Homeಮುಖಪುಟರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ, ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿಧದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಗಳಿಗೆ ಸಂಬಂಧಿಸಿದಂತೆ ಇಂದು ಎನ್‌ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ನಟಿ ತಾನು ಡ್ರಗ್ಸ್ ಬಳಸುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಸ್ಟಡಿಯಲ್ಲಿರುವ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಕಸ್ಟಡಿಗೆ ಪಡೆಯುವುದಿಲ್ಲ ಎಂದು ಆನ್‌ಲೈನ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಿಳಿಸಿದೆ. ಏಕೆಂದರೆ ಮೂಲಗಳ ಪ್ರಕಾರ ಸಂಸ್ಥೆ ತನಗೆ ಬೇಕಾದ ಪುರಾವೆ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಹೊಂದಿದೆ ಎಂದು ಮೂಲಗಳು ತಿಳಿಸುತ್ತವೆ. ನಟಿಗೆ ಜಾಮೀನು ನೀಡುವ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.

ನಟ ಸುಶಾಂತ್ ಸಿಂಗ್ ರಜಪೂತ್‌ರ ಕೊನೆಯ ದಿನಗಳಲ್ಲಿ ರಿಯಾ ಚಕ್ರವರ್ತಿ ಆತನ ಗೆಳತಿಯಾಗಿದ್ದರು. ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿದ್ದದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

28 ವರ್ಷದ ನಟಿ ಟಿವಿ ಸಂದರ್ಶನದಲ್ಲಿ ಡ್ರಗ್ಸ್ ಬಳಸುವುದನ್ನು ನಿರಾಕರಿಸಿದ್ದರು. ಆದರೆ ಕಳೆದ ವಾರ ತನ್ನ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಿದಾಗ ನಟಿ ಆತಂಕಕ್ಕೆ ಒಳಗಾಗಿದ್ದರು.

ಆಕೆಯ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನ್ನ ವಿಚಾರಣೆಯನ್ನು ಪ್ರಾರಂಭಿಸಿತು, ಇದು ಔಷಧಿಗಳನ್ನು ಸಂಗ್ರಹಿಸುವ, ಹಂಚುವ ಬಗ್ಗೆ ಅನುಮಾನಾಸ್ಪದ ಸಂಭಾಷಣೆಗಳನ್ನು ಬಹಿರಂಗಪಡಿಸಿತು.

ಎರಡನೇ ದಿನದಂದು ರಿಯಾ ಚಕ್ರವರ್ತಿ “ನಾನು ಏನೇ ಮಾಡಿದರೂ ಸುಶಾಂತ್‌ಗಾಗಿ ಮಾಡಿದ್ದೇನೆ”  ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದರು.

ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ರಜಪೂತ್ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಗಾಂಜಾ ಖರೀದಿಸಿರುವ ಬಗ್ಗೆ ಪುರಾವೆಗಳಿವೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹೇಳಿಕೊಂಡಿದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ರಿಯಾ ಮತ್ತು ಶೋಯಿಕ್ ಚಕ್ರವರ್ತಿಯವರ ಆದೇಶದ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ಸಿಬ್ಬಂದಿ ದೀಪೇಶ್ ಸಾವಂತ್ ಅವರು ಮಾರ್ಚ್ ಮತ್ತು ಜೂನ್ ನಡುವೆ ಒಟ್ಟು 165 ಗ್ರಾಂ ಗಾಂಜಾವನ್ನು ಸಂಗ್ರಹಿಸಿ ನೀಡಿದ್ದಾರೆ ಎಂದು ಬ್ಯೂರೋ ಹೇಳಿಕೊಂಡಿದೆ. ಜೊತೆಗೆ ಸೆಪ್ಟೆಂಬರ್ 2018 ರಿಂದ ಸುಶಾಂತ್ ಸಿಂಗ್ ರಜಪೂತ್ ಅವರು ಗಾಂಜಾ ಸೇದುವುದನ್ನು ನೋಡಿದ್ದೇನೆ ಎಂದು ಸಾವಂತ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ನಟಿ ರಿಯಾ ಮೇಲೆ ದೂರು ನೀಡಿತ್ತು. ಸುಶಾಂತ್‌ನನ್ನು  ಹಣಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ, ಮಾನಸಿಕವಾಗಿ ಕಿರುಕುಳ ನೀಡಿ ಮತ್ತು ಅವರ ಸಾವಿನಲ್ಲಿ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ರಿಯಾ ಚಕ್ರವರ್ತಿಯನ್ನು ಮೂರು ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.


ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...