Homeಕರ್ನಾಟಕತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

- Advertisement -
- Advertisement -

ತುಮಕೂರು ಜಿಲ್ಲೆ ಕವಿಗಳ ತವರು. ಹಲವು ಕವಿಗಳು, ವಿದ್ವಾಂಸರು, ಬರಹಗಾರರು ಇಲ್ಲಿ ಜನಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡಿರುವ ಹೆಗ್ಗಳಿಕೆ ಜಿಲ್ಲೆಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ ಅಪಾರ. ಪ್ರಾಚೀನ- ಆಧುನಿಕ ಸಾಹಿತ್ಯದ ಕೊಂಡಿಯಾಗಿ ಕೆಲಸ ಮಾಡಿದವರು, ಕನ್ನಡ ಸಾಹಿತ್ಯಕ್ಕೆ ಹೊಸತನವನ್ನು ತಂದುಕೊಟ್ಟ ಹಲವು ಬರಹಗಾರರು ಈ ಜಿಲ್ಲೆಯವರಾಗಿದ್ದಾರೆ. ಅಂಥವರಲ್ಲಿ ಬಿಎಂಶ್ರೀ ಕೂಡ ಒಬ್ಬರು. ಅವರು ತಮ್ಮ ತಾಯಿಯ ತವರೂರು ತುರುವೇಕೆರೆಯ ಸಂಪಿಗೆ ಗ್ರಾಮದಲ್ಲಿ ಜನಿಸಿದ ಬಿಎಂಶ್ರೀ ದೊಡ್ಡ ವಿದ್ವಾಂಸರಾಗಿ ರಾಜಸೇವಾಸಕ್ತ ಬಿರುದು ಪಡೆದವರು. ಕನ್ನಡ ಸಾಹಿತ್ಯಕ್ಕೆ ಹೊಸಮಾರ್ಗ ಹಾಕಿಕೊಟ್ಟವರು.

ಅಂಥ ಘನ ವಿದ್ವಾಂಸರ ಹೆಸರಿನಲ್ಲಿ ಸಂಪಿಗೆಯಲ್ಲಿ ನಿರ್ಮಾಣಗೊಂಡಿರುವ ಬಿಎಂಶ್ರೀ ಭವನ ಯಾವುದೇ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತಿಲ್ಲ. ಅದರ ನಿರ್ವಹಣೆಗೆಂದು ಯಾರೂ ಇಲ್ಲವಾಗಿದೆ. ಇನ್ನು ಅದರಿಂದ ಆದಾಯ ಬರುವುದಾದರೂ ಹೇಗೆ? ಹೀಗಾಗಿ ಸರಿಯಾದ ನಿರ್ವಹಣೆ ಇಲ್ಲದ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

2006-07ನೇ ಸಾಲಿನಲ್ಲಿ ಬಿಎಂಶ್ರೀ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ 2008-09ನೇ ಸಾಲಿನ ಹೊತ್ತಿಗೆ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ಭವನ ನಿರ್ಮಿಸಿ ಒಂದು ದಶಕ ಕಳೆದರೂ ಯಾವುದೇ ಚಟುವಟಿಕೆಗಳಿಗೆ ಬಳಸದೆ ಭವನ ವ್ಯರ್ಥವಾಗಿ ಪಾಳುಬಿದ್ದಿದೆ.

ಅಂದಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಪ್ಪ, ಸಾಹಿತಿಗಳು, ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ 16 ಲಕ್ಷ ರೂಪಾಯಿ ಬಿಡುಗಡೆಯಾಗಿತ್ತು. ತುರುವೇಕೆರೆಯ ಅಂದಿನ ಶಾಸಕ ಎಂ.ಟಿ.ಕೃಷ್ಣಪ್ಪ 3 ಲಕ್ಷ ರೂಪಾಯಿ ಹಣವನ್ನು ಶಾಸಕರ ನಿಧಿಯಿಂದ ನೀಡಿದ್ದರು. ಒಟ್ಟು 19-20 ಲಕ್ಷ ರೂ. ವೆಚ್ಚದಲ್ಲಿ ಬಿಎಂಶ್ರೀ ಭವನವನ್ನು ನಿರ್ಮಾಣ ಮಾಡಲಾಗಿದೆ. ಇಷ್ಟೊಂದು ಹಣವನ್ನು ವೆಚ್ಚ ಮಾಡಿದ್ದರೂ ಯಾವುದೇ ಚಟುವಟಿಕೆಗಳು ನಡೆಯದಿರುವುದು ದುರಂತ.

ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ

ತುಮಕೂರು: ಬಳಕೆಗೆ ಬಾರದ ಬಿಎಂಶ್ರೀ ಭವನ, ಅನೈತಿಕ ಚಟುವಟಿಕೆಗಳ ತಾಣ, ತಿರುಗಿ ನೋಡದ ಇಲಾಖೆ!

Posted by Naanu Gauri on Tuesday, September 8, 2020

ಈ ಕುರಿತು ಕಸಾಪ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ “ಬಿಎಂಶ್ರೀ ದೊಡ್ಡ ವಿದ್ವಾಂಸರು. ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ ಭವನ ಯಾವುದೇ ನಿರ್ವಣೆಯಿಲ್ಲದೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಬಾಗಿಲು ತೆಗೆದಿಲ್ಲ, ಕಸ ಹೊಡೆಯುತ್ತಿಲ್ಲ. ನಿರ್ವಹಣೆಯ ಹೊಣೆ ಹೊತ್ತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಪಿಗೆ ಗ್ರಾಮದತ್ತ ತಿರುಗಿಯೂ ನೋಡುತ್ತಿಲ್ಲ. ಸಾಹಿತ್ಯ, ಸಂಸ್ಕೃತಿ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕಿದ್ದ ಬಿಎಂಶ್ರೀ ಭವನದ ಸ್ಥಿತಿಯನ್ನು ನೋಡಿದರೆ ನೋವಾಗುತ್ತದೆ. ಭವನದ ನಿರ್ವಹಣೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ ಎಂದು ದೂರಿದ್ದಾರೆ.

ಹೌದು ಸಾಹಿತಿಗಳ ಹೆಸರಿನಲ್ಲಿ ಭವನ ನಿರ್ಮಿಸುವುದು ಸರಿಯಾದ ಕ್ರಮವೇ ಇರಬಹುದು. ಅದರೆ ಅದರ ನಿರ್ವಹಣೆ ಮಾಡದೇ ಇದ್ದರೆ, ಕಾರ್ಯಕ್ರಮಗಳಿಗೆ ಬಳಸಿಕೊಳ್ಳದಿದ್ದರೆ ಇಂಥ ಭವನಗಳ ನಿರ್ಮಾಣ ವ್ಯರ್ಥ ಎಸಿಸುತ್ತದೆ. ಗ್ರಾಮೀಣ ಭಾಗದಲ್ಲಿ ಯಾವುದೇ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೂ ಇಷ್ಟೊಂದು ಹಣ ವೆಚ್ಚ ಮಾಡಿದ್ದಾದರೂ ಏಕೆ ಎಂಬ ಮಾತುಗಳು ಕೂಡ ಕೇಳಿಬಂದಿವೆ.

ಬಿಎಂಶ್ರೀ ಭವನದಲ್ಲಿ ಸದಾ ಸಾಂಸ್ಕೃತಿಕ ಚಟುವಟಿಕೆಗಳ ನಡೆಯುವಂತೆ ಆಸಕ್ತಿ ವಹಿಸಬೇಕು. ಬಿಎಂಶ್ರೀ ಸಾಹಿತ್ಯದ ಕುರಿತು ಚರ್ಚೆ, ಸಂವಾದಗಳು ನಡೆಸಲು ಕಾರ್ಯಯೋಜನೆಗಳನ್ನು ಹಾಕಿಕೊಳ್ಳಬೇಕು. ಪ್ರತಿ ತಿಂಗಳಿಗೆ ಎರಡು ಸಾಹಿತ್ಯ, ಸಂಸ್ಕೃತಿ, ಜಾನಪದ ಮೇಳಗಳನ್ನು ನಡೆಸಿ ಕವಿ-ಕಲಾವಿದರನ್ನು ಗೌರವಿಸುವ ಕೆಲಸ ಆಗಬೇಕು. ಆಗ ಮಾತ್ರ ಇಂಥ ಭವನಗಳಿಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಲಕ್ಷಾಂತರ ರೂಪಾಯಿ ವೆಚ್ಚೆದಲ್ಲಿ ನಿರ್ಮಾಣಗೊಂಡ ಬಿಎಂಶ್ರೀ ಭವನ ಪ್ರಯೋಜನಕ್ಕೆ ಬಾರದಂತೆ ಆಗುತ್ತವೆ. ಈಗಲಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಕಾರ್ಯಕ್ರಮಗಳನ್ನು ಯೋಜಿಸಿ ಸದಾ ಚಟುವಟಿಕೆಗಳು ನಡೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂಬ ಒತ್ತಾಯ ಕೇಳಿಬಂದಿದೆ.


ಇದನ್ನೂ ಓದಿ: 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...