂಕಜ್ಜಿಯ ಕನಸುಗಳು’ ಸಿನಿಮಾ 'FUC'ಯಲ್ಲಿ ಮುಂದಿನ ತಿಂಗಳು ಮರು ಬಿಡುಗಡೆ

’ಮೂಕಜ್ಜಿಯ ಕನಸುಗಳು’ ಸಿನಿಮಾ ‘FUC’ಯಲ್ಲಿ ಮುಂದಿನ ತಿಂಗಳು ಮರು ಬಿಡುಗಡೆ

'FUC' ಸಿನಿಮಾ ಬಗೆಗಿನ ಜ್ಞಾನ, ಮಾಹಿತಿ ವಿನಿಮಯ ಹಾಗೂ ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಕಟ್ಟಿಕೊಂಡಿರುವ ಕ್ಲಬ್‌ ಆಗಿದೆ.

- Advertisement -
- Advertisement -

ಶಿವರಾಮ ಕಾರಂತರ ಜ್ಞಾನಪೀಠ ಪ್ರಶಸ್ತಿ ವಿಜೇತ ಕೃತಿ ’ಮೂಕಜ್ಜಿಯ ಕನಸುಗಳು’ ಕೃತಿ ಆಧಾರಿತ ಸಿನಿಮಾವು ಕನ್ನಡ ಚಿತ್ರರಂಗದ ನೂತನ ಪ್ರಯೋಗ ‘FUC‘ (ದಿ ಫಿಲ್ಮ್‌ ಮೇಕರ್ಸ್‌ ಯುನೈಟೆಡ್‌ ಕ್ಲಬ್) ವೆಬ್‌ಸೈಟ್‌ನಲ್ಲಿ ಮುಂದಿನ ತಿಂಗಳು ಮರು ಬಿಡುಗಡೆಯಾಗಲಿದೆ.

ಈ ಸಿನಿಮಾ 2019ರ ನವೆಂಬರ್‌ 29 ರಂದು ಟಾಕಿಸುಗಳಲ್ಲಿ ಬಿಡುಗಡೆಯಾಗಿ ವಿಮರ್ಶಕರ ಮೆಚ್ಚುಗೆ ಗಳಿಸಿತ್ತು. ಈ ನಡುವೆ ಸಿನಿಮಾ ನಿರ್ದೇಶಕ ಪಿ. ಶೇಷಾದ್ರಿಯವರು ಹೆಚ್ಚಿನ ಜನರಿಗೆ ಸಿನಿಮಾ ತಲುಪಿಸಲು ಹೊಸ ದಾರಿಯನ್ನು ಕಂಡು ಕೊಂಡಿದ್ದು, ’FUC’ ವೆಬ್‌ಸೈಟ್‌ನಲ್ಲಿ ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂಓದಿ: ಅತ್ಯುತ್ತಮ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಶೃತಿ ಹರಿಹರನ್: ಕನ್ನಡಕ್ಕೆ ದಾಖಲೆಯ 11 ರಾಷ್ಟ್ರಪ್ರಶಸ್ತಿಗಳು

“ಸಿನಿಮಾ ನೋಡಲು ಆಸಕ್ತಿ ಇರುವವರು ’FUC’‌ ವೆಬ್‌ಸೈಟ್‌ನಲ್ಲಿ 300 ರೂಪಾಯಿ ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. 3000ಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿದರೆ‍ ಎಫ್‌ಯುಸಿ ವೆಬ್‌ಸೈಟ್‌ನಲ್ಲಿ ಈ ಸಿನಿಮಾ ಲಭ್ಯವಾಗಲಿದೆ. ಒಂದು ವೇಳೆ 3000 ಮಂದಿ ಹೆಸರು ನೋಂದಾಯಿಸದೆ ಇದ್ದರೆ ಸಿನಿಮಾ ಬಿಡುಗಡೆ ಆಗುವುದಿಲ್ಲ. ಆಗ ಯಾರು ಹೆಸರು ನೋಂದಾಯಿಸಿಕೊಂಡಿರುತ್ತಾರೋ ಅವರಿಗೆ ಹಣ ಮರಳಿಸಲಾಗುವುದು” ಎಂದು ನಿರ್ದೇಶಕ ಪಿ. ಶೇಷಾದ್ರಿ ತಿಳಿಸಿದ್ದಾರೆ.

ಪ್ರಸ್ತುತ ‘FUC’ ವೆಬ್‌ಸೈಟ್‌‌ನಲ್ಲಿ ಬುಕಿಂಗ್ ಚಲಾವಣೆಯಲ್ಲಿದ್ದು 09 ಅಕ್ಟೋಬರ್‌ 2020 ರಂದು ಈ ಅಭಿಯಾನ ಮುಕ್ತಾಯವಾಗಲಿದೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

‘FUC’ ಸಿನಿಮಾ ಬಗೆಗಿನ ಜ್ಞಾನ, ಮಾಹಿತಿ ವಿನಿಮಯ ಹಾಗೂ ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಕಟ್ಟಿಕೊಂಡಿರುವ ಕ್ಲಬ್‌ ಆಗಿದೆ. ಇದು ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಪ್ರಾರಂಭವಾಗಿದ್ದು ಕ್ಲಬ್‌ಗೆ ನಿರ್ದೇಶಕರಾದ ಕೆ.ಎಂ. ಚೈತನ್ಯ, ಜಯತೀರ್ಥ, ಬಿ.ಎಂ. ಗಿರಿರಾಜ್‌, ಅರವಿಂದ ಶಾಸ್ತ್ರಿ, ಮಂಸೋರೆ, ಹಿರಿಯ ನಿರ್ದೇಶಕ ಗಿರೀಶ ಕಾಸರವಳ್ಳಿ, ಪಿ.ಶೇಷಾದ್ರಿ, ಯೋಗರಾಜ್‌ ಭಟ್‌ ಸೇರಿದಂತೆ ಹಲವು ಮಂದಿ ಕನ್ನಡ ನಿರ್ದೇಶಕರು ಬೆಂಬಲ ನೀಡಿದ್ದಾರೆ.

ಪ್ರಸ್ತುತ ಇದಕ್ಕೆ ಕನ್ನಡದ ನಿರ್ದೇಶಕರು ಮಾತ್ರವಲ್ಲದೆ ತೆಲುಗಿನ ತರುಣ್‌ ಭಾಸ್ಕರ್‌, ನಂದಿನಿ ರೆಡ್ಡಿ, ತಮಿಳಿನ ವಸಂತ ಬಾಲನ್‌ ಹಾಗೂ ಮಲಯಾಳದ ಲಿಜೊ ಸೇರಿದಂತೆ ಹಲವರು ಸಹ  ‘FUC’ ಸೇರಿದ್ದಾರೆ.


ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...