Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...