Homeಕರ್ನಾಟಕಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

“ಇದು ತುಂಬಾ ಸೂಕ್ಷ್ಮವಾದ ವಿಷಯವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅದಕ್ಕೂ ಮೊದಲೇ ಏನನ್ನೂ ಹೇಳಲು ಇಚ್ಚಿಸುವುದಿಲ್ಲ” ಎಂದು ಕೆಜಿಎಫ್ ಶಾಸಕರಾದ ರೂಪ ಶಶಿಧರ್ ಹೇಳಿದ್ದಾರೆ.

- Advertisement -
- Advertisement -

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿರುವ ಘಟನೆ ಕೆಜಿಎಫ್ ನ ಕೆ.ಸಿ.ರೆಡ್ಡಿ ಗಾಂಡ್ಲ ಹಳ್ಳಿಯಲ್ಲಿ ನಡೆದಿದೆ ಎಂದು ತಾಲೂಕಿನ ಆಂಡರ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಶಿವರಾಮಪ್ಪ, ಈ ಸಂಬಂಧ ತನ್ನದೇ ಗ್ರಾಮದವರಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಎಂಬುವವರ ಮೇಲೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 323, 324, 504, 506 ಮತ್ತು 34 ಹಾಗೂ SC, ST ದೌರ್ಜನ್ಯ ಪ್ರತಿಬಂಧಕ ಕಾಯ್ದೆ-2005 (ತಿದ್ದುಪಡಿ)ರ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಆಗಸ್ಟ್ 29, 2020 ರಂದು ಪ್ರಕರಣ ದಾಖಲಿಸಿದ್ದರೂ ಸಹ, ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಶಿವರಾಮಪ್ಪನವರ ಸಹೋದರರಾದ ನಾರಾಯಣ್ ಕ್ಯಾಸಂಬಳ್ಳಿ ಆರೋಪಿಸಿದ್ದಾರೆ.

“ಆಗಸ್ಟ್ 29 ರಂದು ಬೆಳಿಗ್ಗೆ 9 ಗಂಟಗೆ ಈ ಪ್ರಕರಣದ ದೂರನ್ನು ಪೊಲೀಸ್ ಠಾಣೆಗೆ ನೀಡಿದ್ದರೂ, ಅಂದು ಸಂಜೆಯವರೆಗೂ ಯಾವುದೇ ರೀತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳದೇ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ಉನ್ನತ ಅಧಿಕಾರಿಗಳಿಂದ ಒತ್ತಡ ಹಾಕಿಸಿದ್ದರಿಂದ ಅಂದು ರಾತ್ರಿ 11 ಗಂಟೆಗೆ ಪ್ರಕರಣ ದಾಖಲಿಸಿ ಎಫ್.ಐ.ಆರ್ ಹಾಕಿದ್ದಾರೆ” ಎಂದು ಅವರು ಹೇಳಿದರು.

ಶಿವರಾಮಪ್ಪನವರು ತಮಗೆ ಸೇರಿದ ಖಾಲಿ ನಿವೇಶನದಲ್ಲಿ ಕಲ್ಲುಗಳಿಂದ ಕಾಂಪೌಂಡ್ ಕಟ್ಟುತ್ತಿದ್ದ ವೇಳೆ ಅದೇ ಊರಿನ ರಘುರಾಮ ರೆಡ್ಡಿ ಎಂಬುವವರ ಮಕ್ಕಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಎಂಬುವವರು, ಶಿವರಾಮಪ್ಪನವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಸೈಜುಗಲ್ಲು ಎತ್ತಿ ಹಾಕಿ ದೊಣ್ಣೆ ಮತ್ತು ಮಚ್ಚುಗಳಿಂದ ಮಾರಣಾಂತಿಕವಾದ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

“ದೂರು ದಾಖಲಾಗಿ 10 ದಿನಗಳು ಕಳೆದರೂ, ಈವರೆಗೆ ಆರೋಪಿಗಳನ್ನು ಬಂಧಿಸದ ಪೋಲಿಸರ ವರ್ತನೆಯನ್ನು ಖಂಡಿಸಿ, ಜಿಲ್ಲೆ ಮತ್ತು ತಾಲ್ಲೂಕಿನ ದಸಂಸ ಮತ್ತು ಇತರ ದಲಿತ ಸಂಘಟನೆಗಳು ಕಳೆದ 8 ದಿನಗಳಿಂದ ಪ್ರತಿಭಟನೆ ಮಾಡುತ್ತಿದೆ. ಇಂದೂ ಕೂಡ ಕೆಜಿಎಫ್ ನ ತಾಲ್ಲೂಕು ಕಛೇರಿ ಮುಂಭಾಗ ದಲಿತ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಎಲ್ಲಾ ಅಗತ್ಯ ದಾಖಲೆಗಳೂ ಹಲ್ಲೆಗೊಳಗಾದವರ ಪರವಾಗಿವೆ ಎಂದು ತಹಶೀಲ್ದಾರ್ ಅವರೇ ಹೇಳಿದ್ದಾರೆ. ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ” ಎಂದು ನಾರಾಯಣ ಕ್ಯಾಸಂಬಳ್ಳಿ ಆರೋಪಿಸಿದ್ದಾರೆ.

