Homeಕರೋನಾ ತಲ್ಲಣಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ಜನರ ಮೇಲೆ ಸೋಂಕು ನಿವಾರಕ ಸಿಂಪಡಣೆ ಹಾನಿಕಾರಕ: ಕ್ರಮ ಕೈಗೊಳ್ಳುವಂತೆ ಸುಪ್ರೀಂ ಸೂಚನೆ

ಔಷಧಿ ಸಿಂಪಡಣೆ ಮಾಡುವುದು ಮನುಷ್ಯನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ .ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ತಿಳಿಸಿದೆ.

- Advertisement -
- Advertisement -

ಮಾನವರ ಮೇಲೆ ಪೈಪುಗಳ ಮೂಲಕ, ವಾಕ್-ಇನ್ ಸುರಂಗಮಾರ್ಗಗಳ ಮೂಲಕ ಸೋಂಕು ನಿವಾರಕ ಸಿಂಪಡಿಸುವುದನ್ನು ಎಲ್ಲೂ ಶಿಫಾರಸು ಮಾಡಲಾಗಿಲ್ಲ. ಆದರೂ ಎಲ್ಲಾ ಕಡೆ ಅವುಗಳನ್ನು ಸ್ಥಾಪಿಸಿದ್ದರೂ ಸಹ ನೀವು ಏಕೆ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಹೀಗೆ ಔಷಧಿ ಸಿಂಪಡಣೆ ಮಾಡುವುದು ಮನುಷ್ಯನಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ .ಸುಭಾಷ್ ರೆಡ್ಡಿ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ತಿಳಿಸಿದೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಸೋಂಕು ನಿವಾರಕ ಔಷಧಿಯನ್ನು ಸಿಂಪಡಿಸಲಾಗಿತ್ತು. ಅಲ್ಲದೇ ಈಗ ಎಲ್ಲಾ ಕಚೇರಿಗಳು, ಕೆಲಸದ ಸ್ಥಳಗಳು, ರಸ್ತೆಗಳಲ್ಲಿ ಜನರ ಮೇಲೆ ಔಷಧಿ ಸಿಂಪಡಿಸಲಾಗುತ್ತಿದೆ.

ಸೋಂಕು ನಿವಾರಕ ಸಿಂಪಡಣೆ ನಿಲ್ಲುಸುವಂತೆ ಶೀಘ್ರದಲ್ಲೇ ಅಗತ್ಯ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ಸಾಲಿಟರಿ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು.

PC: Deccan Herald

ಸೋಂಕುನಿವಾರಕಕ್ಕಾಗಿ ರಾಸಾಯನಿಕ ಸೋಂಕುನಿವಾರಕಗಳನ್ನು ಸಿಂಪಡಿಸುವುದು ಸೇರಿ ಸೋಂಕುಗಳ ಸುರಂಗಗಳ ಬಳಕೆ, ಸ್ಥಾಪನೆ, ಉತ್ಪಾದನೆ, ಜಾಹೀರಾತುಗಳನ್ನು ನಿಷೇಧಿಸಲು ಕೋರಿರುವ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಪೀಠ ಈ ವಿಚಾರಗಳನ್ನು ಪ್ರಸ್ತಾಪಿಸಿದೆ.

ಇದನ್ನೂ ಓದಿ: ಯಾವುದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ, ವೈದ್ಯನಾಗಿಯೇ ಉಳಿಯುವೆ: ಡಾ.ಕಫೀಲ್ ಖಾನ್

ನ್ಯಾಯಾಲಯದ ನೋಟಿಸ್‌ಗೆ ಪ್ರತಿಕ್ರಿಯಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅಫಿಡವಿಟ್‌ನಲ್ಲಿ, ವಾಕ್-ಇನ್ ಸುರಂಗಗಳ ಮೂಲಕ ಜನರು ಅಂತಹ ರಾಸಾಯನಿಕಗಳಿಗೆ ಒಡ್ಡಿಕೊಳ್ಳುತ್ತಾರೆ ಎಂಬ ವರದಿಗಳನ್ನು ಬಂದ ನಂತರ ಸಲಹಾ ಸಮಿತಿ ಜೊತೆಗೆ ಏಪ್ರಿಲ್ 8 ರಂದು ಸಭೆ ನಡೆಸಲಾಗಿದೆ. ಜೊತೆಗೆ ಮಾನವರ ಮೇಲೆ ಸೋಂಕು ನಿವಾರಕಗಳನ್ನು ಸಿಂಪಡಿಸುವುದನ್ನು ಯಾವುದೇ ಸಂದರ್ಭದಲ್ಲೂ ಶಿಫಾರಸು ಮಾಡುವುದಿಲ್ಲ ಮತ್ತು ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಾನಿಕಾರಕವಾಗಿದೆ ಎಂದು ಸಮಿತಿ ಹೇಳಿದೆ.

ರಾಸಾಯನಿಕಗಳು ಮಾನವನ ಚರ್ಮಕ್ಕೆ ಹಾನಿಕಾರಕ ಮತ್ತು ಉಸಿರಾಟದ ತೊಂದರೆಗೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಯಾವುದೇ  ರಾಸಾಯನಿಕ ಸೋಂಕು ನಿವಾರಕವನ್ನು ಬಾಹ್ಯವಾಗಿ ಸಿಂಪಡಿಸುವುದರಿಂದ ಮೊದಲೇ ವ್ಯಕ್ತಿಯ ದೇಹಕ ಪ್ರವೇಶಿಸಿದ ವೈರಸ್ ಅನ್ನು ಕೊಲ್ಲುವುದಿಲ್ಲ ಎಂದು ಸಮಿತಿ ಏಪ್ರಿಲ್ 18 ರಂದು ನೀಡಿದ ವರದಿಯನ್ನು ನ್ಯಾಯಾಲಯದಲ್ಲಿ ಸಚಿವಾಲಯ ಪ್ರಸ್ತುತಪಡಿಸಿತು.

ಆದರೂ ಎಲ್ಲೆಡೆ ಸೋಂಕು ನಿವಾರಕಗಳನ್ನು ಅಳವಡಿಸಲಾಗುತ್ತಿದೆ. ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.


ಇದನ್ನೂ ಓದಿ: ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...