Homeಕರ್ನಾಟಕಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಯೂರಿಯಾ ಕೊರತೆ ನೀಗಿಸಿ: ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ರೈತರ ಬೇಡಿಕೆಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ತರಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರಿಗೆ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಹಾಗಾಗಿ ರೈತರ ಸಂಕಷ್ಟ ಪರಿಹರಿಸಿ ಎಂದು ಸಿಎಂ ಯಡಿಯೂರಪ್ಪನವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಯೂರಿಯಾ ತರಿಸಿಕೊಂಡು, ಅಗತ್ಯಕ್ಕೆ ಅನುಗುಣವಾಗಿ ರೈತರಿಗೆ ವಿತರಿಸಲು ಆಗ್ರಹಿಸಿದ್ದಾರೆ.

ಮುಂಗಾರು ಅವಧಿಗೆ ಸಾಮಾನ್ಯವಾಗಿ 8.50 ಲಕ್ಷ ಟನ್‍ ಯೂರಿಯಾ ಅವಶ್ಯಕತೆ ಇತ್ತು. ಆದರೆ, ವೈಬ್‍ಸೈಟ್‍ನಲ್ಲಿರುವ ಮಾಹಿತಿ ಪ್ರಕಾರ ಏ. 1ರಿಂದ ಸೆ.6ರವರೆಗೆ 8,95,221 ಟನ್‍ ಯೂರಿಯಾ ವಿತರಿಸಲಾಗಿದೆ. ಇನ್ನೂ 1,88,996 ಟನ್‍ ಲಭ್ಯವಿದೆ ಎಂದು ಹೇಳಲಾಗುತ್ತಿದೆ. ಆದರೂ ಜನ ಯೂರಿಯಾಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಕಾಳಸಂತೆಕೋರರು ಅಕ್ರಮವಾಗಿ ದಾಸ್ತಾನು ಮಾಡಿರಬೇಕು, ಇಲ್ಲವೇ ನಿಮ್ಮ ವೆಬ್‍ಸೈಟ್‍ನ ಅಂಕಿಅಂಶಗಳು ತಪ್ಪಿರಬೇಕು ಅಥವಾ ಜನರ ಬೇಡಿಕೆ ಹೆಚ್ಚಾಗಿರಬೇಕು’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಲಾಕ್‌‌ಡೌನ್ ಕಾರಣ ಜನರು ಗ್ರಾಮಾಂತರ ಪ್ರದೇಶಕ್ಕೆ ವಲಸೆ ಹೋದರು. ಹೀಗಾಗಿ, ಸಹಜವಾಗಿಯೇ ಕೃಷಿ ಕ್ಷೇತ್ರದ ಮೇಲೆ ಒತ್ತು ಬೀಳಲಾರಂಭಿಸಿತು. ಈ ವಿಚಾರವನ್ನು ಮನಗಂಡು ನಾವು ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಕ್ಕೆ ಮಾಡಿದ ಮನವಿ ಪತ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರ ದಾಸ್ತಾನು ಮಾಡಿಕೊಂಡು, ಪೂರೈಸುವಂತೆ ಆಗ್ರಹಿಸಿದ್ದೆವು. ಆದರೂ ಸರ್ಕಾರ ನಮ್ಮ ಮಾತನ್ನು ನಿರ್ಲಕ್ಷಿಸಿತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಈ ಬಾರಿ ಹೆಚ್ಚುವರಿ ಭೂ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಹಾಗಾಗಿ  ಸರ್ಕಾರ ನಿರ್ಲಕ್ಷ್ಯ ತೋರಿದರೆ ರೈತರು ಪರದಾಡಬೇಕಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಜೊತೆಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು ಇಬ್ಬರು ರೈತರು ಬಲಿಯಾಗಿದ್ದನ್ನು ಪತ್ರದಲ್ಲಿ ಉಲ್ಲೇಖಿಸಿ, ಗೊಬ್ಬರದಂಥ ಮಹತ್ವವಾದ ವಿಷಯವನ್ನು ನಿಭಾಯಿಸಲಾಗದೆ ಸರ್ಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ’ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ರೈತರ ಕಾಳಜಿಯಿಂದಾಗಿ ಬೆಳೆಗಳು ಚೆನ್ನಾಗಿರುವುದರಿಂದ ಬೆಲೆ ಕುಸಿತದ ಸಮಸ್ಯೆ ಮುಂದಿನ ದಿನಗಳಲ್ಲಿ ಖಂಡಿತವಾಗಿ ಉದ್ಭವಿಸುತ್ತದೆ. ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆಯೂ ಇದೆ’ ಎಂದು ಪತ್ರದಲ್ಲಿ ಅವರು ವಿವರಿಸಿದ್ದಾರೆ.

ಸದ್ಯ ರೈತರ ಬೇಡಿಕೆಗೆ ಅನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಯೂರಿಯಾ ತರಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...