Homeಕರ್ನಾಟಕಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಕ್ಷುಲ್ಲಕ ಪಾರ್ಕಿಂಗ್ ವಿಚಾರಕ್ಕೆ ಹೋರಾಟಗಾರರಾದ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ರವಿ ಮತ್ತು ಪೇದೆ ರಮೇಶ್ ರವರನ್ನು ಅಮಾನತ್ತು ಮಾಡಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಕೊಪ್ಪ ಪೊಲೀಸರು ಕೆ.ಎಲ್‌ ಅಶೋಕ್‌ರವರನ್ನು ಗುರಿಮಾಡಿ ಉದ್ದೇಶಪೂರ್ವಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನ ಮಾಡಿದ್ದಾರೆ. ಈ ರೀತಿ ಅಧಿಕಾರ ದುರುಪಯೋಗಿಪಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದರಿಂದ ಕೂಡಲೇ ಪೇದೆ, ಎಸ್‌ಐ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಸಂವಿಧಾನ ಉಳಿವಿಗಾಗಿ ಕರ್ನಾಟಕದ ಪದಾಧಿಕಾರಿಗಳು ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಘಟನೆಯ ವಿವರ:

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕೊಪ್ಪಗೇಟ್‌ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ.ಎಲ್‌ ಅಶೋಕ್‌ರವರು ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ರಮೇಶ್ ಎಂಬ ಪೊಲೀಸ್ ಪೇದೆ ಯೂನಿಫಾರ್ಮ್ ಸಹ ಹಾಕಿರದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಗೊತ್ತಿಲ್ಲದೆ ನಿಲ್ಲಿಸಿದ್ದೇವೆ, ಈಗಲೇ ಹೊರಡುತ್ತೇವೆ ಅಥವಾ ದಂಡ ಕಟ್ಟುತ್ತೇವೆ ಎಂದರೂ ಬಿಡದೆ ಕಾರಿನ ಫೋಟೊ ತೆಗೆದುಕೊಂಡಿದ್ದಲ್ಲದೇ ಕಾರು ಸೀಜ್‌ ಮಾಡಲು ಮುಂದಾದರು ಎಂದು ಕೆ.ಎಲ್ ಅಶೋಕ್‌ ದೂರಿದ್ದಾರೆ.

“ಪೊಲೀಸರು ಅಡ್ರೆಸ್ ಕೇಳಿದಾಗ ನಾನು ಶಿವಮೊಗ್ಗದ ನನ್ನ ಮನೆಯ ವಿಳಾಸ ನೀಡಿದೆ. ಆಗ ಪೇದೆಯು ಚಿಕ್ಕಮಗಳೂರಿನಲ್ಲಿದ್ದು, ಶಿವಮೊಗ್ಗದ ಅಡ್ರೆಸ್‌ ನೀಡುತ್ತೀಯ, ನಾಟಕ ಮಾಡುತ್ತೀಯ ಅಂದರು. ಇದರಿಂದ ನಾನು ಕೋಪಗೊಂಡು ಜೋರಾಗಿ ಮಾತನಾಡಿದಾಗ ಅಧಿಕ ಪ್ರಸಂಗ ಮಾಡಬೇಡಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ನಂತರ ಠಾಣೆಗೆ ಹೋದರೆ ಅಲ್ಲಿದ್ದ ಎಸ್‌ಐ  ರವಿ ಎಂಬಾತರೂ ಸಹ ಅನುಚಿತವಾಗಿ ನಡೆದುಕೊಂಡು ಘಾಸಿಗೊಳಿಸಿದರು” ಎಂದು ಕೆ.ಎಲ್ ಅಶೋಕ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ನೋಡಿ.

ಕ್ಷುಲ್ಲಕ ಕಾರಣಕ್ಕೆ ಹೋರಾಟಗಾರ, ಚಿಂತಕರಾದ ಕೆ. ಎಲ್ ಅಶೋಕ್ ರನ್ನು ಗುರಿ ಮಾಡಿದ ಕೊಪ್ಪ ಪೊಲೀಸರುವಿಡಿಯೋ ನೋಡಿ…#Naanugauri #klashok #police #koppa

Posted by Naanu Gauri on Tuesday, September 8, 2020

ಬೆಳಂಬೆಳಿಗ್ಗೆಯೇ ನಡೆದ ಈ ಘಟನೆಯಿಂದ ನನಗೆ ದಿಗ್ಭಾಂತ್ರಿಯಾಯಿತು. ಒಂದು ಸಣ್ಣ ತಪ್ಪಿಗೆ ಇಷ್ಟೆಲ್ಲಾ ರಾದ್ಧಾಂತ ಮಾಡಬೇಕಿತ್ತೆ ಎನಿಸಿತು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ರವಿ ನನ್ನ ಫೋನ್‌ ಕಿತ್ತುಕೊಂಡರು. ಅವರ ನಡವಳಿಕೆ ನೋಡಿದರೆ ಬೆಳಿಗ್ಗೆಯೇ ಕುಡಿದುಬಂದಿದ್ದರು ಅನ್ನಿಸುತ್ತದೆ. ನಾನು ಸ್ಥಳೀಐ ಎಂಎಲ್‌ಎ ರಾಜೇಗೌಡರಿಗೆ ಫೋನ್ ಮಾಡಲು ಮುಂದಾದಾಗಲೂ ಅವರು ಬಂದರೂ ಸಹ ಕ್ಷಮೆ ಕೇಳಿಸುತ್ತೇನೆ ಎಂದು ದರ್ಪ ಮೆರದಿದ್ದಾರೆ ಎಂದು ಅವರು ದೂರಿದ್ದಾರೆ.

