Homeಮುಖಪುಟಕಾರ್‌ ಪಾರ್ಕಿಂಗ್ ಮಾಡೋಕೆ ಕಷ್ಟ ಕಷ್ಟಪಡ್ತಿದ್ದೀರಾ..ಇಲ್ಲೋಮ್ಮೆ ನೋಡಿ..!

ಕಾರ್‌ ಪಾರ್ಕಿಂಗ್ ಮಾಡೋಕೆ ಕಷ್ಟ ಕಷ್ಟಪಡ್ತಿದ್ದೀರಾ..ಇಲ್ಲೋಮ್ಮೆ ನೋಡಿ..!

ಪಾರ್ಕಿಂಗ್ ವಿಡಿಯೋ ಮಾಡಿರುವುದು, ಚಾಲಕ ಬಿಜು ಪತ್ನಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ, ಒಂದು ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.

- Advertisement -
- Advertisement -

ಸಾಮಾನ್ಯವಾಗಿ ದೊಡ್ಡ ಕಾರ್‌ಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸೋದೆ ಕಷ್ಟ. ಅದರಲ್ಲೂ ಕಿರಿದಾದ ಸ್ಥಳ ಅಂದ್ರೆ ಇನ್ನೂ ಕಷ್ಟ. ಆದರೆ ಇಲ್ಲೊಬ್ಬ ವ್ಯಕ್ತಿ ಪಾರ್ಕಿಂಗ್ ಕೌಶಲ್ಯದಿಂದ ಜನರ ಮನಸ್ಸು ಗೆದ್ದಿದ್ದಾನೆ. ಇತನ ಕೌಶಲ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ ಮತ್ತು ಸಾವಿರಾರು ವೀಕ್ಷಕರನ್ನು ಆಕರ್ಷಿಸಿದೆ.

ಕಾರು ಚಾಲಕನನ್ನು ಕೇರಳದ ಮನಂತವಾಡಿ ಮೂಲದ ಪಿಜೆ ಬಿಜು ಎಂದು ಗುರುತಿಸಲಾಗಿದೆ. ವಿಡಿಯೋ ಮಾಡಿರುವುದು, ಚಾಲಕ ಬಿಜು ಪತ್ನಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ, ಒಂದು ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.

ವೀಡಿಯೊದಲ್ಲಿ, ಅವರು ಬಿಳಿ ಇನ್ನೋವಾವನ್ನು ಕಿರಿದಾದ ಸ್ಥಳದಲ್ಲಿ ನಿಲ್ಲಿಸುವಲ್ಲಿ ಯಶಸ್ವಿಯಾಗುತ್ತಾರೆ. ಜೊತೆಗೆ ಅಲ್ಲಿಂದ ಅಷ್ಟು ಕಿರಿದಾದ ಸ್ಥಳದಿಂದ ಕಾರನ್ನು ಹೊರ ತೆಗೆದು ಚಾಕಚಕ್ಯತೆ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವ್ಯಕ್ತಿ “ಆ ಮಲಯಾಳಿ ಚಾಲಕ ನಿಮಗಾಗಿ, ಅವರ ಕೌಶಲ್ಯ ಮತ್ತು ಆತ್ಮವಿಶ್ವಾಸಕ್ಕೆ ನಮಸ್ಕರಿಸಿ!” ಎಂದಿದ್ದಾರೆ.

ಹಲವು ಮಂದಿ ಟ್ವಿಟ್ಟರ್ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋವನ್ನು ಹಂಚಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಚಾಲಕ ಬಿಜು “ಇದು ನನ್ನ ಸ್ನೇಹಿತನ ಕಾರು ಮತ್ತು ಅದರ ಮೇಲೆ ಕೆಲವು ಬಣ್ಣದ ಕೆಲಸಗಳನ್ನು ಮಾಡಬೇಕಾಗಿತ್ತು. ಆದ್ದರಿಂದ ಭಾನುವಾರ ನಾನು ಅದನ್ನು ಸರಿಪಡಿಸಲು ಕರೆದೊಯ್ಯಿದ್ದೆ. ನನ್ನ ಹೆಂಡತಿ ನಾನು ಪಾರ್ಕಿಂಗ್ ಮಾಡುವ ವಿಡಿಯೋವನ್ನು ಚಿತ್ರಿಕರಿಸಿದ್ದಾರೆ.  ವೀಡಿಯೊವನ್ನು ಅವಳು ಮಾಡಿದ್ದಾಳೆಂದು ನನಗೆ ತಿಳಿದಿರಲಿಲ್ಲ. ಅದು ವೈರಲ್ ಆದಾಗ ಮಾತ್ರ ನಾನು ಅದರ ಬಗ್ಗೆ ತಿಳಿದುಕೊಂಡೆ” ಎಂದು ಬಿಜು ಸ್ಥಳೀಯ ಚಾನೆಲ್‌ಗೆ ತಿಳಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ನಾನು ಅನೇಕ ವರ್ಷಗಳಿಂದ ಎರ್ನಾಕುಲಂ – ಕಣ್ಣೂರು ಮಾರ್ಗದಲ್ಲಿ ಬಸ್ಸುಗಳನ್ನು ಓಡಿಸುತ್ತಿದ್ದೇನೆ. ಆ ವಾಹನಗಳು 12.5 ಮೀಟರ್ ಉದ್ದವಿರುತ್ತವೆ. ಆದ್ದರಿಂದ ಇನ್ನೋವಾ ಉದ್ದವು ನನಗೆ ಎಂದಿಗೂ ಹೆಚ್ಚು ತೊಂದರೆಯಾಗಿಲ್ಲ. ಯಾವುದೇ ಕಾರು ಇರಲಿ, ನಮ್ಮ ವಾಹನದ ಗಾತ್ರದ ಮಾನಸಿಕ ಚಿತ್ರ ನಮ್ಮಲ್ಲಿ ಮೂಡಿರುತ್ತದೆ” ಎಂದು ಬಿಜು ಹೇಳುತ್ತಾರೆ.


ಇದನ್ನೂ ಓದಿ: ಸಂಸತ್ತಿನ ಮಾನ್ಸೂನ್ ಅಧಿವೇಶನ: ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...