ಈ ನಡುವೆ ಕೋಲಾರ ಜಿಲ್ಲಾ ಅಟ್ರಾಸಿಟಿ ಕಾಯ್ದೆಯಡಿ ದಲಿತ ದೌರ್ಜನ್ಯ ತಡೆ ಸಮಿತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದೆ‌. ದೌರ್ಜನ್ಯಕ್ಕೆ ಒಳಗಾದ ಶಿವರಾಮಪ್ಪ ಕುಟುಂಬದವರಿಗೆ ಧೈರ್ಯವನ್ನು ತುಂಬಿದೆ.

ಪ್ರಸ್ತುತ ಪ್ರಕರಣದ ವಿವಾದಿತ ಖಾಲಿ ನಿವೇಶನವನ್ನು ಶಿವರಾಮಪ್ಪನವರ ಸಹೋದರರಾದ ಸತ್ಯಮೂರ್ತಿ ಅವರು 2013 ರಲ್ಲಿಯೇ ಖರೀದಿಸಿದ್ದರು. ಈ ನಿವೇಶನವು ಅದೇ ಗ್ರಾಮದವರಾದ ಕದಿರೆಪ್ಪ ಎಂಬುವವರಿಗೆ 1975ರಲ್ಲಿ ಪಂಚಾಯಿತಿಯ ಕಡೆಯಿಂದ ಮಂಜೂರಾಗಿದ್ದು, ಆಗಲೇ ಇದಕ್ಕೆ ಸಂಬಂಧಿಸಿದ ಹಕ್ಕು ಪತ್ರವನ್ನು ಪಡೆದುಕೊಂಡಿದ್ದರು.

“ಆದರೆ ಈಗ, ಆರೋಪಿಗಳು ಈ ಸ್ಥಳ ತಮಗೆ ಸೇರಿದ್ದೆಂದು ಹಲವು ದಿನಗಳಿಂದ ತೊಂದರೆ ಕೊಡುತ್ತಿದ್ದರು. ಇಲ್ಲಿ ನಾವು ಸಾವಿತ್ರಿಭಾಯಿ ಫುಲೆ ಅವರ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ಕಟ್ಟಿಸಿ, ಪ್ರಗತಿಪರ ಚಟುವಟಿಕೆಗಳ ತಾಣವನ್ನಾಗಿ ಮಾಡಬೇಕು ಎಂಬ ಬಯಕೆಯನ್ನು ಹೊಂದಿದ್ದೆವು. ಆದರೆ ಆರೋಪಿಗಳು ಬಂದು ಇಲ್ಲಿ ದೇವಸ್ಥಾನ ಕಟ್ಟಿಸಬೇಕು ಎಂದು ದಲಿತರನ್ನೇ ದಲಿತರ ಮೇಲೆ ಎತ್ತಿಕಟ್ಟಿ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದ್ದಾರೆ” ಎಂದು ನಾರಾಯಣ್ ಕ್ಯಾಸಂಬಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

“ಸುಮಾರು 10 ದಿನಗಳಿಂದ ಇಷ್ಟೆಲ್ಲಾ ಬೆಳವಣಿಗೆಗಳಾದರೂ ಯಾವುದೇ ಜನಪ್ರತಿನಿಧಿಗಳು ಗ್ರಾಮದತ್ತ ಸುಳಿದು ಸಾಂತ್ವನ ಹೇಳುವ‌ ಕೆಲಸ ಮಾಡಿಲ್ಲ. ಆದರೆ ಕಳೆದ ಸೆಪ್ಟಂಬರ್ 4 ರಂದು ತನ್ನ ಬೆಂಬಲಿಗರೊಂದಿಗೆ ನಾಲ್ಕಾರು ಕಾರುಗಳಲ್ಲಿ ಗ್ರಾಮಕ್ಕೆ ದಿಢೀರ್ ಭೇಟಿಕೊಟ್ಟ ಕೆಜಿಎಫ್ ಕ್ಷೇತ್ರದ MLA ರೂಪ ಶಶಿಧರ್ ಅವರು, ನಮ್ಮನ್ನಾಗಲಿ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಮಪ್ಪ ಅವರನ್ನಾಗಲಿ ಸೌಜನ್ಯಕ್ಕೂ ಭೇಟಿ ಮಾಡದೆ, ಆರೋಪಿಗಳ ತಂದೆಯಾದ ರಘುರಾಮ ರೆಡ್ಡಿ ಮತ್ತು ಅವರ ಬೆಂಬಲಿತರೂ ಸೇರಿದಂತೆ ಗ್ರಾಮದ ಸವರ್ಣೀಯ ಸಮುದಾಯದವರೊಂದಿಗೆ ಪಂಚಾಯತಿ ಮಾಡಿ ಹಲ್ಲೆಗೊಳಗಾದವರು ಕೇಸು ದಾಖಲಿಸಿದ್ದೇ ತಪ್ಪು ಎಂಬಂತೆ ಮಾತನಾಡಿರುವುದು ನಿಜಕ್ಕೂ ದುರಂತ” ಎಂದು ಕುಟುಂಬಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

“ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆದು ರಕ್ಷಣೆ ನೀಡಬೇಕಾದ, ಸ್ವತಃ ದಲಿತ ಸಮುದಾಯದವರೇ ಆದ ಶಾಸಕರೇ ಹಲ್ಲೆಮಾಡಿದ ಆರೋಪಿಗಳ ಪರವಾಗಿ ನಿಂತಿರುವುದು ಅಮಾನವೀಯ ಮತ್ತು ಖಂಡನೀಯ. ಆರೋಪಿಗಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಮತ್ತು ಅವರ ಕುಟುಂಬಕ್ಕೆ ಬೆಂಬಲವಾಗಿ ನಿಂತಿರುವ MLA ರೂಪ ಶಶಿಧರ್ ಅವರ ದಲಿತ ವಿರೋಧಿ ನಡೆಯನ್ನು ಖಂಡಿಸಬೇಕಿದೆ” ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕೆಜಿಎಫ್ ಶಾಸಕರಾದ ರೂಪ ಶಶಿಧರ್ ಅವರು, “ಇದು ತುಂಬಾ ಸೂಕ್ಷ್ಮವಾದ ವಿಷಯವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅದಕ್ಕೂ ಮೊದಲೇ ಏನನ್ನೂ ಹೇಳಲು ಇಚ್ಚಿಸುವುದಿಲ್ಲ” ಎಂದು ಹೇಳಿದರು.

“ವಾಸ್ತವದಲ್ಲಿ ಏನಾಗಿದೆ ಎಂಬುದು ನನಗೂ ಗೊತ್ತಿಲ್ಲ. ಹಾಗಾಗಿ ನೀವು ಇದರ ಕುರಿತು ಪೊಲೀಸಿನವರನ್ನೇ ಕೇಳಬೇಕು. ಅವರು ಪ್ರಕರಣದ ಎಲ್ಲಾ ವಿಷಯಗಳ ವಿವರ ನೀಡುತ್ತಾರೆ. ಸಂಪೂರ್ಣವಾಗಿ ತಿಳಿದುಕೊಂಡು ನಂತರ ನನ್ನನ್ನು ಪ್ರಶ್ನಿಸಿ. ಅದಾಗ್ಯೂ, ದಲಿತರೊಬ್ಬರ ಮೇಲಿನ ಹಲ್ಲೆಯ ಈ ಪ್ರಕರಣವನ್ನು ಸೂಕ್ಷ್ಮವಾಗಿ ಬಗೆಹರಿಸಿ, ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಈಗ ಇದಕ್ಕೆ ಸಂಬಂಧಿದಂತೆ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೆ ಇದು ಬೇಕಿಲ್ಲ. ಈ ಸಮಸ್ಯೆಯನ್ನು ಗ್ರಾಮಸ್ಥರ ಸಮ್ಮುಖದಲ್ಲೇ ಬಗೆಹರಿಸಬಹುದಿತ್ತು. ಆದರೆ ಇದರ ಹಿಂದೆ ಬೇರೆ ಉದ್ದೇಶವೇ ಇದೆ. ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಈಗ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಶಾಸಕಿ ರೂಪ ಶಶಿಧರ್ ಹೇಳಿದ್ದಾರೆ.

“ವಿಳಂಬವಾಗಿ ದೂರು ದಾಖಲಿಸಿಕೊಂಡಿದ್ದೇ ಅಲ್ಲದೆ ಆರೋಪಿಗಳನ್ನ ಬಂಧಿಸಲು ವಿಳಂಬ ಮಾಡುತ್ತಿರುವ, ಪರೋಕ್ಷವಾಗಿ ಆರೋಪಿಗಳಿಗೆ ಸಹಕರಿಸುತ್ತಿರುವ KGFನ ಆಂಡ್ರಸನ್ ಪೇಟೆ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮುನಿಯಪ್ಪ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಲು ಒತ್ತಾಯಿಸೋಣ. ಅಲ್ಲದೆ ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪಿಗಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಅವರನ್ನು ಕೂಡಲೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಹಲ್ಲೆಗೊಳಗಾದ ಶಿವರಾಮಪ್ಪ ಕುಟುಂಬಕ್ಕೆ ಸೂಕ್ತ ನ್ಯಾಯ ಮತ್ತು ರಕ್ಷಣೆಯನ್ನು ಒದಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS), ಜಿಲ್ಲೆ ಮತ್ತು ತಾಲೂಕಿನ ಎಲ್ಲಾ ದಲಿತಪರ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಮಾನವ ಹಕ್ಕುಗಳ ವೇದಿಕೆ  ಒತ್ತಾಯಿಸುತ್ತದೆ. ಮತ್ತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಲಿವೆ” ಎಂದು ಗೋವಿಂದರಾಜ ಬೈಚಗುಪ್ಪೆ ಹೇಳಿದ್ದಾರೆ.


ಇದನ್ನೂ ಓದಿ: ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...