ಸಣ್ಣ ಅವಘಡಕ್ಕೆ ಪೊಲೀಸರು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಮಧುಕರ್ ಶೆಟ್ಟಿ, ಬಿಕೆ ಸಿಂಗ್, ವಿಪುಲ್ ಕುಮಾರ್‌ರವರಂತಹ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಕಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪೊಲೀಸರು ಇರುವುದು ಹೇಗೆ ಸಾಧ್ಯ ಎನಿಸಿತು. ಇವರು ಜನಸಾಮಾನ್ಯರ ಬಗ್ಗೆ ಹೇಗೆ ವರ್ತಿಸುತ್ತಾರೆ? ಇವರು ಹಣವಸೂಲಿ ದಂಧೆ ಮಾಡುತ್ತಾ, ನಿಕೃಷ್ಟವಾಗಿ ವರ್ತಿಸುತ್ತಾರೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಅಶೋಕ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

ನಾನು ಇದನ್ನು ಅವಮಾನ ಅಂದುಕೊಳ್ಳದೇ ಸುಮ್ಮನೆ ಇರಬಹುದಿತ್ತು. ಆದರೆ ಕೊಪ್ಪ, ಮಲೆನಾಡಿನಲ್ಲಿ ಹಲವು ಜನ ಸಾಮಾನ್ಯರಿಗೂ ಇದೇ ರೀತಿಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳಿವೆ. ಅದನ್ನು ತಡೆಗಟ್ಟಬೇಕಿದೆ. ಹಾಗಾಗಿ ನನ್ನನ್ನು ನಿಂದಿಸಿದ, ಅವಮಾನಿಸಿದ, ಕಾನೂನು ದುರುಪಯೋಗಪಡಿಸಿಕೊಂಡ ಮತ್ತು ಹಗಲು ಹೊತ್ತಿನಲ್ಲೇ ಕುಡಿದು ಠಾಣೆಗೆ ಬರುವ ಎಸ್‌ಐ ಮತ್ತು ಪೇದೆ ಇಬ್ಬರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪೊಲೀಸರ ಮೇಲೆ ಕ್ರಮ ಜರುಗಿಸದಿದ್ದರೆ ಪ್ರತಿಭಟನೆ

ಸಂವಿಧಾನ ಉಳಿವಿಗಾಗಿ ಕರ್ನಾಟಕದ ಜಿಲ್ಲಾ ಸಂಚಾಲಕರಾದ ಗೌಸ್ ಮೊಯಿದ್ದೀನ್ ಮಾತನಾಡಿ “ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಕೆ.ಎಲ್ ಅಶೋಕ್‌ರವರು ಇನ್ನು ಡ್ರೈವಿಂಗ್‌ ಸೀಟ್‌ನಲ್ಲೇ ಕುಳಿತಿದ್ದರು. ಈ ಸಮಯದಲ್ಲಿ ಪೊಲೀಸರು ಬೇರೆ ಕಡೆ ನಿಲ್ಲಿಸಿ ಎಂದು ತಿಳಿಹೇಳಬೇಕು. ಆದರೆ ಅವರ ಕುಟುಂಬದವರ ಎದುರೆ ಕೆಟ್ಟದಾಗಿ ನಿಂದಿಸಿರುವುದು ನೋಡಿದರೆ, ಇದು ಉದ್ದೇಶಪೂರ್ವಕ ಕೃತ್ಯ ಎಂಬ ಅನುಮಾನ ಬರುತ್ತದೆ. ಕೆ.ಎಲ್ ಅಶೋಕ್‌ರವರು ಜಿಲ್ಲೆಯಲ್ಲಿ ಹಲವು ಹೋರಾಟಗಳನ್ನು ಮುನ್ನೆಡೆಸಿದವರಾಗಿದ್ದಾರೆ. ಅಂತವರ ಮೇಲಿನ ಈ ಅವಮಾನವನ್ನು ತೀವ್ರ ಖಂಡಿಸುತ್ತೇವೆ. ಎಸ್‌ಪಿಯವರು ಕೂಡಲೇ ಕ್ರಮ ತೆಗೆದುಕೊಳ್ಳದಿದ್ದರೆ ಪ್ರತಿಭಟನೆ ಅನಿವಾರ್ಯ” ಎಂದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್: ಪ್ರೊ.ಕೆ.ಸತ್ಯನಾರಾಯಣ ಅವರಿಗೆ ಸಮನ್ಸ್ ಹೊರಡಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...